ಖಾಸಗಿ ಸಾಲದಿಂದ ಆತ್ಮಹತ್ಯೆಗೀಡಾದ ರೈತರಿಗೆ ಸರ್ಕಾರದಿಂದ ಪರಿಹಾರ

Kannadaprabha News   | Asianet News
Published : Jun 12, 2021, 08:24 AM IST
ಖಾಸಗಿ ಸಾಲದಿಂದ ಆತ್ಮಹತ್ಯೆಗೀಡಾದ ರೈತರಿಗೆ ಸರ್ಕಾರದಿಂದ ಪರಿಹಾರ

ಸಾರಾಂಶ

ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ಪರಿಹಾರ ನೀಡುವ ಪ್ರಸ್ತಾವನೆ ಮುಖ್ಯಮಂತ್ರಿಗಳ ಬಳಿ ಪರಿಶೀಲನೆಯಲ್ಲಿ ಪ್ರಸ್ತಾವನೆ ಬಗ್ಗೆ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ 

ಬೆಂಗಳೂರು (ಜೂ.12):  ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ಕುರಿತ ಪ್ರಸ್ತಾವನೆ ಮುಖ್ಯಮಂತ್ರಿಗಳ ಬಳಿ ಪರಿಶೀಲನೆಯಲ್ಲಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರಿಗೆ ಪ್ರಧಾನಮಂತ್ರಿ ಫಸಲ… ಬಿಮಾ ಯೋಜನೆಯಡಿ 2016ರಿಂದ ಬೆಳೆ ನಷ್ಟವಿಮೆ ಪರಿಹಾರ ವಿತರಿಸಿಲ್ಲ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಪುಟ್ಟ ಮಕ್ಕಳ ಫೀಸ್ ಕಟ್ಟೋಕೋ EMI, ಸಾಲ, ನೇರ ವ್ಯಾಪಾರಕ್ಕಿಳಿದ ಶಿಕ್ಷಣ ಸಂಸ್ಥೆಗಳು! ...

ಅರ್ಜಿಯ ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ, ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲ ತೀರಿಸಲಾಗದೆ ಅಥವಾ ಕಿರುಕುಳ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಪರಿಹಾರ ಕೊಡಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿತ್ತು.

ರೈತರಿಗೆ ಗುಡ್‌ನ್ಯೂಸ್: ಭತ್ತ ಸೇರಿ 14 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ! ...

ಶುಕ್ರವಾರ ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿಜಯ  ಕುಮಾರ್‌ ಎ. ಪಾಟೀಲ ಹಾಜರಾಗಿ, ಖಾಸಗಿ ಲೇವಾದೇವಿಯವರಿಂದ ಪಡೆದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ಪ್ರಸ್ತಾವನೆ ಮುಖ್ಯಮಂತ್ರಿಗಳ ಮುಂದೆ ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.

ಅದನ್ನು ಪರಿಗಣಿಸಿದ ಪೀಠ, ಪ್ರಸ್ತಾವನೆ ಸಂಬಂಧ ಕೈಗೊಂಡ ಕ್ರಮಗಳ ಕುರಿತು ಜೂ.30ರ ಒಳಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಜು.2ಕ್ಕೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ