
ಪಟ್ಟದಕಲ್ಲು(ಜ.05): ಕನ್ನಡ ಮಾತನಾಡದ ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.
ಐತಿಹಾಸಿಕ ನಗರ ಪಟ್ಟದಕಲ್ಲಿನಲ್ಲಿ ಪ್ರವಾಸಿ ತಾಣ ವೀಕ್ಷಣೆ ವೇಳೆ ಘಟನೆ ನಡೆದಿದ್ದು, ಇಂಗ್ಲಿಷ್ನಲ್ಲಿ ಸ್ಥಳದ ಕುರಿತು ಮಾಹಿತಿ ನೀಡಲು ಮುಂದಾದ ಅಧಿಕಾರಿಗಳನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.
"
ಪುರಾತತ್ವ ಇಲಾಖೆ ಅಧಿಖಾರಿಗಳಿಗೆ ಇಂಗ್ಲಿಷ್ನಲ್ಲಿಯೇ ಚಾಟಿ ಬೀಸಿದ ಸಿದ್ದರಾಮಯ್ಯ, ನಿಮಗೆ ಕನ್ನಡ ಗೊತ್ತಿಲ್ವಾ? ನೀವಿಬ್ಬರೂ ಇನ್ನೂ ಏಕೆ ಕನ್ನಡ ಕಲಿತಿಲ್ಲವೆಂದು ಹರಿಹಾಯ್ದರು.
ಸಿದ್ದರಾಮಯ್ಯ ಪ್ರಶ್ನೆಗಳಿಗೆ ತಡಬಡಾಯಿಸಿದ ಅಧಿಕಾರಿಗಳು ‘ವಿ ವಿಲ್ ಟ್ರೈ’ ಎಂದಾಗ ನೀವು ಕನ್ನಡ ಕಲಿಯಲೇಬೇಕು ಎಂದು ಸಿದ್ದರಾಮಯ್ಯ ತಾಕೀತು ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ