ಶೇ.10 ರಷ್ಟು ಮೀಸಲು: ದೊಡ್ಡ ಗೌಡರು ಬೇಕೆಂದರು!

Published : Jan 08, 2019, 01:35 PM IST
ಶೇ.10 ರಷ್ಟು ಮೀಸಲು: ದೊಡ್ಡ ಗೌಡರು ಬೇಕೆಂದರು!

ಸಾರಾಂಶ

ಉನ್ನತ ವರ್ಗದ ಬಡವರಿಗಾಗಿ ಶೇ.10ರಷ್ಟು ಮೀಸಲು| ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಜೆಡಿಎಸ್ ಬೆಂಬಲ| ಟ್ವಿಟ್ಟರ್ ನಲ್ಲಿ ಪ್ರಸ್ತಾವನೆಗೆ ಬೆಂಬಲ ಸೂಚಿಸಿದ ಮಾಜಿ ಪ್ರಧಾನಿ| ‘ಜೆಡಿಎಸ್ ಯಾವಾಗಲೂ ಸಾಮಾಜಿಕ, ಆರ್ಥಿಕ ಸಮಾನತೆಗೆ ಬದ್ಧ’| ಮೋದಿ ನಿರ್ಧಾರ ಬೆಂಬಲಿಸಿದ ಹೆಚ್‌.ಡಿ. ದೇವೇಗೌಡ

ಬೆಂಗಳೂರು(ಜ.08): ಉನ್ನತ ವರ್ಗದ ಬಡವರಿಗಾಗಿ ಶೇ.10 ರಷ್ಟು ಮೀಸಲು ನೀಡುವ ಕೇಂದ್ರ ಸರ್ಕಾರದ ಪ್ರಸ್ತಾವವನ್ನು ಜೆಡಿಎಸ್ ರಾಷ್ಟ್ರಾಧ್ಯಕ್ಷ, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಬೆಂಬಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ದೇವೇಗೌಡ, ಜೆಡಿಎಸ್ ಯಾವಾಗಲೂ ಸಾಮಾಜಿಕ, ಆರ್ಥಿಕ ಸಮಾನತೆಗೆ ಬದ್ಧವಾಗಿದ್ದು, ಉನ್ನತ ವರ್ಗದ ಬಡವರಿಗಾಗಿ ಶೇ. 10ರಷ್ಟು ಮೀಸಲಾತಿಯನ್ನು ಬೆಂಬಲಿಸಲಿದೆ ಎಂದು ಹೇಳಿದ್ದಾರೆ.

ಜೆಡಿಎಸ್ ಮೊದಲಿನಿಂದಲೂ ಬಡವರ ಧ್ವನಿಯಾಗಿ ಕೆಲಸ ಮಾಡುತ್ತಿದ್ದು, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಯಾವುದೇ ವರ್ಗವನ್ನು ಮೇಲೆತ್ತುವ ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸುತ್ತದೆ ಎಂದು ದೇವೇಗೌಡ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
 

ಮೇಲ್ಜಾತಿ ಬಡವರಿಗೂ ಉದ್ಯೋಗದಲ್ಲಿ ಮೀಸಲಾತಿ, ಮೋದಿ ಘೋಷಣೆ..!

ಶೇ.10 ಮೀಸಲು: ಸೋಶಿಯಲ್ ಮೀಡಿಯಾ ಭರ್ಜರಿ ರಿಯಾಕ್ಷನ್

ಮೋದಿ ಮೀಸಲು ಮೊದಲು ಪ್ರಕಟ ಮಾಡಿದ್ದು ಏಷ್ಯಾನೆಟ್ ನ್ಯೂಸ್

ಮೀಸಲಾತಿ ನೀಡದೇ ಇಂದಿರಾ ಗಾಂಧಿ ಉತ್ತಮ ಆಡಳಿತ ಗಡ್ಕರಿ ಶ್ಲಾಘನೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿಜೆಪಿ ಜತೆ ಜೆಡಿಎಸ್‌ ಬೇಗ ವಿಲೀನ ಆಗಲಿ : ಡಿಸಿಎಂ ಡಿ.ಕೆ. ಶಿವಕುಮಾರ್‌
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೇ. 8 ಮೀಸಲಾತಿ; ಬಂಪರ್ ಸುವರ್ಣವಕಾಶ