
ದಾವಣಗೆರೆ(ಏ.21): ಮಠಗಳಿಗೆ(Matha) ನೀಡುವ ಅನುದಾನ ಬಿಡುಗಡೆಗೂ ಕಮಿಷನ್ ಕೊಡಬೇಕು ಎಂಬ ದಿಂಗಾಲೇಶ್ವರ ಶ್ರೀಗಳ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yediyurappa) ತೀವ್ರ ಕಿಡಿಕಾರಿದ್ದಾರೆ. ಮಠಗಳಿಗೆ ನೀಡುವ ಅನುದಾನದಲ್ಲಿ ಶೇ.30 ಕಮಿಷನ್(30% Commission) ನೀಡಬೇಕೆಂಬ ಆರೋಪ ಮಾಡಿರುವ ದಿಂಗಾಲೇಶ್ವರ ಸ್ವಾಮೀಜಿ(Dingaleshwara Swamiji) ಅವರು, ಕಮಿಷನ್ ವಿಚಾರವಾಗಿ ಸಾಕ್ಷ್ಯ ಕೊಡಲಿಕ್ಕಾಗುತ್ತದೆಯೇ ಎಂಬುದಾಗಿ ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿಗಳೇ ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡಿದರೆ ಏನು ಹೇಳಬೇಕು? ಎಂದು ಮಾಜಿ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ:
ರಾಜ್ಯದಲ್ಲಿ(Karnataka) ಅವಧಿಗೆ ಮುನ್ನ ವಿಧಾನಸಭೆ ಚುನಾವಣೆ(Assembly Election) ನಡೆಸುವ ಉದ್ದೇಶವಿಲ್ಲ. 2023ರ ಚುನಾವಣೆಗೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಹಿಂದೂ, ಆರ್ಎಸ್ಎಸ್ ವಿರೋಧಿ ಸಿದ್ಧಲಿಂಗ ಶ್ರೀ ಜನ್ಮದಿನ ಭಾವೈಕ್ಯತಾ ದಿನವೇಕೆ?: ದಿಂಗಾಲೇಶ್ವರ ಶ್ರೀ
ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭೆ ಚುನಾವಣೆ ವಿಚಾರವಾಗಿ ನಮ್ಮ ಕೇಂದ್ರ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ. ಅವಧಿಗೆ ಮುನ್ನ ಚುನಾವಣೆ ನಡೆಸುವ ಉದ್ದೇಶವಂತೂ ಇಲ್ಲ ಎಂದರು.
ಪ್ರಧಾನಿ ಮೋದಿ(Narendra Modi) ಸೇರಿ ರಾಷ್ಟ್ರೀಯ ನಾಯಕರು ಕೊಟ್ಟ 150 ಕ್ಷೇತ್ರಗಳ ಗೆಲ್ಲುವ ಗುರಿಗಾಗಿ ನಾವು ಕಾರ್ಯತಂತ್ರ ರೂಪಿಸುತ್ತಿದ್ದೇವೆ. 150 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವುದು ನಮ್ಮೆಲ್ಲರ ಗುರಿ. ರಾಜ್ಯದಲ್ಲಿ ಬಿಜೆಪಿಗೆ(BJP) ಉತ್ತಮ ವಾತಾವರಣವಿದ್ದು, ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಾರದ ನಂತರ ರಾಜ್ಯ ಪ್ರವಾಸ:
ಇನ್ನು ಒಂದು ವಾರದ ನಂತರ ರಾಜ್ಯ ಪ್ರವಾಸ ಆರಂಭಿಸಲಿದ್ದೇವೆ. ಪ್ರತಿ ಜಿಲ್ಲೆಗೂ ನಾನು ಭೇಟಿ ನೀಡುತ್ತೇನೆ. ನಮ್ಮ ಮುಖಂಡರು, ಕಾರ್ಯಕರ್ತರು 2-3 ಸಾವಿರ ಜನರನ್ನು ಸೇರಿಸಿ ಆಹ್ವಾನಿಸಿದರೆ ಹೋಗಿ ಸಭೆ, ಸಮಾರಂಭ, ಸಮಾವೇಶದಲ್ಲಿ ಭಾಗವಹಿಸುತ್ತೇವೆ. ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಗುರಿ, ಸಂಕಲ್ಪ ಎಂದು ಅವರು ಪುನರುಚ್ಛರಿಸಿದರು.
ಪರ್ಸೆಂಟೇಜ್ ಕೊಟ್ಟಿಲ್ಲ, ಆದ್ರೆ ಹಣ ಕಟ್ ಮಾಡಿ ಕೊಡ್ತೇನೆ ಅನ್ನೋ ಹಠಕ್ಕೆ ಅಧಿಕಾರಿಗಳು ಬಿದ್ದಿದ್ದಾರೆ!
ಪಕ್ಷದ ಏಜೆಂಟರಂತೆ ದಿಂಗಾಲೇಶ್ವರ ಶ್ರೀ ಮಾತು: ಅಶೋಕ್
ದಾವಣಗೆರೆ: ಮಠಗಳಿಗೆ ನೀಡುವ ಅನುದಾನದಲ್ಲಿ ಶೇ.30 ಕಮಿಷನ್ ನೀಡಬೇಕೆಂಬ ಆರೋಪ ಮಾಡಿರುವ ದಿಂಗಾಲೇಶ್ವರ ಶ್ರೀಗಳ ವಿರುದ್ಧ ಕಂದಾಯ ಸಚಿವ ಆರ್.ಅಶೋಕ್(R Ashok) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಮಠದ ಸ್ವಾಮೀಜಿಗಳಾದವರು ಯಾವುದೋ ಪಕ್ಷದ ಏಜೆಂಟರಂತೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ನಮ್ಮ ಸರ್ಕಾರವು ಕಾಗಿನೆಲೆ, ಪೇಜಾವರ ಮಠ ಸೇರಿ ನಾಡಿನ ಅನೇಕ ಮಠಗಳಿಗೆ ಅನುದಾನ ನೀಡಿದೆ. ಯಾರಿಗೂ ಇಲ್ಲದ ಕಮಿಷನ್ ಕಾಟ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಮಾತ್ರ ಏಕಿದೆ? ಕನಿಷ್ಠ ಯಾರಿಗೆ ಕಮಿಷನ್ ಕೊಟ್ಟಿದ್ದೀರಿ ಎಂಬುದನ್ನಾದರೂ ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗಪಡಿಸಲಿ. ಅದನ್ನು ಬಿಟ್ಟು ವೇದಿಕೆ ಮೇಲೆ ರಾಜಕೀಯ ಭಾಷಣ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ