
ವಿಧಾನಸಭೆ (ಜು.10) : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪಾಕ್ ಧ್ವಜಗಳ ಹಾರಾಟ ಪ್ರಾರಂಭವಾಗಿದೆ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ ಆರೋಪಿಸಿದ್ದಾರೆ.
ಸೋಮವಾರ ಬೆಳಗಾವಿಯ ಜೈನಮುನಿ ಹತ್ಯೆ ಕುರಿತು ಮಾತನಾಡುತ್ತಿದ್ದ ವೇಳೆ ಅವರು, ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಜನತೆ ಭೀತಿಯಲ್ಲಿ ಬದುಕುವಂತಾಗಿದೆ. ಟಿ.ನರಸೀಪುರದಲ್ಲಿ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ. ಈ ಸರ್ಕಾರದಲ್ಲಿ ಪಾಕ್ ಧ್ವಜಗಳ ಹಾರಾಟ ಶುರುವಾಗಿದೆ ಎಂದು ಹೇಳಿದರು.
ಇದಕ್ಕೆ ಕಾಂಗ್ರೆಸ್ ಸದಸ್ಯರು ಮತ್ತು ಸಭಾಧ್ಯಕ್ಷ ಯು.ಟಿ.ಖಾದರ್ ಆಕ್ಷೇಪ ವ್ಯಕ್ತಪಡಿಸಿದರು. ಜೈನಮುನಿಗಳ ಹತ್ಯೆ ಕುರಿತು ಮಾತನಾಡುವಾಗ ಬೇರೆ ವಿಷಯದ ಚರ್ಚೆ ಬೇಡ. ನಿಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ. ಬೇರೆ ಅವಧಿಯಲ್ಲಿ ಬೇಕಾದರೆ ಈ ವಿಷಯಗಳನ್ನು ಪ್ರಸ್ತಾಪಿಸಿ ಎಂದರು.
ಅದಕ್ಕಾಗಿ ಕಾಲಾವಕಾಶ ಕೋರಿದರೆ ನೀಡಲಾಗುವುದು. ಸದ್ಯಕ್ಕೆ ಜೈನಮುನಿಗಳ ಕೊಲೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ತಮ್ಮ ಆಗ್ರಹವೇನು ಎಂಬುದನ್ನು ತಿಳಿಸಬೇಕು ಎಂದು ಸಭಾಧ್ಯಕ್ಷರು ತಿಳಿಸಿದರು.
ಕಾಂಗ್ರೆಸ್ ಸದಸ್ಯರು ಸಹ ಅನಗತ್ಯವಾಗಿ ಯತ್ನಾಳ ಅವರು ವಿಷಯಾಂತರ ಮಾಡುತ್ತಿದ್ದಾರೆ. ಯಾವ ವಿಷಯದ ಮೇಲೆ ಚರ್ಚೆ ನಡೆಯುತ್ತಿದೆಯೋ ಅದಕ್ಕೆ ಸಂಬಂಧಪಟ್ಟಂತೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕು ಎಂದರು.
ಆಗ ಯತ್ನಾಳ, ಸರ್ಕಾರದ ಮೇಲೆ ವಿಶ್ವಾಸ ಇಲ್ಲ. ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ನೀಡಬೇಕು. ಒಂದು ಕೋಮಿನ ರಕ್ಷಣೆ ಮಾಡುವುದನ್ನು ಬಿಡಬೇಕು ಎಂದು ಆಗ್ರಹಿಸಿದರು.
ಸಿಎಂ ಆಗಲು 2400 ಕೋಟಿ ಬೇಕು: ಯತ್ನಾಳ್ ಹಳೆ ಹೇಳಿಕೆ ಜಟಾಪಟಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ