ಹಳೆ ಪಿಂಚಣಿ ಜಾರಿ ಮಾಡಲು ಮಾಹಿತಿ ಕೇಳಿದ ವಿತ್ತ ಇಲಾಖೆ

Published : Jul 09, 2024, 08:33 AM ISTUpdated : Jul 09, 2024, 09:43 AM IST
ಹಳೆ ಪಿಂಚಣಿ ಜಾರಿ ಮಾಡಲು ಮಾಹಿತಿ ಕೇಳಿದ ವಿತ್ತ ಇಲಾಖೆ

ಸಾರಾಂಶ

ನೌಕರರ ಆಯ್ಕೆ ಅನುಸಾರ ನಿಗದಿತ ಅರ್ಹತೆ ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರದಿಂದ ಖಚಿತಪಡಿಸಿಕೊಂಡು ಆಯಾ ಇಲಾಖೆಗಳ ಮುಖ್ಯಸ್ಥರು ಆ.31ರ ಒಳಗೆ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವ ಮೊದಲು ದಾಖಲೆಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ, ದೃಢೀಕರಿಸಬೇಕು ಎಂದು ಟಿಪ್ಪಣಿಯಲ್ಲಿ ತಿಳಿಸಿದ ಆರ್ಥಿಕ ಇಲಾಖೆ 

ಬೆಂಗಳೂರು(ಜು.09): ರಾಜ್ಯ ಸರ್ಕಾರಿ ಸೇವೆಗೆ 2006ರ ಏ. 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಆಗಿರುವ ನೌಕರರನ್ನು ಹಳೇ ಪಿಂಚಣಿ ಯೋಜನೆಗೆ ಒಳಪಡಿಸಲು ಎಲ್ಲ ಇಲಾಖೆಗಳಿಂದ 'ಕ್ರೋಢಿಕೃತ ಮಾಹಿತಿ' ಯನ್ನು ಆರ್ಥಿಕ ಇಲಾಖೆ ಕೋರಿದೆ. 

ನೌಕರರ ಆಯ್ಕೆ ಅನುಸಾರ ನಿಗದಿತ ಅರ್ಹತೆ ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರದಿಂದ ಖಚಿತಪಡಿಸಿಕೊಂಡು ಆಯಾ ಇಲಾಖೆಗಳ ಮುಖ್ಯಸ್ಥರು ಆ.31ರ ಒಳಗೆ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವ ಮೊದಲು ದಾಖಲೆಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ, ದೃಢೀಕರಿಸಬೇಕು ಎಂದು ಆರ್ಥಿಕ ಇಲಾಖೆಯ ಟಿಪ್ಪಣಿಯಲ್ಲಿ ತಿಳಿಸಲಾಗಿದೆ. 

ಏಳನೇ ವೇತನ, ಹಳೇ ಪಿಂಚಣಿ ಜಾರಿಗೆ ಸಿಎಂ ಸಿದ್ಧತೆ: ಮಾಜಿ ಸಚಿವ ಆಂಜನೇಯ

ಇದರಿಂದ ಸುಮಾರು 8 ಸಾವಿರಕ್ಕೂ ಹೆಚ್ಚು ನೌಕರರು ಹಳೇ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸಾಧ್ಯತೆ ಇದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!