
ಬೆಂಗಳೂರು(ಅ.05): ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಸೋಮವಾರ ಬೆಳ್ಳಂ ಬೆಳಗ್ಗೆ ಸಿಬಿಐ ದಾಳಿ ನಡೆಸಿದೆ. ಕಾಮಗ್ರೆಸ್ ಪಕ್ಷ, ಕಾರ್ಯಕರ್ತರು ಹಾಗೂ ಬೆಂಬಲಿಗರು ಖಂಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಈ ದಾಳಿಯನ್ನು ಖಂಡಿಸಿದ್ದು, ಇದು ರಾಜಕೀಯ ದುಷ್ಟತನದ ಪರಮಾವಧಿ ಎಂದು ಕಿಡಿ ಕಾರಿದ್ದಾರೆ.
"
ಸಿಬಿಐ ದಾಳಿ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ 'ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ' ಎಂದು ಗುಡುಗಿದ್ದಾರೆ.
ಇನ್ನು ಡಿಕೆಶಿ ನಿವಾಸದ ಮೇಲೆ ದಾಳಿಯಾಗಿರುವ ಸುದ್ದಿ ಸಿಕ್ಕ ಬೆನ್ನಲ್ಲೇ ಅವರ ಮನೆ ಎದುರು ಅಭಿಮಾನಿಗಳು ದೌಡಾಯಿಸಿದ್ದಾರೆ.
ಡಿಕೆಶಿ ಬೆಂಗಳೂರು ನಿವಾಸದ ಮೇಲೆ ಮಾತ್ರವಲ್ಲದೇ ದೆಹಲಿ, ಮುಂಬೈ ಸೇರಿ 14 ಕಡೆ ದಾಳಿ ನಡೆಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ