ಮೂರು ಮನೆಗಳಿಗೆ ಬೆಂಕಿ; ಪ್ರಾಣ ಲೆಕ್ಕಿಸದೇ ಇಬ್ಬರ ಜೀವ ಉಳಿಸಿದ ಮಹಿಳೆಯರು!

Published : Nov 02, 2023, 03:40 PM IST
ಮೂರು ಮನೆಗಳಿಗೆ ಬೆಂಕಿ; ಪ್ರಾಣ ಲೆಕ್ಕಿಸದೇ ಇಬ್ಬರ ಜೀವ ಉಳಿಸಿದ ಮಹಿಳೆಯರು!

ಸಾರಾಂಶ

ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಗುಡಿಸಲುಗಳಿಂದ ಮಹಿಳೆಯರು ಪ್ರಾಣ ಲೆಕ್ಕಿಸದೇ ಮನೆಯೊಳಗೆ ಸಿಲುಕಿದ್ದ ಒಬ್ಬ ಪುರುಷ ಮತ್ತು ಮಗುವನ್ನು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗುಮ್ಮನಹಳ್ಳಿ ಬೋವಿ ಕಾಲೋನಿಯಲ್ಲಿ ನಡೆದಿದೆ.

ಚಿಕ್ಕಮಗಳೂರು (ನ.2): ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಗುಡಿಸಲುಗಳಿಂದ ಮಹಿಳೆಯರು ಪ್ರಾಣ ಲೆಕ್ಕಿಸದೇ ಮನೆಯೊಳಗೆ ಸಿಲುಕಿದ್ದ ಒಬ್ಬ ಪುರುಷ ಮತ್ತು ಮಗುವನ್ನು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗುಮ್ಮನಹಳ್ಳಿ ಬೋವಿ ಕಾಲೋನಿಯಲ್ಲಿ ನಡೆದಿದೆ.

6 ವರ್ಷದ ಮಗು, ಮನೆಯಲ್ಲಿದ್ದ ಮಧ್ಯ ವಯಸ್ಕನನ್ನ ರಕ್ಷಿಸಿದ ಮಹಿಳೆಯರು. ಗ್ರಾಮದ ಬಹುತೇಕ ಪುರುಷರು ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರಕ್ಕೆ ತೆರಳಿದ್ದರು. ಈ ವೇಳೆ ಶಶಿ, ಕಲ್ಲೇಶ್, ಹನುಮಂತ ಎಂಬುವರಿಗೆ ಸೇರಿದ್ದ ಮನೆಗಳಿಗೆ ಬೆಂಕಿ ಬಿದ್ದಿದೆ. ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಬೆಂಕಿ. ಬೆಂಕಿ ಬಿದ್ದ ವೇಳೆ ಮನೆಯೊಳಗೆ ಕುಡಿದ ಮಲಗಿದ್ದ ಹನುಮಂತ. ಜತೆಗೆ ಕಲ್ಲೇಶ್ ಮನೆಯಲ್ಲಿ 6 ವರ್ಷದ ಮಗು ಮಲಗಿತ್ತು.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಗಂಗಮ್ಮನಗುಡಿ ಸ್ಪಾಂಜ್‌ ಫ್ಯಾಕ್ಟರಿಗೆ ಬೆಂಕಿ

ಕ್ಷಣಮಾತ್ರದಲ್ಲಿ ಧಗಧಗ ಉರಿದ ಬೆಂಕಿ ನಂದಿಸಲು ಹರಸಾಹಸ. ಈ ವೇಳೆ ಮಹಿಳೆಯರು ಪ್ರಾಣ ಲೆಕ್ಕಿಸದೇ ಮನೆಯೊಳಗೆ ನುಗ್ಗಿ ಹನಮಂತ ಮತ್ತು ಮಗುವನ್ನು ಹೊರಗೆ ತಂದಿದ್ದಾರೆ. ಮನೆಗಳಿಗೆ ಬೆಂಕಿ ಬಿದ್ದ ಘಟನೆ ತಿಳಿಯುತ್ತಿದ್ದಂತೆ ಅರ್ಧಕ್ಕೆ ಅಂತ್ಯ ಸಂಸ್ಕಾರ ಬಿಟ್ಟು ಬಂದ ಗ್ರಾಮಸ್ಥರು. ಗ್ರಾಮದ ಹೆಣ್ಣುಮಕ್ಕಳ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ಶಶಿ, ಕಲ್ಲೇಶ್ ಮನೆ ಸಂಪೂರ್ಣ ಹಾನಿ, ಹನುಮಂತನ ಮನೆ ಭಾಗಶಃ  ನಾಶವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ