ಕರ್ನಾಟಕದ 6 ಜಿಲ್ಲೆಗಳಲ್ಲಿ ಭರ್ಜರಿ ಮಳೆ: ಸಿಡಿಲಿಗೆ ನಾಲ್ವರ ದುರ್ಮರಣ

Published : Sep 24, 2024, 05:35 AM IST
ಕರ್ನಾಟಕದ 6 ಜಿಲ್ಲೆಗಳಲ್ಲಿ ಭರ್ಜರಿ ಮಳೆ: ಸಿಡಿಲಿಗೆ ನಾಲ್ವರ ದುರ್ಮರಣ

ಸಾರಾಂಶ

ಭಾರೀ ಮಳೆಯಿಂದಾಗಿ ಧಾರವಾಡದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಸಮಸ್ಯೆ ಯಾದರೆ, ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಸಿಡಿಲಬ್ಬರಕ್ಕೆ ಎರಡು ಜಾನುವಾರು ಹಾಗೂ ಗದಗ ಜಿಲ್ಲೆಯ ಡಂಬಳ ಹೋಬಳಿಯಲ್ಲಿ ನಾಲ್ಕು ಕುರಿಗಳು ಮೃತಪಟ್ಟಿವೆ. 

ಬೆಂಗಳೂರು(ಸೆ.24):  ರಾಜ್ಯದ ಆರು ಜಿಲ್ಲೆಗಳಲ್ಲಿ ಸೋಮವಾರ ಸುರಿದ ದಿಢೀರ್ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಯಾದಗಿರಿಯಲ್ಲಿ ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ. ಯಾದಗಿರಿ, ಕಲಬುರಗಿ, ಚಿಕ್ಕಮಗಳೂರಿನ ಶೃಂಗೇರಿ, ಧಾರವಾಡ, ಕೊಪ್ಪಳ, ಗದಗ ಮತ್ತಿತರ ಜಿಲ್ಲೆಗಳಲ್ಲಿ ಸಂಜೆ ಸಿಡಿಲಬ್ಬರದ ಜತೆಗೆ ಭಾರೀ ಮಳೆಯಾಗಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. 

ಭಾರೀ ಮಳೆಯಿಂದಾಗಿ ಧಾರವಾಡದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಸಮಸ್ಯೆ ಯಾದರೆ, ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಸಿಡಿಲಬ್ಬರಕ್ಕೆ ಎರಡು ಜಾನುವಾರು ಹಾಗೂ ಗದಗ ಜಿಲ್ಲೆಯ ಡಂಬಳ ಹೋಬಳಿಯಲ್ಲಿ ನಾಲ್ಕು ಕುರಿಗಳು ಮೃತಪಟ್ಟಿವೆ. 

ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು: ಮುಂದಿನ 4 ದಿನ ಮಳೆ

ಕಲಬುರಗಿಯಲ್ಲೂ ಸತತ 2 ಗಂಟೆ ಭರ್ಜರಿ ಮಳೆಯಾಗಿದ್ದು, ಜನ ಪರದಾಡಬೇಕಾಯಿತು. ಇನ್ನು ಯಾದಗಿರಿ ನಗರ ಸುತ್ತಮುತ್ತ ಸುಮಾರು ಅರ್ಧ ಗಂಟೆ ಕಾಲ ಭಾರೀ ಮಳೆಯಾಗಿದ್ದು, ಜೀನಕೇರಾ ತಾಂಡಾದಲ್ಲಿ ಸಿಡಿಲು ಬಡಿದು ಚೇನು (22), ಕಿಶನ್ (30), ಸುಮಿ ಬಾಯಿ (30) ಹಾಗೂ ನೇನು (18) ಮೃತಪಟ್ಟಿದ್ದಾರೆ. 

ಆರು ಮಂದಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಲ್ಲಿ ಮೂವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮಳೆಯಿಂದ ರಕ್ಷಣೆ ಪಡೆಯಲು ಹೊಲದಲ್ಲಿದ್ದ ದೇವಸ್ಥಾನದೊಳಗೆ ತೆರಳಿದಾಗ ಸಿಡಿಲು ಬಡಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ