ಸಿದ್ದರಾಮಯ್ಯಗೆ ಅನ್ಯಾಯ ಮಾಡಿದ್ದಕ್ಕೆ ಕೊಡಗಿನಲ್ಲಿ ಜಲ ಪ್ರಳಯ!: ಕಾಗಿನೆಲೆ ಶ್ರೀ

Published : Feb 09, 2019, 09:09 AM ISTUpdated : Feb 09, 2019, 11:58 AM IST
ಸಿದ್ದರಾಮಯ್ಯಗೆ ಅನ್ಯಾಯ ಮಾಡಿದ್ದಕ್ಕೆ ಕೊಡಗಿನಲ್ಲಿ ಜಲ ಪ್ರಳಯ!: ಕಾಗಿನೆಲೆ ಶ್ರೀ

ಸಾರಾಂಶ

ಸಿದ್ದರಾಮಯ್ಯಗೆ ಅನ್ಯಾಯ ಮಾಡಿದ್ದಕ್ಕೆ ಕೊಡಗಿನಲ್ಲಿ ಜಲ ಪ್ರಳಯ ಉಂಟಾಗಿತ್ತು ಎಂದು ಕಾಗಿನೆಲೆ ಶ್ರೀಗಳು ವಿವಾದಾತ್ಮಕ ಹೆಳಿಕೆ ನೀಡಿದ್ದಾರೆ.

ಮೈಸೂರು[ಫೆ.09]: ಉತ್ತಮ ಆಡಳಿತ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯಗೆ ಅನ್ಯಾಯ ಮಾಡಿದ್ದಕ್ಕೆ ಕೊಡಗಿನಲ್ಲಿ ಜಲ ಪ್ರಳಯವಾಯಿತು ಎಂದು ಕಾಗಿನೆಲೆ ಕನಕ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರಿನ ಸಿದ್ದಾರ್ಥ ನಗರದಲ್ಲಿ ನಡೆದ ಕನಕ ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಕೃಷ್ಣನನ್ನು ನೋಡಲು ಹೋದ ಕನಕನ ಕಂಡು ಭೂಮಿ ಕಂಪಿಸಿತ್ತು. ಹಾಗೆಯೇ ಒಳ್ಳೆಯ ಕಾರ್ಯಕ್ರಮ ನೀಡಿದ ಸಿದ್ದರಾಮಯ್ಯಗೆ ಜನತೆ ವಿರುದ್ಧವಾಗಿ ವರ್ತಿಸಿದರು ಎಂದರು. ಒಂದು ಕೋಮು ಸಿದ್ದರಾ ಮಯ್ಯಗೆ ಅನ್ಯಾಯ ಮಾಡಿತು.

ಇದೇ ವೇಳೆ ಕುರುಬ ಸಮುದಾಯದ ನಾಯಕರಾದ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಡಿಯೋದಲ್ಲಿ ಕೀಳು ಭಾಷೆ ಬಳಸಿದ್ದಾರೆ. ಹಿರಿಯರಾದ ಯಡಿಯೂರಪ್ಪ ಅವರು ತಮ್ಮ ನಾಲಿಗೆಗೆ ಲಗಾಮು ಹಾಕಿಕೊಳ್ಳಬೇಕೆಂದು ಗೌರವಪೂರ್ವಕವಾಗಿಯೇ ಹೇಳುತ್ತಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ