ಹೊಸ ದಾಗಿ 22 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ

Suvarna News   | Asianet News
Published : Aug 17, 2021, 01:42 PM IST
ಹೊಸ ದಾಗಿ 22 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ

ಸಾರಾಂಶ

ಹೊಸದಾಗಿ 22 ತಾಲೂಕು ಪ್ರವಾಹ ಪೀಡಿತವೆಂದು ಘೋಷಣೆ ಈ ಹಿಂದೆ 61 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ 

ಬೆಂಗಳೂರು (ಆ.17): ರಾಜ್ಯದಲ್ಲಿ  ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿದ್ದ 61 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ ಮಾಡಿದ್ದೆವು.  ಮಳೆ‌ ಹೆಚ್ಚಾಗಿ ಮತ್ತೆ ಕೆಲವೆಡೆ ಹಾನಿಯಾಗಿದೆ. ಹೊಸದಾಗಿ 22 ತಾಲೂಕು ಪ್ರವಾಹ ಪೀಡಿತವೆಂದು ಘೋಷಣೆ ಮಾಡಿದ್ದೇವೆ ಎಂದು  ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. 

ಬೆಂಗಳೂರಿನಲ್ಲಿಂದು ಮಾತನಾಡಿದ ಸಚಿವ ಆರ್ ಅಶೋಕ್ ಬೆಳಗಾವಿ, ಚಿಕ್ಕಮಗಳೂರು, ಕಡೂರು,ತರಿಕೆರೆ, ಸೂಪ, ಬಬಲೇಶ್ವರ, ಕೊಲ್ಹಾರ, ಮುದ್ದೆಬಿಹಾಳ, ಮೂಡಿಗೆರೆ ಹೊಸನಗರಗಳನ್ನ ಪ್ರವಾಹ ಪೀಡಿತವೆಂದು ಘೋಷಿಸಿದ್ದೇವೆ ಎಂದರು. 

ರಾಜ್ಯದ 13 ಜಿಲ್ಲೆಗಳ 61 ತಾಲೂಕು ಅತಿವೃಷ್ಟಿ, ಪ್ರವಾಹ ಪೀಡಿತ: ಸರ್ಕಾರ

ಬೆಂಗಳೂರಿನಲ್ಲೂ ಕೆಲ ಪ್ರದೇಶಗಳನ್ನು ಐಡೆಂಟಿಫೈ ಮಾಡಿದ್ದೇವೆ. 50 ಕ್ಕೂ ಹೆಚ್ಚು ರಸ್ತೆಗಳಲ್ಲಿ ನೀರು ನಿಲ್ಲುತ್ತಿದೆ. ಅಧಿಕಾರಿಗಳಿಗೆ ಇದರ ಬಗ್ಗೆ ಸೂಚಿಸಿದ್ದೇನೆ. ನೀರು ನಿಲ್ಲುವ ಡ್ರೈನ್ ಬಗ್ಗೆ ಸೂಚಿಸಿದ್ದೇನೆ. ಜೊತೆಗೆ ಸಮಸ್ಯೆ ಪರಿಹಾರಕ್ಕೂ ತಿಳಿಸಲಾಗಿದೆ.  ನೀರು ನಿಲ್ಲುವ ಜಾಗಗಳ ಬಗ್ಗೆ ಮಾಹಿತಿ ಕೇಳಿದ್ದೇನೆ ಎಂದರು. 

ಅಲ್ಲದೇ ಈ ರೀತಿ ಮಳೆಯಿಂದ ಹಾನಿಯಾಗುವ ಪ್ರದೇಶಗಳಲ್ಲಿ ತುರ್ತಾಗಿ ಕಾಮಗಾರಿ ಮುಗಿಸುವ ಬಗ್ಗೆಯೂ ತಿಳಿಸಿದ್ದೇನೆ ಎಂದು ಸಚಿವ ಆರ್ ಅಶೋಕ್ ಹೇಳಿದರು.  

ಪ್ರತಿಭಟಿಸಿದ್ದ ಶಾಸಕ :  ಮೂಡಿಗೆರೆ ಕ್ಷೇತ್ರ ಕೂಡಾ ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಮೂಡಿಗೆರೆ ಕ್ಷೇತ್ರ ವನ್ನು ಪ್ರವಾಹ ಪೀಡಿತ ಪ್ರದೇಶವೆಂದು ಘೋಷಿಸಲು ಇಲ್ಲಿನ ಶಾಸಕ ಎಂಪಿ ಕುಮಾರಸ್ವಾಮಿ  ಪ್ರತಿಭಟನೆ ನಡೆಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Sharath R Ashok scuba diving: ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ
Karnataka By-Election Results 2026 LIVE: Sharath R Ashok scuba diving - ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ