ಮಕ್ಕಳಿಂದ ಶೌಚಾಲಯ ತೊಳಿಸಿದರೆ ಎಫ್ಐಆರ್‌: ಎಂಟು ಅಂಶಗಳ ಸುತ್ತೋಲೆಯಲ್ಲೇನಿದೆ?

Published : Dec 31, 2023, 04:45 AM IST
ಮಕ್ಕಳಿಂದ ಶೌಚಾಲಯ ತೊಳಿಸಿದರೆ ಎಫ್ಐಆರ್‌: ಎಂಟು ಅಂಶಗಳ ಸುತ್ತೋಲೆಯಲ್ಲೇನಿದೆ?

ಸಾರಾಂಶ

ಇನ್ನು ಮುಂದೆ ಮುಖ್ಯಶಿಕ್ಷಕರು, ಶಿಕ್ಷಕರು ಅಥವಾ ಇತರೆ ಸಿಬ್ಬಂದಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜೊತೆಗೆ ಎಫ್ಐಆರ್‌ ದಾಖಲಿಸಲಾಗುವುದು ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿರುವ ಶಾಲಾ ಶಿಕ್ಷಣ ಇಲಾಖೆ, ಈ ಕುರಿತು ಎಂಟು ಅಂಶಗಳ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು (ಡಿ.31): ಇನ್ನು ಮುಂದೆ ಮುಖ್ಯಶಿಕ್ಷಕರು, ಶಿಕ್ಷಕರು ಅಥವಾ ಇತರೆ ಸಿಬ್ಬಂದಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜೊತೆಗೆ ಎಫ್ಐಆರ್‌ ದಾಖಲಿಸಲಾಗುವುದು ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿರುವ ಶಾಲಾ ಶಿಕ್ಷಣ ಇಲಾಖೆ, ಈ ಕುರಿತು ಎಂಟು ಅಂಶಗಳ ಸುತ್ತೋಲೆ ಹೊರಡಿಸಿದೆ.

ಇತ್ತೀಚೆಗೆ ಕೆಲ ಶಾಲೆಗಳಲ್ಲಿ ಮಕ್ಕಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಗಳು ಬೆಳಕಿಗೆ ಬಂದು ಪೋಷಕರು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಶನಿವಾರ ಶಾಲಾ ಶೌಚಾಲಯ ನಿರ್ವಹಣೆಗೆ ಎಂಟು ಅಂಶಗಳ ಮತ್ತೊಂದು ಸುತ್ತೋಲೆಯನ್ನು ಇಲಾಖೆಯ ಆಯುಕ್ತರಾದ ಕಾವೇರಿ ಅವರು ಹೊರಡಿಸಿದ್ದಾರೆ.

ಸಂಚಾರಿ ನಿಯಮ ಪಾಲಿಸಿದರೆ ಅಪಘಾತ ಆಗೋದಿಲ್ಲ: ಸಚಿವ ಮಧು ಬಂಗಾರಪ್ಪ

ಸುತ್ತೋಲೆಯಲ್ಲೇನಿದೆ?
1. ವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

2. ಒಂದು ವೇಳೆ ಸ್ವಚ್ಛಗೊಳಿಸಿದ್ದು ಕಂಡು ಬಂದರೆ ಇದಕ್ಕೆ ಕಾರಣರಾದ ಮುಖ್ಯ ಶಿಕ್ಷಕರು, ಶಿಕ್ಷಕರು, ಇತರೆ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಹಾಗೂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗುವುದು. ಇದು ಸರ್ಕಾರಿ ಶಾಲೆಗಳು ಮಾತ್ರವಲ್ಲ, ಅನುದಾನಿತ, ಅನುದಾನ ರಹಿತ ಖಾಸಗಿ ಶಾಲೆಗಳಿಗೂ ಅನ್ವಯಿಸುತ್ತದೆ.

3. ಶೌಚಾಲಯ ನಿರ್ವಹಣಾ ಅನುದಾನ ಈಗಾಗಲೇ ಶಾಲೆಗಳಿಗೆ ಬಿಡುಗಡೆಯಾಗಿದೆ. ಈ ಅನುದಾನವನ್ನು ಪ್ರಥಮ ಪ್ರಾಶಸ್ತ್ಯದಲ್ಲಿ ಬಳಸಿಕೊಳ್ಳಬೇಕು.

4. ಜೊತೆಗೆ ಶಾಲಾ ಎಸ್‌ಡಿಎಂಸಿಗಳ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯ ಸಂಪನ್ಮೂಲಗಳೊಂದಿಗೆ ಶೌಚಾಲಯಗಳ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು.

5. ಎಸ್‌ಡಿಎಂಸಿಗಳು ವಿದ್ಯಾರ್ಥಿಗಳಿಗೆ ಶೌಚಾಲಯ ಸ್ವಚ್ಛಗೊಳಿಸದಂತೆ ಅರಿವು ಮೂಡಿಸಬೇಕು.

6. ಶಾಲಾ ಉಸ್ತುವಾರಿ ಮತ್ತು ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಈ ಬಗ್ಗೆ ಕಾಲ ಕಾಲಕ್ಕೆ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು.

ಉಚಿತ ಕೊಡುಗೆಗಳಿಂದಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ

7. ಭೇಟಿ ವೇಳೆ ಯಾವುದೇ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಕಂಡು ಬಂದರೆ ತಕ್ಷಣ ಡಿಡಿಪಿಐ, ಬಿಇಒಗಳ ಗಮನಕ್ಕೆ ತರಬೇಕು.

8. ಡಿಡಿಪಿಐ, ಬಿಇಒಗಳು ಸಂಬಂಧಿಸಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಎಫ್‌ಐಆರ್‌ ದಾಖಲಿಸಬೇಕು. ತಪ್ಪಿದರೆ ನಿಮ್ಮನ್ನೇ ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ