Shivamogga: ಅಪಘಾತದಲ್ಲಿ ತಂದೆ ಸಾವು: ದುಃಖದಲ್ಲೇ ಹಸೆಮಣೆ ಏರಿದ ಸಹೋದರಿಯರು

Published : Jun 30, 2023, 02:00 AM IST
Shivamogga: ಅಪಘಾತದಲ್ಲಿ ತಂದೆ ಸಾವು: ದುಃಖದಲ್ಲೇ ಹಸೆಮಣೆ ಏರಿದ ಸಹೋದರಿಯರು

ಸಾರಾಂಶ

ತಂದೆಯ ಸಾವಿನ ದುಃಖದಲ್ಲಿ ಹಸೆಮಣೆ ಏರಿದ ಸಹೋದರಿಯರು ಸಮಾಜಕ್ಕೆ ಆದರ್ಶವಾಗಿದ್ದಾರೆ. ಮದುವೆ ಎಂದರೆ ಬಂಧುಗಳು ಸ್ನೇಹಿತರು ಒಂದಾಗಿ ಸಂಭ್ರಮದಿಂದ ನಡೆ​ಯುವ ಕಾರ್ಯ. ಆದರೆ ದುಃಖದಲ್ಲಿಯೇ ಹಸೆಮೆಣೆ ಏರಿದ ಪುತ್ರಿಯರು ಸಮಾಜಕ್ಕೆ ಮಾದರಿಯಾಗಿದ್ದಾರೆ.

ಆನಂದಪುರ (ಜೂ.30): ತಂದೆಯ ಸಾವಿನ ದುಃಖದಲ್ಲಿ ಹಸೆಮಣೆ ಏರಿದ ಸಹೋದರಿಯರು ಸಮಾಜಕ್ಕೆ ಆದರ್ಶವಾಗಿದ್ದಾರೆ. ಮದುವೆ ಎಂದರೆ ಬಂಧುಗಳು ಸ್ನೇಹಿತರು ಒಂದಾಗಿ ಸಂಭ್ರಮದಿಂದ ನಡೆ​ಯುವ ಕಾರ್ಯ. ಆದರೆ ದುಃಖದಲ್ಲಿಯೇ ಹಸೆಮೆಣೆ  ಏರಿದ ಪುತ್ರಿಯರು ಸಮಾಜಕ್ಕೆ ಮಾದರಿಯಾಗಿದ್ದಾರೆ.

ಬುಧವಾರ ಆನಂದಪುರ ಸಮೀಪದ ಕೆಂಜಿಗಾಪುರದ ಸಮುದಾಯ ಭವನದಲ್ಲಿ ಬನವಾಸಿಯ ಮೂಲದವರಾದ ಮಂಜುನಾಥಗೌಡ ಎಂಬುವರ ಇಬ್ಬರು ಪುತ್ರಿಯರ ಮದುವೆ ನಿಶ್ಚಯವಾಗಿತ್ತು. ತಂದೆ ತನ್ನ ಇಬ್ಬರ ಹೆಣ್ಣು ಮಕ್ಕಳನ್ನು ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದ ಹೆಣ್ಣುಮಕ್ಕಳ ತಾಯಿಯ ತವರೂರಿಗೆ ಬಂದಿದ್ದು, ನಡೆಯಬೇಕಾದ ಮದುವೆಯ ತಯಾರಿಗಾಗಿ ಹೆಣ್ಣು ಮಕ್ಕಳ ತಂದೆ ಮಂಜುನಾಥಗೌಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಮಂಜುನಾಥಗೌಡ ಸ್ಥಳದಲ್ಲೇ ಮೃತಪಟ್ಟಿದ್ದರು.

ನೀರಿನ ಸಮಸ್ಯೆ ತಲೆದೂರದಂತೆ ನಿಗಾವಹಿಸಿ: ಶಾಸಕ ಲಕ್ಷ್ಮಣ ಸವದಿ ಸೂಚನೆ

ಸಂಭ್ರಮಕ್ಕೆ ಸಾಕ್ಷಿಯಾಗಬೇಕಿದ್ದ ಮದುವೆಯ ಮನೆಯಲ್ಲಿ ಸೂತಕದ ಛಾಯೆ ಆವರಿಸಿತ್ತು. ಇಬ್ಬರೂ ಪುತ್ರಿಯರ ಅಜ್ಜ (ತಾಯಿಯ ತಂದೆ) ರುದ್ರಪ್ಪ ಗೌಡರು ಮೊಮ್ಮಕ್ಕಳ ಮುಂದಿನ ಭವಿಷ್ಯವನ್ನು ಚಿಂತಿಸಿ ನಿಶ್ಚಿತವಾದ ದಿನದಂದು ಮೊಮ್ಮಕ್ಕಳ ಮದುವೆ ಮಾಡುವುದಾಗಿ ಕುಟುಂಬದೊಂದಿಗೆ ಚರ್ಚಿಸಿ ತೀರ್ಮಾನಿಸಿದರು. ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಮುತ್ತಿನಹಳ್ಳಿ ಗ್ರಾಮದ ಶಿವಾನಂದ ಪಾಟೀಲ್‌ ಅವರ ಇಬ್ಬರ ಮಕ್ಕಳಾದ ವಿಶ್ವನಾಥ್‌ ಪಾಟೀಲ, ಶ್ರೀನಾಥ್‌ ಪಾಟೀಲ ಇವರೊಂದಿಗೆ ಮಂಜುನಾಥ್‌ಗೌಡರ ಇಬ್ಬರ ಪುತ್ರಿಯರಾದ ಪಲ್ಲವಿ ಮತ್ತು ಪೂಜಾ ಇವರುಗಳ ಮದುವೆ ನಿಶ್ಚಯವಾಗಿತ್ತು. 

ನಾನು ಗ್ರಾನೈಟ್‌ ವಿದೇಶಕ್ಕೆ ರಫ್ತು ಮಾಡಲಿಲ್ಲ: ಡಿಕೆಶಿ ವಿರುದ್ಧ ಎಚ್‌ಡಿಕೆ ಪರೋಕ್ಷ ವಾಗ್ದಾಳಿ

ಅದರಂತೆ ಹೆಣ್ಣು ಮಕ್ಕಳ ಅಜ್ಜ ವರನ ಕಡೆಯವರಿಗೆ ದೂರವಾಣಿ ಕರೆ ಮಾಡಿ ನಿಶ್ಚಯದಂತೆ ಮದುವೆ ನಡೆಸಬೇಕು ಎಂದು ಕೇಳಿಕೊಂಡಾಗ ವರನ ಕಡೆಯವರ ಸಮ್ಮತಿಯೊಂದಿಗೆ ರುದ್ರಪ್ಪ ಗೌಡರು ನಮ್ಮ ಕುಟುಂಬ ಹಾಗೂ ಬಂಧುಗಳಿಗೆ ದೂರವಾಣಿಯ ಮೂಲಕ ನಿಶ್ಚಿಮವಾದಂತೆ ಮದುವೆ ನಡೆಯಲಿದೆ ಎಲ್ಲರೂ ಬರಬೇಕೆಂದು ತಿಳಿಸಿದ್ದರು. ಈ ಮದುವೆಗೆ ನೂರಾರು ಜನರು ಆಗಮಿಸಿದ್ದು, ವಧು-ವರರನ್ನು ಆಶೀರ್ವದಿಸಿದರು. ಮದುವೆ ಬಂದಂತಹ ಬಂಧುಗಳು ಸ್ನೇಹಿತರುಗಳು ವಧು-ವರರಿಗೆ ಶುಭ ಹಾರೈಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ