ರೀ ಮಿನಿಸ್ಟರ್ ಜವಾಬ್ ಕೊಡ್ರಿ: ರೈತನ ಧ್ವನಿಗೆ ತಬ್ಬಿಬ್ಬಾದ ಸಚಿವ!

Published : Jan 12, 2019, 07:15 PM IST
ರೀ ಮಿನಿಸ್ಟರ್ ಜವಾಬ್ ಕೊಡ್ರಿ: ರೈತನ ಧ್ವನಿಗೆ ತಬ್ಬಿಬ್ಬಾದ ಸಚಿವ!

ಸಾರಾಂಶ

ವಿಜಯಪುರದಲ್ಲಿ ನಡೆದ ಸಾವಯವ ಮತ್ತು ಸಿರಿಧಾನ್ಯ ಮೇಳ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತನೋರ್ವ ತೋಟಗಾರಿಕೆ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.

ವಿಜಯಪುರ(ಜ.12): ಇಲ್ಲಿ ನಡೆದ ಸಾವಯವ ಮತ್ತು ಸಿರಿಧಾನ್ಯ ಮೇಳ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತನೋರ್ವ ತೋಟಗಾರಿಕೆ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.

ಸಚಿವ ಎಂ. ಸಿ. ಮನಗೂಳಿ ಭಾಷಣ ಮುಕ್ತಾಯದ ವೇಳೆ ಮಧ್ಯ ಪ್ರವೇಶಿಸಿದ ನಾಗಠಾಣದ ರೈತ ಯಾವ ತಾಲೂಕಿನಲ್ಲಿ ಜಾನುವಾರುಗಳಿಗೆ ಮೇವು ಕೊಟ್ಟಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾನೆ.

ನೀವು ಹೀಗೆ ಹೇಳಿದರೆ ರೈತರು ಸತ್ತು ಹೋಗುತ್ತಾರೆ ಎಂದ ರೈತ, ಸಚಿವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಉತ್ತರ ನೀಡುವವರೆಗೂ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ.

"

ರೖತನ ಆಕ್ರೋಶ ಕಂಡು ತಬ್ಬಿಬ್ಬಾದ ಸಚಿವರು, ಮೂರು ದಿನಗಳ ಹಿಂದೆ ಸಚಿವ ಸಂಪುಟ ಉಪಸಮಿತಿ ಬರ ಅಧ್ಯಯನ ನಡೆಸಿದೆ. ಸಭೆ ಮಾಡಿ ಮೇವು ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಉತ್ತರ ನೀಡಿದರು. 

ತುಂಬಿದ ಸಮಾವೇಶದಲ್ಲಿ ರೈತನ ಪ್ರಶ್ನೆಯಿಂದ ಕೆಲಹೊತ್ತು ಗೊಂದಲದ ವಾತಾವರಣ ನಿಮಾರ್ಮಾಣವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ಜನ್ಮದಿನದಂದೇ ಹೆಚ್‌ಡಿಕೆ ತೋಳಿಗೆ ಬಂತು ದೈವಿ ಶಕ್ತಿ! 'ಶಿವ ತಾಯತ' ಕಟ್ಟಿದ ಬಿಜೆಪಿ ಕಾರ್ಯಕರ್ತರು!