ಅಕ್ರಮ ಬಿಪಿಎಲ್‌ ಕಾರ್ಡ್‌ ಹೊಂದಿದವರಿಗೆ ಢವ ಢವ ..!

By Kannadaprabha NewsFirst Published Aug 15, 2024, 4:52 AM IST
Highlights

ರಾಜ್ಯದಲ್ಲಿ ಶೇ.80ರಷ್ಟು ಮಂದಿ 100 ಸಿಸಿ ಮೇಲ್ಪಟ್ಟ ಇಂಧನ ಚಾಲಿತ ದ್ವಿಚಕ್ರ, ತ್ರಿಚಕ್ರ, ಕಾರು ಸೇರಿ ಇತ್ಯಾದಿ ವಾಹನ ಹೊಂದಿರುವ ಕುಟುಂಬಗಳಿವೆ. ಪ್ರತಿಮನೆಮನೆಯಲ್ಲೂ ಒಂದಿಲ್ಲೊಂದು ವಾಹನಗಳಿವೆ. ಪ್ರತಿಶತ ಸರಾಸರಿ 450 ರು.ಗಿಂತ ಅಧಿಕ ವಿದ್ಯುತ್ ಬಿಲ್ ಪಾವತಿಸುತ್ತಾರೆ. ಇಂತಹ ಮಾನದಂಡ ಗಳ ಅಡಿಯಲ್ಲಿ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸಬಾರದು.

ಸಂಪತ್ ತರೀಕೆರೆ

ಬೆಂಗಳೂರು(ಆ.15): ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಚುರುಕು ನೀಡಿದ್ದು, ಬಿಪಿಎಲ್ ಹೊಂದಿರುವ ಲಕ್ಷಾಂತರ ಕುಟುಂಬಗಳಿಗೆ ಸಂಕಷ್ಟ ಶುರುವಾಗಲಿದೆ. ಈ ನಡುವೆಯೇ ಬಿಪಿಎಲ್ ಕಾರ್ಡ್ ಪಡೆಯಲು ಈ ಹಿಂದೆ ನಿಗದಿ ಮಾಡಿರುವ ಅವೈಜ್ಞಾನಿಕ ಮಾನದಂಡ ಬದಲಾವಣೆ ಮಾಡಬೇಕೆಂಬ ಒತ್ತಾಯವೂ ಕೇಳಿಬಂದಿದೆ.

Latest Videos

ಯಾರು ಅನರ್ಹರು?

ತೆರಿಗೆ ಪಾವತಿಸುವವರು, ಸರ್ಕಾರಿ ಮತ್ತು ಆರೆ ಸರ್ಕಾರಿ ನೌಕರರಿರುವ ಕುಟುಂಬ, ಮನೆಗಳನ್ನು ಬಾಡಿಗೆಗೆ ಕೊಟ್ಟಿ ರುವವರು, 7.5 ಎಕರೆಗಿಂತ ಹೆಚ್ಚು ಜಮೀನು ಹೊಂದಿರು ವವರು, ಸ್ವಂತಕ್ಕೆಂದು4 ಚಕ್ರದವಾಹನ ಹೊಂದಿರುವವರು ಬಿಪಿಎಲ್, ಅಂತ್ಯೋದಯ ಕಾರ್ಡು ಪಡೆಯುವಂತಿಲ್ಲ.

ಅನ್ನಭಾಗ್ಯ ಅಕ್ಕಿ ಹಣ ಬಿಡುಗಡೆಗೆ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಚಿವ ಮುನಿಯಪ್ಪ

ಸಿಕ್ಕಿಬಿದ್ದರೆ ಏನು ಶಿಕ್ಷೆ?

ವೇಳೆ ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದು ಸಾಬೀತಾದರೆ ಇದುವರೆಗೂ ನ್ಯಾಯಬೆಲೆ ಅಂಗಡಿ ಯಲ್ಲಿ ಪಡೆದ ಅಕ್ಕಿ ಅಥವಾ ಇತರೆ ಧಾನ್ಯಗಳ ಮೊತ್ತವನ್ನು (ಅಕ್ಕಿ ಕೆಜಿಗೆ ತಲಾ 35 ರು.ನಂತೆ) ಮರಳಿಸಬೇಕು. 
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಶೇ.76.04, ನಗರ ಪ್ರದೇಶಗಳಲ್ಲಿ ಶೇ.49.36 ಸೇರಿ ಒಟ್ಟು 3,58,87,666 ಫಲಾನುಭವಿಗಳಿಗೆ 1,03,70,666 2 ನೀಡಬೇಕೆಂಬ ನಿಯಮವಿದೆ. ಆದರೆ, ರಾಜ್ಯದಲ್ಲಿ ಸದ್ಯ 3,93,29,981 1,16,51,209 ಬಿಪಿಎಲ್ ಕಾರ್ಡ್ ನೀಡಲಾಗಿದೆ. ನಿಗದಿಗಿಂತ ಹೆಚ್ಚುವರಿಯಾಗಿ 14 ಲಕ್ಷ ಬಿಪಿಎಲ್‌ ಕಾರ್ಡ್‌ಗಳಿವೆ.

ಬಚಾವ್‌: 

ಅರ್ಹತೆ ಇಲ್ಲದೆ, ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಅಥವಾ ಅಂತ್ಯೋದಯ ಕಾರ್ಡ್‌ಗಳನ್ನು ಪಡೆದಿ ರುವವರು ಹಿಂದಿರುಗಿಸುವಂತೆ ಆಹಾರ ಇಲಾಖೆ ಈಗಾಗಲೇ ಅನೇಕ ಬಾರಿ ಕಾಲಾವಕಾಶ ನೀಡಿತ್ತು. ನಿಗದಿತ ಅವಧಿ ಯಲ್ಲಿ ಅನರ್ಹರು ಪಡೆದ ಬಿಪಿಎಲ್ ಕಾರ್ಡುಗಳನ್ನು ಹಿಂದಿರುಗಿಸದಿದ್ದರೆ ಕ್ರಿಮಿನಲ್ ಕೇಸು ದಾಖಲಿಸುವ ಎಚ್ಚರಿಕೆ ಯನ್ನು ಕೂಡ ನೀಡಿತ್ತು. ಹೀಗಾಗಿ ಅನೇಕರು ಬಿಪಿಎಲ್, ಅಂತ್ಯೋದಯ ಕಾರ್ಡುಗಳನ್ನು ಹಿಂದಿರುಗಿಸುವ ಮೂಲಕ ಕಾನೂನು ಕ್ರಮಕ್ಕೆ ಒಳಗಾಗುವುದರಿಂದ ಪಾರಾಗಿದ್ದರು.

ಆದರೆ ಇನ್ನೂ ಅನೇಕರು ಅನರ್ಹರಾಗಿದ್ದರೂ ಫಲಾನುಭವಿಗ ಳಂತೆ ಸವಲತ್ತು ಪಡೆಯುತ್ತಿರುವುದರ ಬಗ್ಗೆ ಆಹಾರ ಇಲಾಖೆ ಎಚ್ಚೆತ್ತುಕೊಂಡು ಹುಡುಕಾಟ ಆರಂಭಿಸಿತ್ತು. 2018ರಿಂದ 2020ರವರೆಗೆ ಬರೋಬ್ಬರಿ 12,47,151 ಕಾರ್ಡ್‌ಗಳನ್ನು ರದ್ದು ಮಾಡಲಾಗಿದ್ದು, ಈ ಪೈಕಿ 9.301 ಅಂತ್ಯೋದಯ, 10,18,963 " .

ಅನರ್ಹರ ಹುಡುಕಾಟ:

ಇದೀಗ ಮತ್ತೆ ಅನರ್ಹ ಅಂತ್ಯೋದಯ, ಬಿಪಿಎಲ್ ಫಲಾನುಭವಿಗಳ ಹುಡುಕಾಟ ಆರಂಭಿಸಿ ರುವ ಆಹಾರ ಇಲಾಖೆ ಈ ಹಿಂದೆ ಹೊರಡಿಸಿದ್ದ ಮಾನದಂಡಗಳ ಪಟ್ಟಿ ಹಿಡಿದುಕೊಂಡು ಪತ್ತೆ ಕಾರ್ಯ ಆರಂಭಿ ಸಿದೆ. ತೆರಿಗೆ ಪಾವತಿ ಮಾಡುತ್ತಿರುವ ಸದಸ್ಯರ ಕುಟುಂಬ, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರಿರುವ ಕುಟುಂಬ, ವಿವಿಧ ಮಂಡಳಿ, ನಿಗಮಗಳ ಕಾಯಂ ನೌಕರರಿರುವ ಕುಟುಂಬ, ವಿವಿಧ ಕಂಪನಿಗಳಲ್ಲಿ ಕಾರ್ಯನಿರ್ವಹಿ ಸುವ ವರು, ಮನೆಗಳನ್ನು ಬಾಡಿಗೆಗೆ ಕೊಟ್ಟು ಜೀವಿಸುವವರು, 7.5 ಎಕರೆಗಿಂತ ಹೆಚ್ಚು ಒಣ ಮತ್ತು ನೀರಾವರಿ ಜಮೀನು ಹೊಂದಿರುವವರು, ಸ್ವಂತಕ್ಕೆಂದು ನಾಲ್ಕು ಚಕ್ರದ ವಾಹನ ಇಟ್ಟುಕೊಂಡಿರುವವರು ಬಿಪಿಎಲ್, ಅಂತ್ಯೋದಯ ಕಾರ್ಡು ಪಡೆಯುವಂತಿಲ್ಲ.
ಈ ಹಿಂದೆಯೇ ಆಹಾರ ಇಲಾಖೆ ತೆರಿಗೆ ಪಾವತಿಸುವವರ ಪಟ್ಟಿ ಪಡೆದು, ಅಂತಹ ಕುಟುಂಬಗಳ ಬಿಪಿಎಲ್ ಕಾರ್ಡು ರದ್ದು ಪಡಿಸಲು ಕ್ರಮಕೈ ಗೊಂಡಿತ್ತು. ಜೊತೆಗೆ ಆರ್‌ಟಿಓ ಕಚೇರಿ ಗಳಲ್ಲಿ ನೋಂದಣಿ ಮಾಡಿದ ವಾಹನ ಗಳನ್ನು ಆಧಾ‌ರ್ ಮೂಲಕ ಪತ್ತೆ ಹಚ್ಚಿ ಅಂತಹ ಕುಟುಂಬದ ಬಿಪಿಎಲ್ ಕಾರ್ಡ್ ರದ್ದಿಗೂ ಕ್ರಮಕೈಗೊಂಡಿದ್ದು, ಇದೀಗ ಈ ಕಾರ್ಯವನ್ನು ಮುಂದುವರೆಸಿದೆ.

ಒಂದು ವೇಳೆ ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಅದನ್ನು ಆಯಾ ತಾಲೂಕಿನ ಕಚೇರಿಗೆ ತೆರಳಿ ಸ್ವಯಂ ಪ್ರೇರಿತವಾಗಿ ನೀಡಬೇಕು. ಇಲ್ಲದಿದ್ದರೆ ಆಹಾರ ಇಲಾಖೆಯೇ ಪತ್ತೆ ಮಾಡಿದಂತೆ ಅಂತವರಿಂದ ಇದುವರೆಗೂನ್ಯಾಯಬೆಲೆ ಅಂಗಡಿಯಲ್ಲಿ ಪಡೆದ ಅಕ್ಕಿ ಅಥವಾ ಇತರೆ ಧಾನ್ಯಗಳ ಮೊತ್ತವನ್ನು (ಅಕ್ಕಿ ಕೆಜಿಗೆ ತಲಾ 35 ರು.ನಂತೆ) ವಸೂಲಿ ಮಾಡುಲಾಗುತ್ತದೆ. ಜೊತೆಗೆಅಂತಹವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು ಮಾಡುವ ಎಚ್ಚರಿಕೆ ನೀಡಲಾಗಿದೆ.

ಬಿಪಿಎಲ್ ರೇಷನ್ ಕಾರ್ಡ್‌‌ನವರಿಗೆ ಅಕ್ಕಿ, ಗೋಧಿ, ರಾಗಿ ಜೊತೆಗೆ ಕಾಂಡೋಮ್ ಉಚಿತ!

ಅವೈಜ್ಞಾನಿಕ ಮಾನದಂಡ ರದ್ದಿಗೆ ಆಗ್ರಹ: 

ರಾಜ್ಯದಲ್ಲಿ ಶೇ.80ರಷ್ಟು ಮಂದಿ 100 ಸಿಸಿ ಮೇಲ್ಪಟ್ಟ ಇಂಧನ ಚಾಲಿತ ದ್ವಿಚಕ್ರ, ತ್ರಿಚಕ್ರ, ಕಾರು ಸೇರಿ ಇತ್ಯಾದಿ ವಾಹನ ಹೊಂದಿರುವ ಕುಟುಂಬಗಳಿವೆ. ಪ್ರತಿಮನೆಮನೆಯಲ್ಲೂ ಒಂದಿಲ್ಲೊಂದು ವಾಹನಗಳಿವೆ. ಪ್ರತಿಶತ ಸರಾಸರಿ 450 ರು.ಗಿಂತ ಅಧಿಕ ವಿದ್ಯುತ್ ಬಿಲ್ ಪಾವತಿಸುತ್ತಾರೆ. ಇಂತಹ ಮಾನದಂಡ ಗಳ ಅಡಿಯಲ್ಲಿ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸಬಾರದು.

ದಿನೇ ದಿನೆ ಅಗತ್ಯವಸ್ತುಗಳ ಬೆಲೆ ಹೆಚ್ಚುತ್ತಿದ್ದು 18ರಿಂದ 20 ಸಾವಿರ ವೇತನ ಪಡೆದರೂ ಕುಟುಂಬ ನಿರ್ವಹಣೆ ಮಾಡಲಾಗದ ಸ್ಥಿತಿ ಇದೆ. ಸರ್ಕಾರ ಈ ಬಗ್ಗೆ ಚಿಂತನೆ ನಡೆಸಬೇಕು. ಆರ್ಥಿಕವಾಗಿ ಸಬಲರಾಗಿದ್ದು ಸುಳ್ಳು ದಾಖಲೆಗಳಿಂದ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಮಾತ್ರ ರದ್ದುಪಡಿಸಬೇಕೆಂಬ ಆಗ್ರಹ ಸಾರ್ವ ಜನಿಕ ವಲಯದಿಂದ ಕೇಳಿಬಂದಿದೆ.

click me!