ಬರಗಾಲದಲ್ಲೂ ಬೆಳೆದ ಜೋಳ ಮಾರಿ ರಾಮ ಮಂದಿರಕ್ಕೆ ₹91000 ದೇಣಿಗೆ ನೀಡಿದ ರೈತ!

Published : Jan 24, 2024, 07:26 AM IST
ಬರಗಾಲದಲ್ಲೂ ಬೆಳೆದ ಜೋಳ ಮಾರಿ ರಾಮ ಮಂದಿರಕ್ಕೆ ₹91000 ದೇಣಿಗೆ ನೀಡಿದ ರೈತ!

ಸಾರಾಂಶ

 ಸಿಂಧನೂರಿನ ಗೋಮರ್ಸಿ ಗ್ರಾಮದ ಸಣ್ಣ ಕರಿಯಪ್ಪ ಎಂಬ ರೈತ, ತೀವ್ರ ಬರಗಾಲದಲ್ಲೂ ಬೆಳೆದ ಜೋಳವನ್ನು ಮಾರಾಟ ಮಾಡಿ ಅದರಿಂದ ಬಂದ 91000 ರು. ಹಣವನ್ನು ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ನೀಡಿದ್ದಾರೆ. 

ರಾಯಚೂರು (ಜ.24) : ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕೋಟ್ಯಂತರ ರಾಮಭಕ್ತರ ಭಕ್ತಿಯ ಕಾಣಿಕೆ ಇದೆ. ದೇಶದ್ಯಾಂತ ಹಲವು ರೀತಿಯ ಕಾಣಿಕೆ ನೀಡಿರುವ ಭಕ್ತರು. ಹಣ ಇದ್ದವರು ಹಣ, ಹಣವಿಲ್ಲದ ಬಡವರು ಬೆಳೆದ ಬೆಳೆಯನ್ನೇ ಮಾರಾಟ ಮಾಡಿ ಹಣ ನೀಡಿದ್ದಾರೆ. ಅಯೋದ್ಯೆ ಮಂದಿರದ ಮುಂದೆ ಭಕ್ತರ ಪಾದರಕ್ಷೆ ಕಾಯುವ ವೃದ್ಧೆಯೊಬ್ಬಳು ಭಕ್ತರು ಕೊಟ್ಟ ಹಣವನ್ನು ಕೂಡಿಟ್ಟಿದ್ದ ಲಕ್ಷಾಂತರ ಹಣವನ್ನ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನೀಡಿ ಗಮನ ಸೆಳೆದಿದ್ದಳು. ಇಲ್ಲೊಬ್ಬ ರೈತನು ಅದೇ ರೀತಿಯಲ್ಲಿ ಗಮನ ಸೆಳೆದಿದ್ದಾನೆ.. ಉತ್ತರ ಕರ್ನಾಟಕ ಅದರಲ್ಲೂ ರಾಯಚೂರು ಈ ಬಾರಿ ತೀವ್ರ ಬರಗಾಲ ಬಂದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ಬರದ ಪರಿಸ್ಥಿತಿಯಲ್ಲೂ ಬೆಳೆದ ಬೆಳೆ ಮಾರಾಟ ಮಾಡಿ ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ನೀಡಿ ಭಕ್ತ ಮೆರೆದಿದ್ದಾನೆ.

 ಸಿಂಧನೂರಿನ ಗೋಮರ್ಸಿ ಗ್ರಾಮದ ಸಣ್ಣ ಕರಿಯಪ್ಪ ಎಂಬ ರೈತ, ತೀವ್ರ ಬರಗಾಲದಲ್ಲೂ ಬೆಳೆದ ಜೋಳವನ್ನು ಮಾರಾಟ ಮಾಡಿ ಅದರಿಂದ ಬಂದ 91000 ರು. ಹಣವನ್ನು ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ನೀಡಿದ್ದಾರೆ. 

ಅಯೋಧ್ಯೆಯಲ್ಲಿ ಪೇಜಾವರ ಶ್ರೀಗಳಿಂದ ಮಂಡಲೋತ್ಸವ

ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆಯಿಂದ 120 ಚೀಲ ಬದಲಾಗಿ ಕೇವಲ 80 ಚೀಲ ಜೋಳ ಇಳುವರಿ ಬಂದಿತ್ತು. ತಮ್ಮ ಖರ್ಚಿಗಾಗಿ 30 ಚೀಲ ಉಳಿಸಿಕೊಂಡು, ಉಳಿದ 50 ಚೀಲ ಜೋಳವನ್ನು ಮಾರಾಟ ಮಾಡಿ, ಅದರಿಂದ ಬಂದ 91,870 ರು.ಗಳನ್ನು ಆರ್‌ಟಿಜಿಎಸ್‌ ಮೂಲಕ ಶ್ರೀರಾಮಜನ್ಮಭೂಮಿ ಟ್ರಸ್ಟ್‌ಗೆ ಮಂಗಳವಾರ ಪಾವತಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!