
ಬೆಂಗಳೂರು(ಸೆ.22): ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ(ಪಿಆರ್ಸಿಐ) ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ವಿನೂತನ ಉಪಕ್ರಮಗಳನ್ನು ಗುರುತಿಸಿ ಕೊಡಮಾಡುವ 2021ನೇ ಸಾಲಿನ ‘ಪಿಆರ್ಸಿಐ ಎಕ್ಸ್ಲೆನ್ಸ್’ ಪ್ರಶಸ್ತಿಗೆ ಕೆಎಸ್ಆರ್ಟಿಸಿ (KSRTC) ಐದು ವಿಭಾಗಗಳಲ್ಲಿ ಭಾಜನವಾಗಿದೆ.
ಸಾರ್ವಜನಿಕ ವಲಯದಲ್ಲಿ ಕೋವಿಡ್ ನಿರ್ವಹಣೆಗೆ ಬೆಳ್ಳಿ ಪದಕ, ಅತ್ಯುತ್ತಮ ಸಾರ್ವಜನಿಕ ಉದ್ದಿಮೆ ಸಾಮಾಜಿಕ ಹೊಣೆಗಾರಿಕೆಯಲ್ಲಿನ ಉಪಕ್ರಮ ಅನುಷ್ಠಾನಕ್ಕೆ ಕಂಚಿನ ಪದಕ, ಆರೋಗ್ಯ ರಕ್ಷಣೆ ಸಂವಹನ ಸಾಕ್ಷ್ಯಚಿತ್ರಗಳಿಗೆ ಕಂಚಿನ ಪದಕ, ಆಂತರಿಕ ನಿಯತಕಾಲಿಕೆ ‘ಸಾರಿಗೆ ಸಂಪದ’ಕ್ಕೆ ಚಿನ್ನದ ಪದಕ ಹಾಗೂ ಕೋವಿಡ್ ಸಮಯದಲ್ಲಿನ ಗ್ರಾಹಕ ಸ್ನೇಹಿ ಉಪಕ್ರಮಕ್ಕೆ ಚಿನ್ನದ ಪದಕ ಲಭಿಸಿದೆ.
ಸಾಲು ಸಾಲು ಹಬ್ಬ: ಹೆಚ್ಚುವರಿ ಬಸ್ ಓಡಿಸಲು ಕೆಎಸ್ಆರ್ಟಿಸಿ ಭರದ ಸಿದ್ಧತೆ
ಸೆ.18ರಂದು ಗೋವಾದಲ್ಲಿ(Goa) ಆಯೋಜಿಸಿದ್ದ 15ನೇ ವಿಶ್ವ ಸಾರ್ವಜನಿಕ ಸಂಪರ್ಕ ಮಂಡಳಿ ಸಮ್ಮೇಳನದಲ್ಲಿ ಕೆಎಸ್ಆರ್ಟಿಸಿಗೆ ಪ್ರಶಸ್ತಿ (Award) ಪ್ರದಾನ ಮಾಡಲಾಗಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ