ಕರ್ನಾಟಕ ಬಂದ್ ಫಿಕ್ಸ್‌: 32 ಸಂಘಟನೆಗಳಿಂದ ಲಾಕ್‌

Published : Sep 23, 2020, 05:26 PM ISTUpdated : Sep 23, 2020, 06:54 PM IST
ಕರ್ನಾಟಕ ಬಂದ್ ಫಿಕ್ಸ್‌: 32 ಸಂಘಟನೆಗಳಿಂದ ಲಾಕ್‌

ಸಾರಾಂಶ

ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ವಿರೋಧಿಸಿ ರೈತರು ಪ್ರತಿಭಟನೆಗಿಳಿದಿದ್ದಾರೆ, ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಕರ್ನಾಟಕ ಬಂದ್‌ ಮಾಡಲು ರೈತ ಪರ ಸಂಘಟನೆಗಳು ತೀರ್ಮಾನಿಸಿವೆ.

ಬೆಂಗಳೂರು, (ಸೆ.23): ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ವಿಧೇಯಕಗಳನ್ನು ವಿರೋಧಿಸಿ, ರಾಜ್ಯದ ವಿವಿಧ ರೈತಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಗಳು ಇದೇ ಸೆ.28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. 

"

ಊಬರ್ ಚಾಲಕರ ಸಂಘ, ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆ ಸೇರಿದಂತೆ ಒಟ್ಟ 32 ಸಂಘಟನೆಗಳು ಈ ಬಂದ್‌ಗೆ ಬೆಂಬಲ ಸೂಚಿಸಿವೆ.

ಈ ಕುರಿತಂತೆ ಇಂದು (ಬುಧವಾರ) ಸುದ್ದಿಗಾರಿಗೆ ಮಾಡಿದ ರೈತ ಸಂಘದ ಅಧ್ಯಕ್ಷ ಕೋಡಿ ಹಳ್ಳಿ ಚಂದ್ರಶೇಖರ್, ಸೆ.25ರಂದು ಕರ್ನಾಟಕ ಬಂದ್ ನಡೆಸುವ ಬದಲಾಗಿ ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

APMC ಕಾಯ್ದೆಯಿಂದ ರೈತರಿಗೆ ಅನುಕೂಲದ ಬಗ್ಗೆ ವಿವರಿಸಿದ ಸಚಿವ ಸೋಮಶೇಖರ್

ಎಪಿಎಪಿ ತಿದ್ದುಪಡಿ ಕಾಯ್ದೆ ರೈತರಿಗೆ ಪೂರಕವಾದಂತ ಕಾಯ್ದೆ ಅಲ್ಲ. ಕಾರ್ಪೋರೇಟ್ ಕಂಪನಿಗಳಿಗೆ ಅವಕಾಶ ಮಾಡಿಕೊಡುವಂತ ಕಾಯ್ದೆಯಾಗಿದೆ. ಇವರು ಕಾರ್ಪೋರೇಟ್ ಕಂಪನಿಗಳ ಪರವೇ ಹೊರತು, ಜನಸಾಮಾನ್ಯ ರೈತರ ಪರವಾದವರಲ್ಲ ಎಂದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಭೂಸುಧಾರಣೆ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ವಿರೋಧಿ ಕಳೆದ ಎರಡ್ಮೂರು ದಿನಗಳಿಂದ ರೈತ ಪರ ಸಂಘಟನೆಗಳು ಬೆಂಗಳುರು ಸೇರಿದಂತೆ ರಾಜ್ಯದ ವಿವಿದೆಡೆ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿವೆ.

ಈ ಮೊದಲ ಸೆ.25 ಕರ್ನಾಟಕ ಬಂದ್ ಮಾಡುವುದಾಗಿ ರೈತ ಸಂಘಟನೆಗಳು ಹೇಳಿದ್ದವು. ಆದ್ರೆ, ಇದೀಗ 25ರ ಬದಲಾಗಿ 28ಕ್ಕೆ ಬಮದ್‌ಗೆ ಕರೆ ನೀಡಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!