Pravasi Bharatiya Divas: ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಆಕರ್ಷಿಸಲು ಉತ್ಸವ: ರಾಮ್‌ಪ್ರಸಾದ್‌

Published : Jan 10, 2023, 10:39 PM IST
Pravasi Bharatiya Divas: ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಆಕರ್ಷಿಸಲು ಉತ್ಸವ: ರಾಮ್‌ಪ್ರಸಾದ್‌

ಸಾರಾಂಶ

ಪ್ರವಾಸೋದ್ಯಮ ಉತ್ತೇಜಿಸಲು ದಕ್ಷಿಣ ಭಾರತ ಮಟ್ಟದಲ್ಲಿ ಉತ್ಸವಗಳನ್ನು ಹಮ್ಮಿಕೊಂಡು ಬಂಡವಾಳ ಹೂಡಿಕೆಗೆ ಉದ್ಯಮಿಗಳನ್ನು ಆಹ್ವಾನಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ರಾಮಪ್ರಸಾದ್‌ ಮನೋಹರ್‌ ತಿಳಿಸಿದರು.

ಬೆಂಗಳೂರು (ಜ.10) : ಪ್ರವಾಸೋದ್ಯಮ ಉತ್ತೇಜಿಸಲು ದಕ್ಷಿಣ ಭಾರತ ಮಟ್ಟದಲ್ಲಿ ಉತ್ಸವಗಳನ್ನು ಹಮ್ಮಿಕೊಂಡು ಬಂಡವಾಳ ಹೂಡಿಕೆಗೆ ಉದ್ಯಮಿಗಳನ್ನು ಆಹ್ವಾನಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ರಾಮಪ್ರಸಾದ್‌ ಮನೋಹರ್‌ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ(Department of Tourism) ಮತ್ತು ಆರ್‌ಸಿ ಕಾಲೇಜು(RC Collage) ಸಹಯೋಗದಲ್ಲಿ ಸೋಮವಾರ ಎಫ್‌ಕೆಸಿಸಿಐ(FKCCI)ನಲ್ಲಿ ಹಮ್ಮಿಕೊಂಡಿದ್ದ ‘ಪ್ರವಾಸಿ ಭಾರತೀಯ ದಿವಸ್‌’(Tourist Indian Day) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರವಾಸೋದ್ಯಮ ಹಾಗೂ ಆತಿಥ್ಯ ವಲಯ ಏಕಸ್ವಾಮ್ಯತೆ ಹೊಂದಿದೆ. ಇವುಗಳ ಬೆಳವಣಿಗೆಯಿಂದ ಉದ್ಯೋಗಾವಕಾಶಗಳು ಹೆಚ್ಚಾಗಿ, ಆರ್ಥಿಕತೆ ವೃದ್ಧಿಯಾಗುತ್ತದೆ. ಈ ಕ್ಷೇತ್ರಗಳಲ್ಲಿ ವಿಫುಲ ಅವಕಾಶಗಳಿದ್ದು, ಅವುಗಳನ್ನು ಬಳಸಿಕೊಳ್ಳುವ ಆಗತ್ಯತೆ ಹೆಚ್ಚಿದೆ ಎಂದರು.

ಜಗತ್ತಿನ ಅಭಿವೃದ್ಧಿಯ ಇಂಜಿನ್‌ ಆಗುವ ಶಕ್ತಿ ಭಾರತಕ್ಕಿದೆ: ಪ್ರಧಾನಿ ನರೇಂದ್ರ ಮೋದಿ

ಸದ್ಯ ಇಂಜಿನಿಯರಿಂಗ್‌ ಕ್ಷೇತ್ರಕ್ಕಿಂತಲೂ ವಾಣಿಜ್ಯ ಕ್ಷೇತ್ರದ ಅಭ್ಯರ್ಥಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಇದನ್ನು ಗಮನದಲ್ಲಿಟ್ಟುಕೊಂಡು ಯುವಜನತೆ ಕಲಿಕೆಗೆ ಮುಂದಾಗಬೇಕು. 18 ವರ್ಷ ತುಂಬಿದ ಬಳಿಕ ಸ್ವಾವಲಂಬಿಗಳಾಗಿ ಬದುಕು ರೂಪಿಸುವ ಕಲಿಕೆಯತ್ತ ಗಮನ ಹರಿಸಬೇಕು. ಸಮಯ ಎಲ್ಲರಿಗೂ ಒಂದೇ ಆಗಿದ್ದು, ಅದನ್ನು ಬಳಸಿಕೊಳ್ಳುವವರು ಸಾಧನೆ ಮಾಡುತ್ತಾರೆ ಎಂದು ಹೇಳಿದರು.

ಸಂಗೀತ ನಿರ್ದೇಶಕ ಗುರುಕಿರಣ್‌(Music Director Gurukiran) ಮಾತನಾಡಿ, ನಮ್ಮ ದೇಶ ಶ್ರೀಮಂತ ಸಂಸ್ಕೃತಿಯಿಂದ ತುಂಬಿದೆ. ರಾಜ್ಯದಲ್ಲಿ ಸಾಕಷ್ಟುಪಾರಂಪರಿಕ, ಐತಿಹಾಸಿಕ, ಮನಮೋಹಕ ಸ್ಥಳಗಳಿವೆ. ಕಲೆ, ಸಂಸ್ಕೃತಿಗಳಿವೆ. ಇವೆಲ್ಲಾ ಪೂರ್ವಜರು, ಪ್ರಕೃತಿ ನೀಡಿದ ಕೊಡುಗೆಯಾಗಿದೆ. ಇವುಗಳನ್ನು ಬಳಸಿಕೊಂಡು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಯುವಜನತೆ ಉನ್ನತಿ ಸಾಧಿಸಬೇಕು. ಮೂಲಸೌಕರ್ಯಕ್ಕೆ ಸರ್ಕಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ವಿಶ್ವ ಅಂತರ್ಜಾಲದಿಂದ, ನಮ್ಮ ಮನಸ್ಸು ಭಾರತದೊಂದಿಗೆ ಕನೆಕ್ಟ್; ಅನಿವಾಸಿ ಭಾರತೀಯರನ್ನುದ್ದೇಶಿ ಮೋದಿ ಭಾಷಣ!

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷ ಜಿ.ಕೆ.ಶೆಟ್ಟಿ, ಎಫ್‌ಕೆಸಿಸಿಐ ಅಧ್ಯಕ್ಷ ಗೋಪಾಲರೆಡ್ಡಿ, ಉಪಾಧ್ಯಕ್ಷ ಬಾಲಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ