ವಿಶ್ವಾಸ ಮೂಡಲು ನಾನೇ ಮೊದಲ ಲಸಿಕೆ ಪಡೆಯುವೆ: ಸಚಿವ ಸುಧಾಕರ್

Kannadaprabha News   | Asianet News
Published : Jan 11, 2021, 04:11 PM IST
ವಿಶ್ವಾಸ ಮೂಡಲು ನಾನೇ ಮೊದಲ ಲಸಿಕೆ ಪಡೆಯುವೆ: ಸಚಿವ ಸುಧಾಕರ್

ಸಾರಾಂಶ

ಜನರಲ್ಲಿ ವಿಶ್ವಾಸ ಮೂಡಿಸಲು ನಾನೇ ಮೊದಲು ಲಸಿಕೆ ಪಡೆಯುತ್ತೇನೆ. ಆದರೆ ಅದಕ್ಕೂ ಮೊದಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಟವಾಗಬೇಕು. ಮಾರ್ಗಸೂಚಿಯಲ್ಲಿ ಯಾರಾರ‍ಯರು ಲಸಿಕೆ ಪಡೆಯಬಹುದು ಎಂಬಿತ್ಯಾದಿ ಎಲ್ಲಾ ಅಂಶಗಳೂ ಇರಲಿವೆ ಎಂದು ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜ.11): ನಿಯಮಗಳಲ್ಲಿ ಅವಕಾಶವಿದ್ದರೆ ರಾಜ್ಯದ ಜನರಿಗೆ ವಿಶ್ವಾಸ ಮೂಡಿಸಲು ನಾನೇ ಮೊದಲ ಲಸಿಕೆ ಪಡೆಯುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

ಭಾನುವಾರ ಲಸಿಕೆ ದಾಸ್ತಾನು ವ್ಯವಸ್ಥೆ ಪರಿಶೀಲನೆ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜನರಲ್ಲಿ ವಿಶ್ವಾಸ ಮೂಡಿಸಲು ನಾನೇ ಮೊದಲು ಲಸಿಕೆ ಪಡೆಯುತ್ತೇನೆ. ಆದರೆ ಅದಕ್ಕೂ ಮೊದಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಟವಾಗಬೇಕು. ಮಾರ್ಗಸೂಚಿಯಲ್ಲಿ ಯಾರಾರ‍ಯರು ಲಸಿಕೆ ಪಡೆಯಬಹುದು ಎಂಬಿತ್ಯಾದಿ ಎಲ್ಲಾ ಅಂಶಗಳೂ ಇರಲಿವೆ ಎಂದು ಹೇಳಿದರು.

ರಾಜ್ಯದಲ್ಲಿ ಸೀರಂ ಇನ್‌ಸ್ಟಿಟ್ಯೂಟ್‌ನ ಕೋವಿಶೀಲ್ಡ್‌ ಲಸಿಕೆ ಶೇಖರಣೆಗೆ ವ್ಯವಸ್ಥೆ ಮಾಡಿದ್ದೇವೆ. ಪುಣೆಯಿಂದ ವ್ಯಾಕ್ಸಿನ್‌ ಬರಲಿದ್ದು ಕೋಲ್ಡ್‌ ಸ್ಟೋರೇಜ್‌ ವ್ಯವಸ್ಥೆಯಲ್ಲಿ ದಾಸ್ತಾನು ಮಾಡಲಾಗುವುದು. ಒಂದು ವಯಲ್‌ನಲ್ಲಿ (ಬಾಟಲ್‌) 10 ಮಂದಿಗೆ ನೀಡುವಷ್ಟುಲಸಿಕೆ ಇರುತ್ತದೆ. ಒಂದು ಇಂಜೆಕ್ಷನ್‌ ಡೋಸ್‌ 0.5 ಎಂ.ಎಲ್‌. ಎಂದು ಮಾಹಿತಿ ನೀಡಿದರು.

ವಾರದಲ್ಲಿ ಹೊಸದಾಗಿ 2641 ಮಂದಿಗೆ ಕೊರೋನಾ ಸೋಂಕು

6 ಹಂತಗಳಲ್ಲಿ ಕೋಲ್ಡ್‌ ಚೈನ್‌:

ವ್ಯಾಕ್ಸಿನ್‌ ವಿತರಣೆಗೆ ಕೋಲ್ಡ್‌ ಚೈನ್‌ ಮಾಡಿದ್ದು, ವ್ಯಾಕ್ಸಿನ್‌ ಸಂರಕ್ಷಣೆ ಹಾಗೂ ವಿತರಣೆಗೆ ಆರು ಹಂತಗಳ ಕೋಲ್ಡ್‌ ಚೈನ್‌ ರೂಪಿಸಿದ್ದೇವೆ. ರಾಜ್ಯದ ಬೆಂಗಳೂರು, ಬೆಳಗಾವಿ ಎರಡು ಕಡೆ ರಾಜ್ಯ ಲಸಿಕಾ ದಾಸ್ತಾನು ಕೇಂದ್ರ ಸ್ಥಾಪಿಸಿದ್ದು, ಮುಂಬೈ ಕರ್ನಾಟಕ ಜಿಲ್ಲೆಗಳಿಗೆ ಬೆಳಗಾವಿಯಿಂದ ಹಾಗೂ ಉಳಿದ ಜಿಲ್ಲೆಗಳಿಗೆ ಬೆಂಗಳೂರಿನಿಂದ ಲಸಿಕೆ ವಿತರಣೆಯಾಗಲಿದೆ. ಒಟ್ಟು 5 ಪ್ರಾದೇಶಿಕ ಸಂಗ್ರಹ ವ್ಯವಸ್ಥೆ ಮಾಡಿದ್ದು, ಇವುಗಳಿಂದ ಜಿಲ್ಲಾ ಕೇಂದ್ರಗಳಿಗೆ ರವಾನೆಯಾಗಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ