ನಿವೃತ್ತ ಸಿಎಸ್‌ ಪಾಟಿಲ್ ನೇತೃತ್ವದಲ್ಲಿ Brand Bengaluru ಗೆ ತಜ್ಞರ ಸಮಿತಿ ರಚನೆ

Published : Jul 22, 2023, 04:55 AM IST
ನಿವೃತ್ತ ಸಿಎಸ್‌  ಪಾಟಿಲ್ ನೇತೃತ್ವದಲ್ಲಿ Brand Bengaluru ಗೆ ತಜ್ಞರ ಸಮಿತಿ ರಚನೆ

ಸಾರಾಂಶ

  ‘ಬ್ರ್ಯಾಂಡ್‌ ಬೆಂಗಳೂರು’ ಮತ್ತು ಬೆಂಗಳೂರು ನಗರವನ್ನು ಜಾಗತಿಕ ನಗರವನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವೂ ಅಧ್ಯಯನ ನಡೆಸಿ ವರದಿ ನೀಡುವುದಕ್ಕೆ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್‌.ಪಾಟೀಲ್‌ ನೇತೃತ್ವದಲ್ಲಿ ನಾಲ್ವರ ತಜ್ಞರ ಸಮಿತಿ ರಚಿಸಿ ಆದೇಶಿಸಿದೆ.

ಬೆಂಗಳೂರು (ಜು.22) :  ‘ಬ್ರ್ಯಾಂಡ್‌ ಬೆಂಗಳೂರು’ ಮತ್ತು ಬೆಂಗಳೂರು ನಗರವನ್ನು ಜಾಗತಿಕ ನಗರವನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವೂ ಅಧ್ಯಯನ ನಡೆಸಿ ವರದಿ ನೀಡುವುದಕ್ಕೆ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್‌.ಪಾಟೀಲ್‌ ನೇತೃತ್ವದಲ್ಲಿ ನಾಲ್ವರ ತಜ್ಞರ ಸಮಿತಿ ರಚಿಸಿ ಆದೇಶಿಸಿದೆ.

ತಜ್ಞರ ಸಮಿತಿಯ ಅಧ್ಯಕ್ಷರಾಗಿ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್‌.ಪಾಟೀಲ್‌, ಸದಸ್ಯರಾಗಿ ನಿವೃತ್ತ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ, ರಾಜ್ಯಸಭಾ ಮಾಜಿ ಸದಸ್ಯ ಎಂ.ವಿ.ರಾಜೀವ್‌ ಗೌಡ ಹಾಗೂ ಬೆಂಗಳೂರು ಇಂಟರ್‌ ನ್ಯಾಷನಲ್‌ ಸೆಂಟರ್‌ ನಿರ್ದೇಶಕ ರವಿಚಂದರ್‌ ಅವರನ್ನು ನೇಮಿಸಲಾಗಿದೆ.

 

Brand Bangalore: ಮನೆ ಬಾಗಿಲಿಗೆ ಪಾಲಿಕೆ, ಬಿಡಿಎ ಆಸ್ತಿ ದಾಖಲೆ!

ಸಮಿತಿಯು ಬಿಬಿಎಂಪಿ, ಬಿಡಿಎ, ಬೆಂಗಳೂರು ನಗರ ಜಲಮಂಡಳಿ, ಬಿಎಂಆರ್‌ಡಿಎ, ನಗರ ಭೂ ಸಾರಿಗೆ ನಿರ್ದೇಶನಾಲಯ (ಡಲ್ಟ್‌), ಬಿಎಂಎಲ್‌ಟಿಎ, ಬಿಎಂಆರ್‌ಸಿಎಲ್‌(ಮೆಟ್ರೋ), ಬಿಎಂಟಿಸಿ, ಪೊಲೀಸ್‌, ಬಿಎಂಟಿಎಫ್‌, ಅಗ್ನಿ ಶಾಮಕ ದಳ, ಬೆಸ್ಕಾಂ, ಸಬ್‌ಅರ್ಬನ್‌ ರೈಲುಗಳನ​ು​್ನ ಸಮನ್ವಯಿಸಿಕೊಳ್ಳ​ಬೇಕು. ನಗರದ ಟ್ರಾಫಿಕ್‌ ನಿರ್ವಹಣೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ, ಪ್ರವಾಹಗಳ ಸಮರ್ಪಕ ನಿರ್ವಹಣೆ, ಭದ್ರತೆ ಸೇರಿದಂತೆ ಉತ್ತಮ ಆಡಳಿತಕ್ಕಾಗಿ ಸೂಕ್ತ ಸಾಂಸ್ಥಿಕ ಕಾರ್ಯವಿಧಾನಗಳನ್ನು ಸೂಚಿಸ​ಬೇಕು. ಸಮರ್ಥನೀಯ ಮತ್ತು ಸುಸ್ಥಿರ ಸ್ಥಿತಿ ಸ್ಥಾಪಕ ನಗರವನ್ನು ರಚಿಸಲು ಯೋಜಿತ ಮತ್ತು ವೈಜ್ಞಾನಿಕವಾಗಿ ಸವಾಲುಗಳನ್ನು ಎದುರಿಸಲು ಅಗತ್ಯ ಕ್ರಮ ಮತ್ತು ಶಿಫಾರಸುಗಳನ್ನು ಒದಗಿಸಲು ಸರ್ಕಾರ ಸಮಿತಿ ರಚನೆ ಮಾಡಿದೆ.

ಈ ಮೂಲಕ ಬ್ರ್ಯಾಂಡ್‌ ಬೆಂಗಳೂರನ್ನು ಬಲಗೊಳಿಸುವುದು, ಮೆಟ್ರೋಪಾಲಿಟನ್‌ ಯೋಜನಾ ಸಮಿತಿ ಸ್ಥಾಪನೆ ಸೇರಿದಂತೆ 74ನೇ ತಿ​ದ್ದುಪಡಿಗೆ ಅನುಗುಣವಾಗಿ ನಾಗರಿಕರ ಕೇಂದ್ರಿತವಾಗಿ ಉತ್ತಮ ಸೇವೆಗಳನ್ನು ನೀಡುವುದಕ್ಕೆ ಸೂಕ್ತ ಶಿಫಾರಸಿಗೆ ತಜ್ಞರ ಸಮಿತಿಗೆ ಸೂಚಿಸಲಾಗಿದೆ. ತಜ್ಞರ ಸಮಿತಿಗೆ ಬಿಬಿಎಂಪಿಯ ಆಡಳಿತ ವಿಭಾಗದ ವಿಶೇಷ ಆಯುಕ್ತರು ಅಗತ್ಯ ಮಾಹಿತಿ ಒದಗಿಸುವುದು ಮತ್ತು ಸಭೆಗಳ ಬಗ್ಗೆ ಸಮನ್ವಯ ಕಾರ್ಯನಿರ್ವಹಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಬ್ರ್ಯಾಂಡ್‌ ಬೆಂಗಳೂರು’ ಅಭಿಯಾನ: 70 ಸಾವಿರಕ್ಕೂ ಅಧಿಕ ಜನರ ಸಲಹೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ