ರೈತರೇ ಬೇಸಿಗೆ ಬೆಳೆ ಬೆಳೆಯಬೇಡಿ: ಸಚಿವ ಚಲುವರಾಯಸ್ವಾಮಿ ಮನವಿ

Published : Dec 23, 2023, 06:43 AM IST
ರೈತರೇ ಬೇಸಿಗೆ ಬೆಳೆ ಬೆಳೆಯಬೇಡಿ: ಸಚಿವ ಚಲುವರಾಯಸ್ವಾಮಿ ಮನವಿ

ಸಾರಾಂಶ

ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿರುವುದರಿಂದ ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ಬೇಸಿಗೆ ಬೆಳೆ ಬೆಳೆಯಲು ಮುಂದಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು. 

ಶ್ರೀರಂಗಪಟ್ಟಣ (ಡಿ.23): ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿರುವುದರಿಂದ ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ಬೇಸಿಗೆ ಬೆಳೆ ಬೆಳೆಯಲು ಮುಂದಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು. ತಾಲೂಕಿನ ಕೆಆರ್‌ಎಸ್‌ನಲ್ಲಿ ಶುಕ್ರವಾರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಜಲಾಶಯದ ನೀರಿನ ಮಟ್ಟ, ಕುಡಿಯುವ ನೀರಿನ ಲಭ್ಯತೆ ಹಾಗೂ ರೈತರ ಬೆಳೆಗೆ ನೀರು ಕೊಡುವ ಬಗ್ಗೆ ಚರ್ಚೆ ನಡೆಸಿದರು. 

ನಂತರ ಸ್ಥಳೀಯ ಶಾಸಕರು, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದ ಸಚಿವರು, ಜಲಾಶಯದಲ್ಲಿ ನೀರು ಕಡಿಮೆ ಇರುವುದರಿಂದ, ಮುಂದೆ ಬೇಸಿಗೆ ಎದುರಾಗುವುದರಿಂದ ಜನ, ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ತೀರ್ಮಾನಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಬಾರಿ ಮಳೆ ಕಡಿಮೆಯಾಗಿದ್ದರಿಂದ ಕಾವೇರಿ ಜಲಾನಯನ ಪ್ರದೇಶದ ಯಾವುದೇ ಅಣೆಕಟ್ಟೆಗಳು ಭರ್ತಿಯಾಗಿಲ್ಲ. ಆದರೂ ನದಿ ಪಾತ್ರದ ರೈತರ ಹಿತದೃಷ್ಟಿಯಿಂದ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನವೆಂಬರ್ ಅಂತ್ಯದವರೆಗೂ ನೀರು ಹರಿಸಲಾಗಿದೆ ಎಂದು ವಿವರಿಸಿದರು.

ನಿನ್ನೆ ತನಕ ಬಿಜೆಪಿಯಲ್ಲಿನ ಕೆಲವರಲ್ಲಿ ಅಸಮಾಧಾನ ಇತ್ತು, ಈಗ ಸರಿಯಾಗಿದೆ: ಈಶ್ವರಪ್ಪ

ನದಿ ಪಾತ್ರದಲ್ಲಿನ ಅಚ್ಚುಕಟ್ಟು ಪ್ರದೇಶದ ಭತ್ತದ ಬೆಳೆ ರಕ್ಷಣೆಗೆ ನಿಯಮಿತವಾಗಿ ರೈತರ ಹಿತ ಕಾಪಾಡಲು ಸಂಕಷ್ಟ ಸಮಯದಲ್ಲೂ ನೀರು ಹರಿಸಲಾಗಿದೆ. ಸಿಎಂ, ಡಿಸಿಎಂ, ನೀರಾವರಿ ಸಚಿವರು, ಶಾಸಕರು, ಸಮಿತಿ ಜೊತೆ ಚರ್ಚಿಸಿ ಸಲಹೆ ಪಡೆದು ಇಲ್ಲಿವರೆಗೆ ನೀರು ಹರಿಸಲಾಗಿದೆ ಎಂದರು. ನಾಲೆಗಳಿಗೆ ನೀರು ಹರಿಸಲು ಪೂರ್ಣ ಅಧಿಕಾರ ನೀರಾವರಿ ಸಲಹಾ ಸಮಿತಿಗೆ ಇಲ್ಲ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಪ್ರಾಧಿಕಾರ ಸೇರಿದಂತೆ ನೀರಾವರಿ ಅಧಿಕಾರಿಗಳು ಸಾಕಷ್ಟು ಶ್ರಮದಿಂದ ಇಲ್ಲಿಯವರೆಗೆ ರೈತರ ಬೆಳೆಗೆ ನೀರು ಹರಿಸಲಾಗಿದೆ. ಇನ್ನೂ ಮುಂದೆ ನೀರು ಹರಿಸುವುದು ಕಷ್ಟ ಸಾಧ್ಯ ಎಂದರು.

ಪ್ರಸ್ತುತ ಅಣೆಕಟ್ಟೆಯಲ್ಲಿ 16 ಟಿಎಂಸಿ ನೀರಿದೆ. ಕುಡಿಯುವ ನೀರು, ಕೈಗಾರಿಕೆಗೆ ಬಳಕೆಗೆ ಮಾತ್ರ ಲಭ್ಯವಿದೆ. ಮುಂದಿನ ಜೂನ್ ವರೆಗೆ 14 ಟಿಎಂಸಿ ನೀರು ಕುಡಿಯಲು ಅಗತ್ಯವಾಗಿದೆ. 2 ರಿಂದ 3 ಟಿಎಂಸಿ ನೀರು ಬಳಕೆಗೆ ಸಾಧ್ಯವಾಗದು. ಉಳಿದ 13.50 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದು ಎಂದರು. ಅಣೆಕಟ್ಟೆ ವ್ಯಾಪ್ತಿಯ ರೈತರು ಬೇಸಿಗೆಯಲ್ಲಿ ಯಾವುದೇ ರೀತಿಯ ಅಲ್ಪಾವಧಿ ಅಥವಾ ದೀರ್ಘಾವಧಿ ಬೆಳೆಗಳನ್ನು ಬೆಳೆಯಲು ಮುಂದಾಗಬಾರದು. ಬೆಳೆ ಬೆಳೆದು ನೀವು ತೊಂದರೆ ಸಿಲುಕಿಕೊಳ್ಳುವುದು ಬೇಡ ಎಂದು ಸಲಹೆ ನೀಡಿದರು.

ಮುಂಗಾರಿನಲ್ಲಿ ಪೂರ್ಣ ಪ್ರಮಾಣದಲ್ಲಿ ನೀರನ್ನು ಬಳಕೆ ಮಾಡಿದ್ದೇವೆ. ಬೆಳೆಗೆ ನಷ್ಟವಾಗಿಲ್ಲ. ಅಚ್ಚುಕಟ್ಟು ಬಿಟ್ಟು ಉಳಿದ ಜಿಲ್ಲೆಯ 7 ತಾಲೂಕುಗಳ ಪ್ರದೇಶಗಳಲ್ಲಿ ರೈತರಿಗೆ ಬರ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು. ನೀರಾವರಿ ಸಲಹಾ ಸಮಿತಿ ಸಭೆಗೆ ಮಂಡ್ಯ, ಮೈಸೂರು ಸಂಸದರು ಹಾಗೂ ಮೈಸೂರು ಜಿಲ್ಲಾಡಳಿತ ದೂರ ಉಳಿದಿದ್ದಾರೆ ಎಂಬ ಪ್ರಶ್ನೆಗೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಪ್ರತಿ ಸಭೆಗೆ ಭಾಗಿಯಾಗುತ್ತಿದ್ದ ಮೈಸೂರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಾರಿ ಗೈರಾಗಿದ್ದಾರೆ ಎಂದರು.

ಎಚ್.ಡಿ.ಕುಮಾರಸ್ವಾಮಿ ಮೈತ್ರಿಧರ್ಮ ಪಾಲಕರು: ಸಚಿವ ಚಲುವರಾಯಸ್ವಾಮಿ

ವರುಣ, ವಿಸಿ ಸೇರಿದಂತೆ ಎಲ್ಲಿಗೂ ಬಿಡಲು ಸಾಧ್ಯವಿಲ್ಲ. ಸಂಕ್ರಾಂತಿ ವೇಳೆ ನೀರು ಬಿಡುವಂತೆ ರೈತರು ಮನವಿ ಮಾಡಿದ್ದಾರೆ. ಜನವರಿ 10ರವರೆಗೆ ಕಾದು ನೋಡೋಣ. ಮುಂದೆ ಒಳ್ಳೆ ಮಳೆಯಾದರೆ ನೀರು ಬಿಡಲು ನಮ್ಮ ಅಭ್ಯಂತರವಿಲ್ಲ ಎಂದರು. ಸಭೆಯಲ್ಲಿ ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್, ಕಾವೇರಿ ನೀರಾವರಿ ನಿಗಮದ ಮುಖ್ಯ ಅಭಿಯಂತರ ಆರ್.ಎನ್.ವೆಂಕಟೇಶ್, ಅಧೀಕ್ಷಕ ಅಭಿಯಂತರ ರಘುರಾಂ, ಕಾರ್ಯಪಾಲಕ ಅಭಿಯಂತರ ಜಯಂತ್ ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ