
ಬೆಂಗಳೂರು (ಏ.20): ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಕರ್ತವ್ಯಕ್ಕೆ ಹಾಜರಾಗುತ್ತಿರುವ ನೌಕರರನ್ನು ಬೆದರಿಸುತ್ತಿರುವ, ಬಸ್ಗಳ ಮೇಲೆ ಕಲ್ಲು ತೂರಿ ಹಾನಿ ಮಾಡಲು ಪ್ರಚೋದಿಸಿದ ಕಾರಣಕ್ಕಾಗಿ ಸಾರಿಗೆ ನೌಕರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೋಡಿಹಳ್ಳಿ ಸೇರಿ 17 ಜನರ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕರ್ನಾಟಕದಲ್ಲಿ ನಿಲ್ಲದ ಸಾರಿಗೆ ಮುಷ್ಕರ; ಖಾಸಗಿ ಬಸ್ ಮಾಲೀಕರಿಂದ ಸುಲಿಗೆ!
ಬಿಎಂಟಿಸಿಯ ಭದ್ರತಾ ಮತ್ತು ಜಾಗೃತ ವಿಭಾಗದ ವಿಭಾಗೀಯ ಭದ್ರತಾ ನಿರೀಕ್ಷಕ ಕೆ.ಎಂ. ಮುನಿಕೃಷ್ಣ ನೀಡಿರುವ ದೂರನ್ನು ಆಧರಿಸಿ, ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ನಿವೃತ್ತ ನೌಕರ ಆನಂದ್, ನಿರ್ವಾಹಕಿ ಚಂಪಕಾವತಿ ಹಾಗೂ ಇತರರ ವಿರುದ್ಧ ಅಕ್ರಮವಾಗಿ ನೌಕರರನ್ನು ಮುಷ್ಕರದಲ್ಲಿ ಭಾಗಿಯಾಗುವಂತೆ ಪ್ರರೇಪಿಸಿರುವ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ