ನಾಗಮಲೆಗೆ ಹೋಗುವ ಭಕ್ತರಿಗೆ ನಿರ್ಬಂಧ ವಿಧಿಸಿದ ಅರಣ್ಯ ಇಲಾಖೆ; ಉದ್ಯೋಗ ಕಿತ್ತುಕೊಳ್ತಿದೆ ಎಂದು ಸ್ಥಳೀಯರು ಆಕ್ರೋಶ

Published : Feb 27, 2024, 11:56 PM IST
ನಾಗಮಲೆಗೆ ಹೋಗುವ ಭಕ್ತರಿಗೆ ನಿರ್ಬಂಧ ವಿಧಿಸಿದ ಅರಣ್ಯ ಇಲಾಖೆ; ಉದ್ಯೋಗ ಕಿತ್ತುಕೊಳ್ತಿದೆ ಎಂದು ಸ್ಥಳೀಯರು ಆಕ್ರೋಶ

ಸಾರಾಂಶ

ನಾಗಮಲೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದ್ದು ಭಕ್ತರು ಹಾಗೂ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಚಾರಣಿಗರ ಮೇಲೆ ನಿಗಾಯಿಡಲೂ ಒಂದು ಬುಕ್ಕಿಂಗ್ ಆ್ಯಪ್ ತರಲೂ ಅರಣ್ಯ ಇಲಾಖೆ ಪ್ಲ್ಯಾನ್ ಮಾಡಿದೆ. ಆದ್ರೆ ಸ್ಥಳೀಯ ಕುಟುಂಬಗಳ ಉದ್ಯೋಗಕ್ಕೆ ಕತ್ತರಿ ಹಾಕಿ ಬದುಕು ಮೂರಾಬಟ್ಟೆ ಮಾಡಲೂ ಹೊರಟಿದೆ.

ವರದಿ - ಪುಟ್ಟರಾಜು

ಚಾಮರಾಜನಗರ (ಫೆ.27): ಅದು ದಟ್ಟ ಕಾನನದ ನಡುವೆ ಇರುವ  ಆಧ್ಯಾತ್ಮಿಕ ಕ್ಷೇತ್ರ. ಭಕ್ತರು ತಮ್ಮ ಆರಾಧ್ಯ ದೇವರ ದರ್ಶನ ಮಾಡಲು ಕಾಲ್ನಡಿಗೆಯಲ್ಲಿ ಬೆಟ್ಟಗುಡ್ಡ ಹತ್ತಿಯೇ ಅಲ್ಲಿಗೆ ತಲಪಬೇಕು. ತಲೆ ತಲಾಂತರಗಳಿಂದ ಯಾವುದೇ ನಿರ್ಬಂಧ ಇಲ್ಲದೆ ದೇವರ ದರ್ಶನ ಪಡೆಯುತ್ತಿದ್ದ ಭಕ್ತರಿಗೆ ಇದೀಗ ಅರಣ್ಯ ಇಲಾಖೆ ಟ್ರೆಕ್ಕಿಂಗ್ ನಿಷೇಧ ಹೆಸರಿನಲ್ಲಿ ನಿರ್ಬಂಧ ಹೇರುವ ಮೂಲಕ ಲಕ್ಷಾಂತರ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪ ಕೇಳಿ ಬಂದಿದೆ.

ಹೌದು 77 ಮಲೆಗಳನ್ನು ಹೊಂದಿರುವ ಮಹದೇಶ್ವರ  ಬೆಟ್ಟದಲ್ಲಿ ನಾಗಮಲೆಯು ಒಂದು. ಮಹದೇಶ್ವರ  ಈಗಿರುವ  ನಡುಮಲೆಯಿಂದ ತೆರಳಿ ನಾಗಮಲೆಯಲ್ಲಿ ತಪಸ್ಸು ಮಾಡಿ ಇಲ್ಲಿಯೇ ನೆಲೆಸಿದ್ದಾನೆ ಎಂಬ ಪುರಾಣವಿದೆ.  ತಪಸ್ಸು ಮಾಡುವಾಗ ಹಾವು ತನ್ಮ ಹೆಡೆ ಬಿಚ್ಚಿ ನೆರಳು ನೀಡಿತ್ತೆಂದು ಭಕ್ತರ ನಂಬಿಕೆಯಾಗಿದ್ದು ಇದಕ್ಕೆ ಪೂರಕವಾಗಿ ಇಲ್ಲಿ ಹಾವಿನ ಹೆಡೆ ಆಕಾರದ ಬೃಹತ್ ಬಂಡೆ ಇದೆ. ಭಕ್ತರ ಪಾಲಿನ ಧಾರ್ಮಿಕ ಕ್ಷೇತ್ರವಾಗಿರುವ ನಾಗಮಲೆ, ಒಂದು ರೀತಿಯಲ್ಲಿ ಚಾರಣ ಪ್ರದೇಶವೂ ಹೌದು.

ಮಹದೇಶ್ವರ ಬೆಟ್ಟದಿಂದ 15 ಕಿಲೋಮೀಟರ್ ದೂರ ಇರುವ  ನಾಗಮಲೆಗೆ ಕಾಲ್ನಡಿಗೆಯಲ್ಲೇ ಬೆಟ್ಟ ಗುಡ್ಡ ಹತ್ತಿ ಇಳಿದು ಹೋಗಬೇಕು. ಮಹದೇಶ್ವರ ಬೆಟ್ಟಕ್ಕೆ ಬರುವ  ಭಕ್ತರು  ನಾಗಮಲೆಗು ಹೋಗುವುದು ವಾಡಿಕೆ. ದೇವರ ದರ್ಶನ ಪಡೆಯಲು ಭಕ್ತರು ನಾಗಮಲೆಗೆ ತೆರಳುತ್ತಾರೆಯೇ ಹೊರತು ಯಾರೂ ಸಹ ಟ್ರೆಕ್ಕಿಂಗ್ ಹೆಸರಿನಲ್ಲಿ ಹೋಗೋದಿಲ್ಲ. ಆದರೆ ಅರಣ್ಯ ಇಲಾಖೆ ಇಲ್ಲಿ ಚಾರಣ ನಿಷೇಧಿಸಿರುವುದರಿಂದ ನಾಗಮಲೆಯಲ್ಲಿ ನೆಲೆಸಿರುವ  ಮಹದೇಶ್ವರನ ದರ್ಶನಕ್ಕೆ ಬ್ರೇಕ್ ಬಿದ್ದಿದೆ.

ರಾಮನ ಹಾಡು ಹಾಡ್ತಿದ್ದ ವೇಳೆ ಅಸಮಾಧಾನದಿಂದ ಹೊರ ಹೋದ್ರಾ ಸಚಿವ ವೆಂಕಟೇಶ್? ವಿಡಿಯೋ ವೈರಲ್

ಇನ್ನೂ ಚಾರಣ ನಿಷೇಧದಿಂದ ತೊಳಸೀಕೆರೆ, ಪಡಿಸಲನತ್ತ, ಇಂಡಿಗನತ್ತ, ನಾಗಮಲೆ ಗ್ರಾಮಸ್ಥರ ಸಂಕಷ್ಟಕ್ಕೆ ಕಾರಣವಾಗಿದೆ. ನಾಗಮಲೆ ಹೋಗುವ ಭಕ್ತರನ್ನ ನಂಬಿ ಅಂಗಡಿ, ಮುಗ್ಗಟ್ಟು ಹಾಗೂ ಜೀಪ್ ಗಳನ್ನು ತಂದಿದ್ದಾರೆ. ಮಹದೇಶ್ವರ ಬೆಟ್ಟದಿಂದ ಜೀಪ್ ಗಳ ಮೂಲಕ ನಾಗಮಲೆಯತ್ತ ಜನರನ್ನು ಕರೆದುಕೊಂಡು ಹೋಗ್ತಿದ್ದರು. ಇದೀಗಾ ಅವರ ಉದ್ಯೋಗ ಕಿತ್ತುಕೊಳ್ಳುವ ಜೊತೆಗೆ ಜನರ ಬದುಕನ್ನು ಮೂರಾಬಟ್ಟೆ ಮಾಡುವ ಕೆಲಸಕ್ಕೆ ಅರಣ್ಯ ಇಲಾಖೆ ಕೈ ಹಾಕಿದೆ. ಬರುವ ಭಕ್ತಾಧಿಗಳನ್ನು ನಂಬಿ ಜೀವನ ಮಾಡ್ತಿದ್ವಿ ಇದೀಗಾ ಮುಂದೇನು ಅಂತಾ ದಿಕ್ಕೆ ತೋಚದಂತಾಗಿದೆ ಎಂದು ಆಕ್ರೋಶ ಹೊರ ಹಾಕ್ತಿದ್ದಾರೆ.

ಚಾಮರಾಜನಗರ: ಮಲೆಮಹದೇಶ್ವರ ಹುಂಡಿ ಎಣಕೆ, 2.16 ಕೋಟಿ ರೂಪಾಯಿ ಸಂಗ್ರಹ

ಸದ್ಯಕ್ಕೆ ನಾಗಮಲೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದ್ದು ಭಕ್ತರು ಹಾಗೂ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಚಾರಣಿಗರ ಮೇಲೆ ನಿಗಾಯಿಡಲೂ ಒಂದು ಬುಕ್ಕಿಂಗ್ ಆ್ಯಪ್ ತರಲೂ ಅರಣ್ಯ ಇಲಾಖೆ ಪ್ಲ್ಯಾನ್ ಮಾಡಿದೆ. ಆದ್ರೆ ಸ್ಥಳೀಯ ಕುಟುಂಬಗಳ ಉದ್ಯೋಗಕ್ಕೆ ಕತ್ತರಿ ಹಾಕಿ ಬದುಕು ಮೂರಾಬಟ್ಟೆ ಮಾಡಲೂ ಹೊರಟಿದೆ. ಇನ್ನಾದ್ರೂ ಎಚ್ಚೆತ್ತು ಅರಣ್ಯ ಇಲಾಖೆ ಸ್ಥಳೀಯರ ಹಾಗೂ ಭಕ್ತರ ಪರ ನಿಲ್ಲುತ್ತಾ ಅನ್ನೋದ್ನ ಕಾದುನೋಡಬೇಕಾಗಿದೆ...

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!