ಕರ್ನಾಟಕದ 30 ಸಾವಿರ ಭಕ್ತರಿಗೆ ಉಚಿತ ಕಾಶಿ ಯಾತ್ರೆ: ಸಚಿವೆ ಜೊಲ್ಲೆ

Published : Jun 20, 2022, 05:00 AM IST
ಕರ್ನಾಟಕದ 30 ಸಾವಿರ ಭಕ್ತರಿಗೆ ಉಚಿತ ಕಾಶಿ ಯಾತ್ರೆ: ಸಚಿವೆ ಜೊಲ್ಲೆ

ಸಾರಾಂಶ

*    ಖರ್ಚಿಗೆ ಸರ್ಕಾರದಿಂದಲೇ 5000 ರು. ಹಣ *   ಮುಜರಾಯಿ ಇಲಾಖೆಯಿಂದ ಉಚಿತ ಕಾಶಿಯಾತ್ರೆ ಯೋಜನೆ  *   ಒಂದು ವಾರದ ಈ ಯಾತ್ರೆಯಲ್ಲಿ ಕಾಶಿ, ಅಯೋಧ್ಯೆ, ಪ್ರಯಾಗ ದರ್ಶನಕ್ಕೆ ವ್ಯವಸ್ಥೆ 

ಉಡುಪಿ(ಜೂ.20): ಮುಜರಾಯಿ ಇಲಾಖೆಯಿಂದ ಉಚಿತ ಕಾಶಿಯಾತ್ರೆ ಯೋಜನೆ ಹಾಕಿಕೊಂಡಿದ್ದು, ಆಗಸ್ವ್‌, ಶ್ರಾವಣ ಮಾಸದಲ್ಲಿ ಈ ಯಾತ್ರೆ ನಡೆಯಲಿದೆ ಎಂದು ರಾಜ್ಯ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಇಲ್ಲಿನ ಕೋಟೆ ಮಾರಿಯಮ್ಮ ದೇವಾಲಯದ ಜೀರ್ಣೋದ್ಧಾರದ ಮುಷ್ಟಿಕಾಣಿಕೆ ಸಮಾರಂಭದಲ್ಲಿ ಮಾತನಾಡಿ, ಬೆಂಗಳೂರಿನಿಂದ ಹೊರಡುವ ಈ ಯಾತ್ರೆಯಲ್ಲಿ 30 ಸಾವಿರ ಭಕ್ತರು ಪ್ರಯೋಜನ ಪಡೆಯಲಿದ್ದಾರೆ. ಒಂದು ವಾರದ ಈ ಯಾತ್ರೆಯಲ್ಲಿ ಕಾಶಿ, ಅಯೋಧ್ಯೆ, ಪ್ರಯಾಗ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಈ ಯಾತ್ರೆ ಕೈಗೊಳ್ಳುವವರ ಬ್ಯಾಂಕ್‌ ಖಾತೆಗೆ ಸರ್ಕಾರವೇ .5 ಸಾವಿರ ಜಮೆ ಕೂಡ ಮಾಡುತ್ತದೆ ಎಂದರು.

Temple Development: ಕರ್ನಾಟಕದ  ದೇಗುಲ ಅಭಿವೃದ್ಧಿಗೆ ‘ದೈವ ಸಂಕಲ್ಪ’ ಯೋಜನೆ, ಏನು ವಿಶೇಷ?

ಈ ಯಾತ್ರೆಗಾಗಿ ವಿಶೇಷ ರೈಲನ್ನೂ ವ್ಯವಸ್ಥೆ ಮಾಡಲಾಗಿದ್ದು, ಈ ರೈಲಿನ ಬೋಗಿಗಳ ಮೇಲೆ ರಾಜ್ಯದ ಎ ಗ್ರೇಡ್‌ ದೇವಸ್ಥಾನಗಳ ಚಿತ್ರಗಳು ರಾರಾಜಿಸಲಿವೆ. ಈ ಮೂಲಕ ರಾಜ್ಯದ ಪ್ರಮುಖ ದೇವಸ್ಥಾನಗಳನ್ನು ದೇಶಕ್ಕೆ ಪರಿಚಯಿಸುವ, ಇತರ ರಾಜ್ಯಗಳ ಭಕ್ತರನ್ನು ಇಲ್ಲಿ ಸೆಳೆಯುವ ಪ್ರಯತ್ನ ನಡೆಸಲಾಗುವುದು ಎಂದು ಸಚಿವೆ ಹೇಳಿದರು.

ದ.ಕ. ಜಿಲ್ಲೆಯ ದೈವಸಂಕಲ್ಪ:

ರಾಜ್ಯ ಸರ್ಕಾರವು 1,140 ಕೋಟಿ ರು. ವೆಚ್ಚದಲ್ಲಿ ದೈವಸಂಕಲ್ಪ ಎಂಬ ಯೋಜನೆಯೊಂದನ್ನು ಜಾರಿಗೆ ತರುತ್ತಿದ್ದು, ಇದರಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 9 ದೇವಸ್ಥಾನಗಳನ್ನು ಆಯ್ಕೆ ಮಾಡಲಾಗಿದೆ. ಈ ದೇವಸ್ಥಾನದ ಪರಿಸರದಲ್ಲಿ ಭಕ್ತರಿಗೆ ಅಗತ್ಯವಾಗಿರುವ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳು ಕ್ಷಿಪ್ರವಾಗಿ ನಡೆಸಲು ಈ ಯೋಜನೆ ತಯಾಕರಿಸಲಾಗಿದೆ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಆಲೂಗಡ್ಡೆಗೆ ಮೊಳಕೆ ಬಂದರೆ ತಿನ್ನಬಹುದಾ? ತಜ್ಞರ ಎಚ್ಚರಿಕೆ ಏನು, ಯಾವುದು- ಯಾರಿಗೆ ಅಪಾಯ?