ಕೊಲೆಗೆ ಕೊಲೆಯಿಂದಲೇ ಉತ್ತರ: ಕೆ.ಎಸ್‌.ಈಶ್ವರಪ್ಪ

Published : Jun 30, 2022, 05:30 AM IST
ಕೊಲೆಗೆ ಕೊಲೆಯಿಂದಲೇ ಉತ್ತರ: ಕೆ.ಎಸ್‌.ಈಶ್ವರಪ್ಪ

ಸಾರಾಂಶ

*  ಕೊಲೆ ಆರೋಪಿಗಳನ್ನ ಗುಂಡಿಟ್ಟು ಕೊಲ್ಲುವ ಇಲ್ಲ ನೇಣು ಹಾಕುವಂತ ಕಠಿಣ ಕಾನೂನು ತರಬೇಕು *  ವಿಶ್ವಸಂಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು *  ಇಷ್ಟು ವರ್ಷ ಹಿಂದುಗಳು ಬಹಳ ಸಹನೆಯಿಂದ ಸಹಿಸಿಕೊಂಡು ಬಂದಿದ್ದಾರೆ

ಶಿವಮೊಗ್ಗ(ಜೂ.30):  ಉದಯಪುರದಲ್ಲಿ ನಡೆದಿರುವ ಐಸಿಸ್‌ ಮಾದರಿಯ ಕೊಲೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಕೊಲೆಗೆ ಕೊಲೆಯಿಂದಲೇ ಉತ್ತರ ನೀಡಬೇಕಾಗುತ್ತದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ನಗರದಲ್ಲಿ ಬುಧವಾರ ಬಿಜೆಪಿ ವತಿಯಿಂದ ನಡದೆ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೊಲೆ ಆರೋಪಿಗಳು ನಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡ ಮೇಲೂ ಅವರನ್ನು ಗುಂಡಿಟ್ಟು ಕೊಲ್ಲುವ ಇಲ್ಲ ನೇಣು ಹಾಕುವಂತ ಕಠಿಣ ಕಾನೂನು ತರಬೇಕು ಎಂದು ಒತ್ತಾಯಿಸಿದರು. 

ಕೆಲವು ಮುಸ್ಲಿಂ ಗೂಂಡಾಗಳು ಶಿವಮೊಗ್ಗವನ್ನು ಗೂಂಡಾ ರಾಜ್ಯ ಮಾಡಲು ಹೊರಟ್ಟಿದ್ದಾರೆ: ಈಶ್ವರಪ್ಪ

ಹಂತಕರು ಕನ್ನಯ್ಯಾ ಲಾಲ್‌ ಅವರ ಕೊಲೆ ಮಾಡಿದ ಅದೇ ಕತ್ತಿಯನ್ನು ತೋರಿಸಿ ಪ್ರಧಾನಿ ಮೋದಿ ಅವರಿಗೂ ಬೆದರಿಕೆ ಹಾಕಿದ್ದಾರೆ. ವಿಶ್ವಸಂಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಷ್ಟು ವರ್ಷ ಹಿಂದುಗಳು ಬಹಳ ಸಹನೆಯಿಂದ ಸಹಿಸಿಕೊಂಡು ಬಂದಿದ್ದಾರೆ. ಇನ್ನು ಮುಂದೆ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕೊಲೆಗೆ ಕೊಲೆಯಿಂದಲೇ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!