
ಬೆಂಗಳೂರು(ಫೆ.18): ಅನಾರೋಗ್ಯ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಗುಣಮುಖರಾಗಿದ್ದಾರೆ. ಅವರಿಗೆ ಅಗತ್ಯ ಚಿಕಿತ್ಸೆಯನ್ನು ಮುಂದುವರಿಸಲಾಗಿದ್ದು, ಆಗಾಗ್ಗೆ ತಪಾಸಣೆ ನಡೆಸಿ ಆರೋಗ್ಯದ ಮೇಲೆ ವೈದ್ಯರು ನಿಗಾವಹಿಸಿದ್ದಾರೆ.
ಶನಿವಾರ ದಿನಪತ್ರಿಕೆಗಳತ್ತ ಕಣ್ಣು ಹಾಯಿಸಿದ ದೇವೇಗೌಡ ಅವರು ಬಜೆಟ್ ಸುದ್ದಿಗಳನ್ನು ಓದಿದರು. ಎಲ್ಲರೊಂದಿಗೆ ಆರಾಮಾಗಿ ಮಾತನಾಡುತ್ತಿದ್ದಾರೆ. ಮನೆಗೆ ಕಳುಹಿಸಿದರೆ ಅಭಿಮಾನಿಗಳು, ಕಾರ್ಯಕರ್ತರು ಮುಗಿಬೀಳಲಿದ್ದಾರೆ ಎಂಬ ಕಾರಣಕ್ಕಾಗಿ ಆಸ್ಪತ್ರೆಯಲ್ಲಿಯೇ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಣಿಪಾಲ್ ಆಸ್ಪತ್ರೆಗೆ ದಾಖಲು!
ಇಂದು(ಭಾನುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದೇವೇಗೌಡ ಅವರು ತೀವ್ರ ಓಡಾಟ ನಡೆಸಿದ್ದರಿಂದ ದೈಹಿಕವಾಗಿ ತೀವ್ರ ಆಯಾಸಗೊಂಡಿದ್ದರು. ಅಲ್ಲದೆ, ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ