
ಆನೇಕಲ್(ಜ.19): ಸಿದ್ದರಾಮಯ್ಯ ಓರ್ವ ಹುಚ್ಚ ಎಂಬ ಈಶ್ವರಪ್ಪ ಹೇಳಿಕೆಗೆ ಕಾಂಗ್ರೇಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸರಿಯಾಗೇ ತಿರುಗೇಟು ಕೊಟ್ಟಿದ್ದಾರೆ. ಆನೇಕಲ್ನಲ್ಲಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈಶ್ವರಪ್ಪಗೆ ಮೆದುಳೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಹಿಂಸೆಯಿಂದ ತಪ್ಪಿಸಿಕೊಳ್ಳಲು ಈಗಲ್ಟನ್ ರೆಸಾರ್ಟ್ ಗೆ ಹೋಗಿದ್ದೇವೆ ಎಂದ ಸಿದ್ದರಾಮಯ್ಯ, ಈಶ್ವರಪ್ಪ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಹಾಗಾಗಿಯೇ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅಂತಾ ತಿರುಗೇಟು ನೀಡಿದರು.
"
ಈಶ್ವರಪ್ಪ ಅವರಿಗೆ ಸಂಸ್ಕೃತಿ ಗೊತ್ತಿಲ್ಲ, ಸಮಾಜದಲ್ಲಿ ವರ್ತಿಸುವ ಬಗೆ ಅವರಿಗೆ ಪಾಠ ಹೇಳಿ ಕೊಡಬೇಕಿದೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ