ವಾಲ್ಮೀಕಿ ನಿಗಮದ ಹಗರಣ: ಎಸ್‌ಐಟಿ ಮುಂದೆ ಇಂದು ನಾಗೇಂದ್ರ?

Published : Jul 09, 2024, 08:00 AM ISTUpdated : Jul 09, 2024, 09:38 AM IST
ವಾಲ್ಮೀಕಿ ನಿಗಮದ ಹಗರಣ: ಎಸ್‌ಐಟಿ ಮುಂದೆ ಇಂದು ನಾಗೇಂದ್ರ?

ಸಾರಾಂಶ

ಈಗಾಗಲೇ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಎಸ್‌ಐಟಿ ನೋಟಿಸ್‌ ನೀಡಿದೆ. ನಗರದ ಸಿಐಡಿ ಕೇಂದ್ರ ಕಚೇರಿಯಲ್ಲಿ ಪ್ರಕರಣದತ ನಿಖಾಧಿಕಾರಿಗಳ ಮುಂದೆ ಇಂದು ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ನಾಗೇಂದ್ರ ಮತ್ತು ಬಸನ ಗೌಡ ದದ್ದಲ್ ಅವರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.

ಬೆಂಗಳೂರು(ಜು.09): ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಬಹು ಕೋಟಿ ಹಣ ಅಕ್ರಮ ವರ್ಗಾ ವಣೆ ಪ್ರಕರಣ ಸಂಬಂಧ ವಿಶೇಷ ತನಿಖಾ ದಳ (ಎಸ್‌ಐಟಿ)ದ ವಿಚಾರಣೆಗೆ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಂಗಳವಾರ ಹಾಜರಾಗುವ ನಿರೀಕ್ಷೆ ಇದೆ.

ಈಗಾಗಲೇ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಎಸ್‌ಐಟಿ ನೋಟಿಸ್‌ ನೀಡಿದೆ. ನಗರದ ಸಿಐಡಿ ಕೇಂದ್ರ ಕಚೇರಿಯಲ್ಲಿ ಪ್ರಕರಣದತ ನಿಖಾಧಿಕಾರಿಗಳ ಮುಂದೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಅವರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಪ್ರಕರಣದಲ್ಲಿ ನಾಗೇಂದ್ರನ ಬಲಿಪಶು ಮಾಡಲಾಗಿದೆ: ಜನಾರ್ದನ ರೆಡ್ಡಿ ವಾಗ್ದಾಳಿ

ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ: 

ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳಿಂದ ಹಣ ಜಪ್ತಿಗೆ ತನಿಖಾಧಿಕಾರಿ ಹೆಸರಿ ನಲ್ಲಿ ಬೆಂಗಳೂರಿನ ಸೇಂಟ್ ಮಾರ್ಕ್‌ಸ್ ರಸ್ತೆಯಲ್ಲಿರುವ ಎಸ್ ಬಿಐನಲ್ಲಿ ಎಸ್‌ಐಟಿ ಖಾತೆ ತೆರೆದಿದೆ. ಈ ಖಾತೆಗೆ ಹಣ ಜಮೆ ಪ್ರಕ್ರಿಯೆ ಆರಂಭವಾ ಗಿದೆ. ನಿಗಮದಿಂದ ದೋಚಿದ್ದ ಹಣದಲ್ಲಿ ಬಹುತೇಕ ದುಡ್ಡು ಕೆಲವೇ ದಿನಗಳಲ್ಲಿ ಮರಳಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಾಲ್ಮೀಕಿ ನಿಗಮದಿಂದ ಹೈದರಾಬಾದ್‌ನ ಫಸ್ಟ್ಫೈನಾನ್ಸ್‌ ಕೋ ಆಪರೇಟಿವ್‌ ಬ್ಯಾಂಕ್ ನ 18 ನಕಲಿ ಖಾತೆಗಳಿಗೆ 94.32 ಕೋಟಿ ರು. ವರ್ಗಾವಣೆಯಾಗಿತ್ತು. ಬಳಿಕ ಸಹ ಕಾರಿ ಬ್ಯಾಂಕ್‌ನಿಂದ ಸುಮಾರು 193ಕ್ಕೂ ಅಧಿಕ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಯಾಗಿತ್ತು. ಇದರಲ್ಲಿ 15 ಕೋಟಿ ರು. ಹಣ ಪತ್ತೆ ಹಚ್ಚಿದ್ದ ಎಸ್‌ಐಟಿ, ಆ ಖಾತೆಗಳಿಂದ ಹಣ ಪಡೆಯಲುತನಿಖಾಧಿಕಾರಿ ಹೆಸರಿನಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ ತೆರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್