ಬಜೆಟ್‌ಗೂ ಮುನ್ನವೇ ರೈತರಿಗೆ ಗುಡ್ ನ್ಯೂಸ್: ಸಾಲದ ಮೇಲಿನ ಬಡ್ಡಿ ಮನ್ನಾ..!

Published : Feb 15, 2020, 07:48 PM IST
ಬಜೆಟ್‌ಗೂ ಮುನ್ನವೇ ರೈತರಿಗೆ ಗುಡ್ ನ್ಯೂಸ್: ಸಾಲದ ಮೇಲಿನ ಬಡ್ಡಿ ಮನ್ನಾ..!

ಸಾರಾಂಶ

ಇದೇ ಮಾರ್ಚ್ 5 ರಂದು ಕರ್ನಾಟಕ ಬಜೆಟ್‌ ಮಂಡನೆಯಾಗಲಿದ್ದು, ಇದಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್‌ ಯಡಿಯೂರಪ್ಪ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ನಿರತರಾಗಿದ್ದಾರೆ. ಇದರ ಮಧ್ಯೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಮೂಲಕ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಬೆಂಗಳೂರು, [ಫೆ.15]:  ಕೃಷಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಯಡಿಯೂರಪ್ಪ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಸಹಕಾರ ಸಂಸ್ಥೆಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕ್ ಗಳು, ಲ್ಯಾಂಪ್ಸ್ ಸೊಸೈಟಿಗಳು ಮತ್ತು ಪಿಕಾರ್ಡ್ ಬ್ಯಾಂಕ್ ಗಳಿಂದ ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಆಗಲಿದೆ.

ಟ್ರಂಪ್‌ಗಾಗಿ ಖರ್ಚು 100 ಕೋಟಿ, ಒಲಿಂಪಿಕ್ಸ್‌ಗೆ ಕಂಬಳದ ಜಾಕಿ? ಫೆ.15ರ ಟಾಪ್ 10 ಸುದ್ದಿ!

ಜನವರಿ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಸರ್ಕಾರ ತಿಳಿಸಿದೆ. 

ರೈತರು ಸಾಲ ಮರುಪಾತಿಸಲು ರಾಜ್ಯ ಸರ್ಕಾರ ಇದೇ ಮಾರ್ಚ್ 31 ಗಡುವು ನೀಡಿದ್ದು, ಅಷ್ಟರೊಳಗೆ ರೈತರು ಸಾಲ ಕಟ್ಟಿದ್ರೆ, ಆ ಸಾಲದ ಮೇಲಿನ ಬಡ್ಡಿ ಕಟ್ಟುವಂತಿಲ್ಲ.

ಅಂದಾಜು 92525 ರೈತರ ಸುಸ್ತಿ ಸಾಲ, 56011.03  ಲಕ್ಷ ರೂ. ಗಳ ಮಧ್ಯಮಾವಧಿ ಮತ್ತು  ದೀರ್ಘಾವಧಿ ಕೃಷಿ ಸಾಲ ಇದ್ದು, 46614.67  ಲಕ್ಷ ರೂ. ಬಡ್ಡಿ ಮನ್ನಾ ಆಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!