
ಧಾರವಾಡ, [ಏ.10]: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಸಂಕಷ್ಟಗೆ ಸಂಕಷ್ಟ ಎದುರಾಗಿದೆ.
ಯೋಗೀಶ್ ಗೌಡ ಸಹೋದರ ಗುರುನಾಥ್ ಗೌಡ ದಾಖಲಿಸಿದ್ದ ಖಾಸಗಿ ದೂರಿನಿಂದ ಕೋರ್ಟ್ ನಿರ್ದೇಶನದಂತೆ ಧಾರವಾಡ ಉಪನಗರ ಪೊಲೀಸರು ಎಫ್. ಐ.ಆರ್ ದಾಖಲಿಸಿದ್ದಾರೆ.
ಧಾರವಾಡ ದೋಸ್ತಿ ಅಭ್ಯರ್ಥಿ ಕುಲಕರ್ಣಿ ವಿಚಾರಣೆ ಸಾಧ್ಯತೆ, ಯಾವ ಪ್ರಕರಣ?
ಮೊದಲ ಆರೋಪಿ ಡಿವೈಎಸ್ಪಿ ತುಳಜಪ್ಪು ಸುಲ್ಪಿ, 2ನೇ ಆರೋಪಿ ಡಿವೈಎಸ್ಪಿ ಚಂದ್ರಶೇಖರ ಮತ್ತು ವಿನಯ್ ಕುಲಕರ್ಣಿ 3ನೇ ಆರೋಪಿಯಾಗಿದ್ದಾರೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬೆಂಬಲಿಗರು ಭಾಗಿಯಾಗಿದ್ದರು ಎನ್ನಲಾಗಿತ್ತು.
ಇನ್ನು, ಕೊಲೆ ಕೇಸ್ ನಲ್ಲಿ ಸಾಕ್ಷ್ಯ ನಾಶ ಮತ್ತು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಯೋಗೀಶ್ ಗೌಡ ಸಹೋದರ ಗುರುನಾಥ್ ಗೌಡ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ತನಿಖೆಗೆ ಆದೇಶಿಸಿತ್ತು. ಇದರ ಬೆನ್ನಲ್ಲೇ, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 2016ರ ಜೂನ್ 15ರಂದು ನಡೆದಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದ ಕೇಸ್ ಧಾರವಾಡ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗಿತ್ತು.
ಧಾರವಾಡ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿದಿರುವ ವಿನಯಕ್ ಕುಲಕರ್ಣಿಗೆ ಲೋಕಸಭಾ ಹೊಸ್ತಿಲಲ್ಲೇ ಯೋಗೀಶ್ ಗೌಡ ಕೊಲೆ ಪ್ರಕರಣ ಮತ್ತೆ ಚಿಗುರೊಡೆದಿರುವುದು ಭಾರೀ ಹೊಡೆತಬಿದ್ದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ