ರೈತರ ಪಾಲಿಗೆ ಸರ್ಕಾರ ಜೀವಂತವಿದೆಯೋ ಸತ್ತಿದೆಯೋ: ಯಡಿಯೂರಪ್ಪ ಕಿಡಿ

Published : Nov 08, 2023, 06:16 AM IST
ರೈತರ ಪಾಲಿಗೆ ಸರ್ಕಾರ ಜೀವಂತವಿದೆಯೋ ಸತ್ತಿದೆಯೋ: ಯಡಿಯೂರಪ್ಪ ಕಿಡಿ

ಸಾರಾಂಶ

ರೈತರ ಪಾಲಿಗೆ ಸರ್ಕಾರ ಜೀವಂತವಿದೆಯೋ ಅಥವಾ ಸತ್ತಿದೆಯೋ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತಂದು ರೈತರಿಗೆ ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ. ರೈತರು ಅಲ್ಲಿಯವರೆಗೆ ಧೃತಿಗೆಡಬಾರದು ಎಂದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

ಮಧುಗಿರಿ(ನ.08):  ದಾರಿಯ ಉದ್ದಗಲಕ್ಕೂ ಎಡ, ಬಲ ನೋಡ್ತಾ ಇದ್ಧೀನಿ, ರೈತರ ಜಮೀನಿಗೆ ಇಳಿದು ನೋಡುತ್ತಿದ್ದು, ಈ ಬಾರಿ ಮಳೆ ಇಲ್ಲದೆ ರೈತ ಬಿತ್ತಿದ ಎಲ್ಲ ಬೆಳೆಗಳು ಸಂಪೂರ್ಣ ನಾಶವಾಗಿವೆ. ಬಿತ್ತಿದ ಬೀಜ ಕೂಡ ಸಿಗದೆ ರೈತ ಕಂಗಲಾಗಿದ್ದಾನೆ. ಮುಂದಿನ ಜೀವನ ಏನೂ ಎಂದು ಯೋಚಿಸುವ ದುಸ್ಥಿತಿ ತಲುಪ್ಪಿದ್ದರೂ ಯಾವುದೇ ಸಚಿವರು ಸ್ಥಳ ಪರಿಶೀಲಿಸಿ ರೈತರಲ್ಲಿ ಆತ್ಮ ವಿಶ್ವಾಸ ಮೂಡಿಸಿಲ್ಲ. ನಾನು, ಬರ ಪ್ರವಾಸ ಶುರು ಮಾಡಿದ ನಂತರ ಅವರು ಈಗ ಪ್ರವಾಸ ಕೈಗೊಳ್ಳಲು ಶುರು ಮಾಡಿದ್ದಾರೆ ಎಂದು ಸರ್ಕಾರದ ಕಾರ್ಯ ವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದರು.

ತಾಲೂಕಿನಲ್ಲಿ ಬರ ಅಧ್ಯಯನ ಪ್ರವಾಸ ನಡೆಸಿ ಕೋಡ್ಲಾಪುರ, ಚಿನ್ನೆನಹಳ್ಲಿ, ಬಡವನಹಳ್ಳಿ ಭಾಗದ ರೈತರ ಜಮೀನಿಗಿಳಿದು ಬೆಳೆ ನಾಶವಾಗಿರುವುದನ್ನು ಪರಿಶೀಲಿಸಿ ಮಾತನಾಡಿದರು. ರೈತರ ಪಾಲಿಗೆ ಸರ್ಕಾರ ಜೀವಂತವಿದೆಯೋ ಅಥವಾ ಸತ್ತಿದೆಯೋ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತಂದು ರೈತರಿಗೆ ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ. ರೈತರು ಅಲ್ಲಿಯವರೆಗೆ ಧೃತಿಗೆಡಬಾರದು ಎಂದರು.

ಶೀಘ್ರದಲ್ಲೇ ವಿಪಕ್ಷ ನಾಯಕನ ಹೆಸರು ಪ್ರಕಟ: ಯಡಿಯೂರಪ್ಪ

ಕೋಡ್ಲಾಪುರದಲ್ಲಿ ರೈತರು ನಿಮ್ಮ ಕಾಲ್ಗುಣದಿಂದ ಮಳೆ ಬಂದಿದೆ. ಬರ ವೀಕ್ಷಣೆ ವೇಳೆ ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ ರೈತರು ನಿಮ್ಮ ಕಾಲ್ಗುಣದಿಂದ ಜಿಲ್ಲೆಯಲ್ಲಿ ಮಳೆ ಬಂದಿದೆ. ನೀವು ಬರುತ್ತೀರಾ ಎಂಬ ಸುದ್ದಿ ಕೇಳಿ, ಇದೇ ಮೊದಲ ಬಾರಿಗೆ ಮಳೆ ಬಂದಿದೆ. ದಯಮಾಡಿ ಕ್ಷೇತ್ರದಲ್ಲಿ ಓಡಾಡಿ ಮಳೆ ಬರುತ್ತದೆ ಎಂದು ಬಿಎಸ್‌ವೈಗೆ ರೈತರು ಜೈಕಾರ ಹಾಕಿದರು. ಮಳೆ ಇಲ್ಲದೆ ಶೇಂಗಾ ಒಣಗಿದೆ. ರೈತರು ತಂದ ಶೇಂಗಾ ಗಿಡವನ್ನು ಕೈಯಲ್ಲಿ ಹಿಡಿದು ಪರಿಶೀಲಿಸಿದರು.

ಮಧುಗಿರಿಯಲ್ಲಿ ಸುದ್ದಿಗೋಷ್ಠಿ.: ಕೊರಟೆಗೆರೆ-ಮಧುಗಿರಿ ಈ ಭಾಗದ ರೈತರ ಹೊಲಗಳಿಗೆ ಬೇಟಿ ನೀಡಿ ಸ್ಥಿತಿಗತಿ ನೋಡಿದ್ದು, ಬಿತ್ತನೆ ಮಾಡಿರುವ ಬೆಳೆಗಳು ನಾಶವಾಗಿವೆ. ಜಾನುವಾರುಗಳಿಗೆ ಮೇವು ಸಹ ಇಲ್ಲ, ಆದರೂ ಸರ್ಕಾರ ರೈತರ ಸಮಸ್ಯೆಗಳನ್ನು ಆಲಿಸುವ ಕೆಲಸ ಮಾಡಿಲ್ಲ ಎಂದರು.

ಮಧಗಿರಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಲ ವಾಡಿಕೆ ಮಳೆಗಿಂತ ತುಂಬಾ ಕಡಿಮೆ ಮಳೆ ಬಿದ್ದಿದೆ. ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದರು.

ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಅವರ ಜಿಲ್ಲೆ, ಕ್ಷೇತ್ರದಲ್ಲಿ ಇಂತಹ ಬರ ಪರಿಸ್ಥಿತಿ ನೋಡಿ ಶಾಕ್‌ ಆಗಿದೆ ಅನ್ನೋದನ್ನು ಹೇಳಲು ನನಗೆ ಬೇಸರವಾಗಿದೆ. ಮಳೆ ಇಲ್ಲದ ಕಾರಣ ರಾಗಿ ,ಮೆಕ್ಕೆಜೋಳ, ಶೇಂಗಾ ಇತರೆ ಎಲ್ಲ ಬೆಳೆಗಳು ನಾಶವಾಗಿವೆ. ಬೋರವೆಲ್‌ ಇರುವ ಜಮೀನಿಗೆ ಹೋದರೆ ವಿದ್ಯುತ್‌ ಕೊರತೆ ಕಾಡುತ್ತಿದೆ. ಅಲ್ಲೂ ಕೂಡ ರೈತರು ನೆಮ್ಮದಿಯಿಂದ ಇಲ್ಲ, ನಿನ್ನೆ ಸ್ವಲ್ಪ ಮಳೆ ಬಿದ್ದ ಪರಿಣಾಮ ರಿಲೀಫ್‌ ಆಗಬಹುದು. ಮಾಹಿತಿ ಪ್ರಕಾರ ಕೊರಟಗೆರೆಯಲ್ಲಿ ಪರಿಶಿಷ್ಠರ ಅಂತ್ಯ ಸಂಸ್ಕಾರಕ್ಕೆ ನೀಡಿದ್ದ ಚೆಕ್‌ ಬೌನ್ಸ್‌ ಆಗಿದೆ ಅಂದರೆ ಸರ್ಕಾರದ ಖಜಾನೆಯಲ್ಲಿ ಹಣವಿಲ್ಲದೆ ದಿವಾಳಿಯಾಗಿದೆ ಎಂಬುದುನ್ನು ತೋರಿಸುತ್ತದೆ. ಇನ್ನು ಕೈಗಾರಿಕೆಗಳು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಬಡವನಹಳ್ಳಿಗೆ ಭೇಟಿ ನೀಡಿದಾಗ, ರಾಗಿ ಬೆಳೆಗಳು ಒಣಗಿ ನೆಲ ಕಚ್ಚಿವೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದ್ದು, ಈ ಪೈಕಿ ರಾಜ್ಯ ಸರ್ಕಾರ ಕೇವಲ 3 ಕೇಜಿ ಅಕ್ಕಿ , 2 ಕೇಜಿ ರಾಗಿ ಕೊಡುತ್ತಿದ್ದು, ಅದರಲ್ಲಿ ರಾಗಿ ಕಳಪೆಯಾಗಿವೆ ಎಂದು ದೂರಿದರು.

ನಾವಲ್ಲ, ಬಿಜೆಪಿಗರೇ ಕಿತ್ತಾಡ್ತಿದ್ದಾರೆ: ಯಡಿಯೂರಪ್ಪಗೆ ಡಿಕೆಶಿ ತಿರುಗೇಟು

ಚನ್ನೇನಹಳ್ಳಿಯಲ್ಲಿ ರೈತರು ಒಣಿಗಿದ ಶೇಂಗಾ ಕಿತ್ತು ತೋರಿಸಿ ಗೋಳಾಡಿದರು. ಉದ್ಯೋಗಕ್ಕಾಗಿ ಜನರು ಗುಳೇ ಹೋಗುವ ಸ್ಥಿತಿ ತಲುಪಿದೆ. ಸರ್ಕಾರ 5 ಗ್ಯಾರಂಟಿ ಕೊಟ್ಟು ರಾಜ್ಯ ದಿವಾಳಿಯಾಗಿದೆ. ಇದರಲ್ಲೂ ಮಹಿಳೆಯರಿಗೆ ಮೋಸವಾಗಿದೆ. ರಾಜ್ಯದಲ್ಲಿ ಬರಗಾಲ ಘೋಷಿಸಿ ವಿಶೇಷ ಪ್ಯಾಕೇಜ್‌ ಕೊಡುವಂತೆ ಸರ್ಕಾರವನ್ನು ಆಗ್ರಹಿಸಿದರು.

ಅಭಿವೃದ್ಧಿ ಕುಂಠಿತವಾಗಿದೆ. ಯಾವ ವಿಷಯಕ್ಕೆ ಹೋದರು ಈ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರ ಬದಕಿನ ನಡುವೆ ಸರ್ಕಾರ ಚಲ್ಲಾಟವಾಡುತ್ತಿದೆ. ಬೆಂಗಳೂರಿಗೆ ಹೋಗಿ ಈ ಸರ್ಕಾರದ ವೈಪಲ್ಯ ಎತ್ತಿ ಹಿಡಿಯುವಲ್ಲಿ ಹೋರಾಟ ರೂಪಿಸುತ್ತೇವೆ. ಇಲ್ಲಿನ ಸ್ಥಿತಿ ಗತಿಗಳನ್ನು ಪ್ರಧಾನಿ ನರೇಂದ್ರ ಮೋದಿಗೆ ಮನವರಿಕೆ ಮಾಡಿ ಕೊಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

"ಕ್ಷಮಿಸಿ ಪಪ್ಪಾ" ಕೊರಿಯನ್ ಆನ್‌ಲೈನ್‌ ಗೇಮ್ ಚಟಕ್ಕೆ 3 ಅಪ್ರಾಪ್ತ ಸಹೋದರಿಯರು 9ನೇ ಮಹಡಿಯಿಂದ ಹಾರಿ ಆತ್ಮ*ಹತ್ಯೆ!
ಸಿದ್ದಾಪುರ ಕೊಲೆ ಪ್ರಕರಣ: ಜ್ಯೋತಿಷಿ ಜೊತೆ ಬಿಜೆಪಿ ನಾಯಕರ ನಂಟು? ಬಿಕೆ ಹರಿಪ್ರಸಾದ್ ಗಂಭೀರ ಆರೋಪ!