ಮಾಜಿ ಸಚಿವ ನಾರಾಯಣಗೌಡರ ಕಾರಿಗೆ ಗುದ್ದಿದ ಮತ್ತೊಂದು ಕಾರು!

Kannadaprabha News   | Kannada Prabha
Published : Mar 14, 2026, 08:41 AM IST
Former Minister Narayana Gowda's Car Involved in Collision

ಸಾರಾಂಶ

ಬೆಂಗಳೂರಿನ ರಾಜಭವನ ರಸ್ತೆಯಲ್ಲಿ, ಮೊಬೈಲ್‌ನಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದ ಚಾಲಕನೊಬ್ಬ ಮಾಜಿ ಸಚಿವ ನಾರಾಯಣಗೌಡ ಅವರ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ, ನಿರ್ಲಕ್ಷ್ಯದ ಚಾಲನೆಯ ಬಗ್ಗೆ ನಾರಾಯಣಗೌಡ ಅವರು ಚಾಲಕನನ್ನು ತರಾಟೆಗೆ ತೆಗೆದುಕೊಂಡರು.

ಬೆಂಗಳೂರು (ಮಾ.14): ಮಾಜಿ ಸಚಿವ ನಾರಾಯಣಗೌಡ ಅವರ ನಿಂತಿದ್ದ ಕಾರಿಗೆ ಮತ್ತೊಂದು ಕಾರು ಗುದ್ದಿರುವ ಘಟನೆ ರಾಜಭವನ ರಸ್ತೆಯಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ ಫೋನ್‌ನಲ್ಲಿ ಮಾತನಾಡಿಕೊಂಡು ಕಾರು ಚಾಲನೆ ಮಾಡಿಕೊಂಡು ಬಂದಿರುವ ಚಾಲಕ ರಾಜಭವನ ರಸ್ತೆಯಲ್ಲಿ ನಿಂತಿದ್ದ ಮಾಜಿ ಸಚಿವ ನಾರಾಯಣಗೌಡ ಅವರ ಕಾರಿಗೆ ಗುದ್ದಿದ್ದಾನೆ. ಇದರಿಂದ ಕೆರಳಿದ ನಾರಾಯಣಗೌಡ ಅವರು ಕಾರು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾರು ಚಾಲಕ ಸಹಕಾರ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸರ್ಕಾರಿ ನೌಕರನಾಗಿ ನೀನು ಮೊಬೈಲ್‌ನಲ್ಲಿ ಮಾತನಾಡಿಕೊಂಡು ಕಾರು ಓಡಿಸುವುದು ಸರಿನಾ? ಕಾರು ಡ್ಯಾಮೇಜ್‌ ಆದರೆ ಇನ್ಶೂರೆನ್ಸ್ ಕ್ಲೈಮ್‌ ಮಾಡಿ ಸರಿಪಡಿಸಿಕೊಳ್ಳಬಹುದು. ಆದರೆ ಜೀವ ಹೋದರೆ ಬರುತ್ತಾ? ನಾನು ಕಾರಲ್ಲಿದ್ದೆ ಪರವಾಗಿಲ್ಲ, ಒಂದು ವೇಳೆ ಬೈಕ್‌ಗೆ ಗುದ್ದಿದ್ದರೆ ಏನಾಗುತ್ತಿತ್ತು ಯೋಚನೆ ಮಾಡಿದ್ದೀಯಾ ಎಂದು ಕಾರು ಚಾಲಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಬರುವಷ್ಟರಲ್ಲಿ ನಾರಾಯಣಗೌಡ ಸ್ಥಳದಿಂದ ತೆರಳಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಕಬ್ಬನ್‌ ಪಾರ್ಕ್‌ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ₹4,000ಕ್ಕೆ ಸೇಲ್‌!
ಚಿನ್ನದ ಸಾಲ ಪಡೆದಿದ್ದೀರಾ? ನಿಮಗಾಗಿ ವಿಧಾನಪರಿಷತ್ತಿನಲ್ಲಿ ಹೊಸ ವಿಧೇಯಕ ಮಂಡನೆ!