ಕುಮಾರಸ್ವಾಮಿಗೆ ದಿಢೀ‌ರ್ ಅನಾರೋಗ್ಯ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ

By Kannadaprabha NewsFirst Published Feb 29, 2024, 10:48 AM IST
Highlights

ಬುಧವಾರ ಕಲಾಪದಲ್ಲಿ ಭಾಗಿಯಾಗಲು ಕುಮಾರಸ್ವಾಮಿ ವಿಧಾನಸೌಧಕ್ಕೆ ಆಗಮಿಸಿದ್ದರು. ಆದರೆ, ಗಂಟಲು ಸಮಸ್ಯೆ ತೀವ್ರವಾದಾಗ ನೇರವಾಗಿ ಜಯನಗರದ ಅಪೋಲೋ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರು. ವೈದ್ಯರು ಚಿಕಿತ್ಸೆ ನೀಡಿ ವಿಶ್ರಾಂತಿ ಪಡೆಯಲು ಹೇಳಿ ಮನೆಗೆ ಕಳುಹಿಸಿ ದರು. ಹೀಗಾಗಿ ಕುಮಾರಸ್ವಾಮಿ ಅವರು ಮನೆಯಲ್ಲಿಯೇ ವಿಶ್ರಾಂತಿಗೆ ಮೊರೆ ಹೋಗಿದ್ದಾರೆ. 

ಬೆಂಗಳೂರು(ಫೆ.29):  ಗಂಟಲಿನ ಸೋಂಕು ಸಮಸ್ಯೆಯಿಂದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ. 

ಬುಧವಾರ ಕಲಾಪದಲ್ಲಿ ಭಾಗಿಯಾಗಲು ಕುಮಾರಸ್ವಾಮಿ ವಿಧಾನಸೌಧಕ್ಕೆ ಆಗಮಿಸಿದ್ದರು. ಆದರೆ, ಗಂಟಲು ಸಮಸ್ಯೆ ತೀವ್ರವಾದಾಗ ನೇರವಾಗಿ ಜಯನಗರದ ಅಪೋಲೋ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರು. ವೈದ್ಯರು ಚಿಕಿತ್ಸೆ ನೀಡಿ ವಿಶ್ರಾಂತಿ ಪಡೆಯಲು ಹೇಳಿ ಮನೆಗೆ ಕಳುಹಿಸಿ ದರು. ಹೀಗಾಗಿ ಕುಮಾರಸ್ವಾಮಿ ಅವರು ಮನೆಯಲ್ಲಿಯೇ ವಿಶ್ರಾಂತಿಗೆ ಮೊರೆ ಹೋಗಿದ್ದಾರೆ.

ತುಮಕೂರಿನಲ್ಲಿ ಯಾರಾಗುತ್ತಾರೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ: ಸೋಮಣ್ಣನಾ! ಕುಮಾರಣ್ಣನಾ 

ಕೆಲವು ದಿನಗಳಿಂದ ಕುಮಾರಸ್ವಾಮಿ ಗಂಟಲಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೆಚ್ಚಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ವೈದ್ಯರ ಸೂಚನೆ ಇರುವ ಕಾರಣ ಮಾತನಾಡದೆ ಆರೋಗ್ಯದ ಬಗ್ಗೆ ಗಮನಹರಿಸುತ್ತಿದ್ದಾರೆ.

click me!