
ಬೆಂಗಳೂರು (ಫೆ.26): ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಕ್ಯಾಸಂಬಳ್ಳಿಯಲ್ಲಿ ಸ್ಮಾರಕ ನಿರ್ಮಿಸಲು ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶನಿವಾರ ವಿಧಾನಸೌಧದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಮುಖ್ಯಮಂತ್ರಿಗಳ ಬಗ್ಗೆ ಸಾಹಿತ್ಯ ರಚನೆ ಮಾಡಿ ಜನರಿಗೆ ಮತ್ತು ಮಕ್ಕಳಿಗೆ ತಿಳಿಸುವ ಕೆಲಸ ಮಾಡಬೇಕಿದೆ.
ಕರ್ನಾಟಕ ಏಕೀಕರಣದ ಹೋರಾಟ, ಆಗಿನ ಜನರ ಮನಸ್ಥಿತಿ, ಬೇರೆ ಬೇರೆ ಹೋರಾಟಗಳು ಮತ್ತು ಎಲ್ಲಾ ಮುಖ್ಯಮಂತ್ರಿಗಳು ತೆಗೆದುಕೊಂಡ ತೀರ್ಮಾನಗಳ ಕುರಿತು ಒಂದು ಮ್ಯೂಸಿಯಂ ಮಾಡುವ ಅವಶ್ಯಕತೆ ಇದೆ ಎಂದು ತಿಳಿಸಿದರು. ಸ್ವಾತಂತ್ರ್ಯ ಹೋರಾಟಗಾರರಾದ ಕೆ.ಸಿ.ರೆಡ್ಡಿ ಅವರು ಸ್ವಾತಂತ್ರ್ಯ ಬಂದ ಬಳಿಕ ರಾಜ್ಯದ ಪ್ರಥಮ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ರೈತ ಕುಟುಂಬದಿಂದ ಬಂದ ಅವರು ವಕೀಲರಾಗಿ, ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ. ಪ್ರಜಾಪ್ರತಿನಿಧಿ ಎಂಬ ಪಕ್ಷ ಕಟ್ಟಿದ್ದರು.
ಬಿಜೆಪಿ ಸೇರಲು ಸ್ವಾಮೀಜಿಗಳಿಗೆ ಮುಕ್ತ ಅವಕಾಶ: ಸಚಿವ ಅಶ್ವತ್ಥ ನಾರಾಯಣ
ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದ ಅವರು ಭವಿಷ್ಯದ ನಾಡು ಕಟ್ಟಲು ಅಗತ್ಯವಿರುವ ಶಾಸನ ರಚನೆ, ಸರ್ಕಾರದ ಯಂತ್ರ ರಚನೆ ಎಲ್ಲವನ್ನೂ ತಾವಿದ್ದ ನಾಲ್ಕೂವರೆ ವರ್ಷದಲ್ಲಿ ನಮಗೆ ಬಳುವಳಿಯಾಗಿ ನೀಡಿದ್ದಾರೆ. ಅವರು ಆದರ್ಶ ನಮಗೆ ಬಿಟ್ಟು ಹೋಗಿದ್ದಾರೆ. ಆ ಮಹನೀಯರು ಹಾಕಿಕೊಟ್ಟಮಾರ್ಗದರ್ಶನದಲ್ಲಿ ನಾವು ನಡೆಯಬೇಕು ಎಂದು ನುಡಿದರು. ಕೆ.ಸಿ.ರೆಡ್ಡಿ ಅವರ ಜನ್ಮ ದಿನಾಚರಣೆ ವೇಳೆ ಅವರ ಪ್ರತಿಮೆ ಮಾಡುವ ಬಗ್ಗೆ ತೀರ್ಮಾನಿಸಲಾಗಿತ್ತು. ಅದರಂತೆ ಕರ್ನಾಟಕಕ್ಕೆ ಅಡಿಪಾಯ ಹಾಕಿದ ನಾಯಕನನ್ನು ನೆನೆಯಲು ವಿಧಾನಸೌಧದಲ್ಲಿ ಪ್ರತಿಮೆ ಅನಾವರಣ ಮಾಡಲಾಗಿದೆ ಎಂದರು.
ವಿಶ್ವ ಕನ್ನಡ ಸಮಾವೇಶಕ್ಕೆ ಪ್ರಧಾನಿಗೆ ಸಿಎಂ ಆಹ್ವಾನ: ಮುಂದಿನ ವರ್ಷ ದಾವಣಗೆರೆಯಲ್ಲಿ ನಡೆಯುವ ವಿಶ್ವ ಕನ್ನಡ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಹ್ವಾನ ನೀಡಿದ್ದಾರೆ. ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವದಲ್ಲಿ ಮಾತನಾಡಿದ ಅವರು, ದೂರದ ದೆಹಲಿಯಲ್ಲಿ ಕನ್ನಡದ ಕಂಪು ಕಾಣ್ತಿದೆ. ಕರ್ನಾಟಕ ಸಂಘ ಸ್ಥಾಪನೆಯಾಗಿ 75 ವರ್ಷ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಮಾರೋಪ ಸಮಾರಂಭದ ಉದ್ಘಾಟನೆ ಮಾಡಿದ್ದಾರೆ.
ಬಿಎಸ್ವೈಯಂತೆ ನಾನೂ ಬಿಜೆಪಿ ಸಂಘಟಿಸುವೆ: ವಿಜಯೇಂದ್ರ
ಏಳು ಕೋಟಿ ಜನರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಪುಣ್ಯ ಭೂಮಿ ಕನ್ನಡ ನಾಡಿನಲ್ಲಿ ಹುಟ್ಟಿಬೆಳೆಯುವುದು ಸೌಭಾಗ್ಯ. ಜ್ಞಾನ-ತಂತ್ರಜ್ಞಾನದಿಂದ ಕೂಡಿದ ನೆಲ ನಮ್ಮದು ಎಂದು ಹೇಳಿದರು. ಪ್ರಧಾನಿ ಮೋದಿ ಅವರ 5 ಟ್ರಿಲಿಯನ್ ಆರ್ಥಿಕತೆ ಕನಸಿಗೆ ಕರ್ನಾಟಕ 1 ಟ್ರಿಲಿಯನ್ ಭಾಗ ನೀಡಲಿದೆ. ಮುಂದಿನ ವರ್ಷ ದಾವಣಗೆರೆಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾನು ಆಹ್ವಾನಿಸಲಿದ್ದೇನೆ ವೇದಿಕೆ ಮೂಲಕ ಆಹ್ವಾನ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ