CD ಪ್ರಕರಣ ಹಿಂದಿರುವ ಕಾಣದ ಕೈ ಯಾರದ್ದು? ಬಿಜೆಪಿಯಿಂದ ಮೊದಲ ಅಧಿಕೃತ ಹೇಳಿಕೆ!

Published : Mar 16, 2021, 12:40 PM ISTUpdated : Mar 16, 2021, 02:23 PM IST
CD ಪ್ರಕರಣ ಹಿಂದಿರುವ ಕಾಣದ ಕೈ ಯಾರದ್ದು? ಬಿಜೆಪಿಯಿಂದ ಮೊದಲ ಅಧಿಕೃತ ಹೇಳಿಕೆ!

ಸಾರಾಂಶ

ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ| ದೀರ್ಘ ಮೌನ ವಹಿಸಿದ್ದ ಬಿಜೆಪಿಯಿಂದ ಮೊದಲ ಅಧಿಕೃತ ಹೇಳಿಕೆ| ಒಂದೇ ಬಾಣದಿಂದ ಎರಡು ಹಕ್ಕಿಗಳಿಗೆ ಗುರಿ ಇಟ್ಟ ಬಿಜೆಪಿ

ಬೆಂಗಳೂರು(ಮಾ.16) ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹಾಗೂ ಕರ್ನಾಟಕ ಸರ್ಕಾರಕ್ಕೆ ಭಾರೀ ಮುಜುಗರ ಹುಟ್ಟಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳಗ್ಳುತ್ತಿದೆ. ಬಿಜೆಪಿ, ಕಾಂಗ್ರೆಸ್‌ ನಾಯಕರು ಕೂಡಾ ಪರಸ್ಪರ ವಾಗ್ದಾಳಿ ನಡೆಸುತ್ತಿದ್ದರೆ, ಅತ್ತ ಎಸ್‌ಐಟಿ ಸೈಲೆಂಟಾಗಿ ತನ್ನ ತನಿಖೆ ಮುಂದುವರೆಸಿದೆ. ಆದರೆ ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿಯು ಈ ಪ್ರಕರಣ ಸಂಬಂಧ ಇದೇ ಮೊದಲ ಬಾರಿ ಅಧಿಕೃತ ಹೇಳಿಕೆ ನೀಡಿದೆ. ಈ ಮೂಲಕ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಸುಳಿವು ನೀಡಿದ್ದಾರೆ.

ಹೌದು ಕರ್ನಾಟಕ ಬಿಜೆಪಿ ಟ್ವಿಟರ್‌ ಅಕೌಂಟ್‌ನಿಂದ ಪ್ರಕರಣ ಸಂಬಂಧ ಮಹತ್ವದ ಟ್ವೀಟ್ ಮಾಡಲಾಗಿದೆ. ಪ್ರಕರಣದಲ್ಲಿ ಯಾರಿದ್ದಾರೆಂಬ ಕುರಿತಾಗಿ ಸುಳಿವು ನೀಡಿ ಮಾಡಲಾದ ಈ ಟ್ವೀಟ್‌ನಲ್ಲಿ, ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ.

"

ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ.

ರಾಹುಲ್‌ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ? ಎನ್ನುವುದರೊಂದಿಗೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬಗ್ಗೆಯೂ ಪ್ರಶ್ನಿಸಿ ಒಂದೇ ಬಾಣದಲ್ಲಿ ಎರಡು ಹಕ್ಕಿಗೆ ಗುರಿ ಇಟ್ಟಿದೆ. 

ಇನ್ನು ಬಿಜೆಪಿಯ ಈ ಟ್ವೀಟ್‌ಗೆ ಕಾಂಗ್ರೆಸ್‌ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ಕಾದು ನೊಡಬೇಕಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ