ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ವರ್ಷದ ಮೊದಲ ಮಳೆ

Published : Jan 25, 2023, 12:43 PM IST
ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ವರ್ಷದ ಮೊದಲ ಮಳೆ

ಸಾರಾಂಶ

ರಾಜ್ಯದಲ್ಲಿ ವರ್ಷದ ಮೊದಲ ಮಳೆ ದಾಖಲಾಗಿದೆ. ಕೊಡಗು, ದ.ಕ. ಹಾಗೂ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಮಳೆಯಾಗಿದ್ದು, ಚಳಿಗಾಲದ ಚಳಿಗೆ ಮತ್ತಷ್ಟು ತಂಪೆರೆಯಿತು.  

ಮಂಗಳೂರು/ಮಡಿಕೇರಿ/ಚಿಕ್ಕಮಗಳೂರು(ಜ.25):  ರಾಜ್ಯದಲ್ಲಿ ವರ್ಷದ ಮೊದಲ ಮಳೆ ದಾಖಲಾಗಿದೆ. ಕೊಡಗು, ದ.ಕ. ಹಾಗೂ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಮಳೆಯಾಗಿದ್ದು, ಚಳಿಗಾಲದ ಚಳಿಗೆ ಮತ್ತಷ್ಟು ತಂಪೆರೆಯಿತು.

ಮಡಿಕೇರಿ, ಕುಶಾಲನಗರ, ಪೊನ್ನಂಪೇಟೆ, ವಿರಾಜಪೇಟೆ, ಸುಂಟಿಕೊಪ್ಪ, ಸಿದ್ದಾಪುರ, ಚೆಟ್ಟಳ್ಳಿ, ಪಾಲಿಬೆಟ್ಟ, ಕೊಟ್ಟಗೇರಿ, ಲಕ್ಕುಂದ, ಮಾಲ್ದಾರೆ ಸೇರಿ ಕೊಡಗಿನ ಹಲವೆಡೆ ಒಂದೂವರೆ ತಾಸು ಮಳೆ ಸುರಿಯಿತು. ಸೋಮವಾರಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಸಂಜೆಯಿಂದ ಭಾರಿ ಮಳೆ ಸುರಿಯುತ್ತಿದ್ದು, ರಾತ್ರಿ ಕೂಡ ಮುಂದುವರಿದಿದೆ. ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕುಶಾಲನಗರ ತಾಲೂಕು ನಂಜರಾಯಪಟ್ಟಣ ಬಳಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತುಕೊಂಡಿತು.

Chikkamagaluru: ಜನೆವರಿಯಲ್ಲೂ ಮಳೆ ಕಂಡು ಮಲೆನಾಡಿಗರು ಕಂಗಾಲು!

ಚಿಕ್ಕಮಗಳೂರು, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ, ಮೂಡಿಗೆರೆ ಹಾಗೂ ಕಳಸ ತಾಲೂಕುಗಳಲ್ಲಿ ಮಧ್ಯಾಹ್ನದ ನಂತರ ಮಳೆ ಬಂದಿದ್ದು, ಕಾಫಿ, ಅಡಿಕೆ ಕೊಯ್ಲಿಗೆ ತೊಂದರೆಯಾಯಿತು. ಕಣದಲ್ಲಿ ಒಣಗಿಸಲು ಹಾಕಿದ್ದ ಕಾಫಿ, ಮಳೆಯ ಪಾಲಾಗಿದೆ. ದಕ್ಷಿಣ ಕನ್ನಡದ ಪುತ್ತೂರು, ಉಪ್ಪಿನಂಗಡಿಗಳಲ್ಲಿ ಮಳೆಯಾಗಿದ್ದು, ಜಿಲ್ಲೆಯ ಉಳಿದೆಡೆ ಮೋಡ ಕವಿದ ವಾತಾವರಣವಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!