
ಶಿವಮೊಗ್ಗ, (ಆ.18): ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹುಚ್ಚರಾಯಪ್ಪ(104) ಮಂಗಳವಾರ ವಿಧಿವಶರಾಗಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರಾದ ಹುಚ್ಚರಾಯಪ್ಪ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈಸೂರು ಗ್ರಾಮದ ಹೋರಾಟಗಾರರೆಲ್ಲರೂ ಮೃತರಾಗಿದ್ದು,ಇವರು ಕೊನೆಯವರಾಗಿದ್ದರು. ಇದೀಗ ಹುಚ್ಚರಾಯಪ್ಪ ಅವರೂ ಸಹ ಮೃತರಾಗಿದ್ದು, ಈಸೂರು ಗ್ರಾಮದ ಹೋರಾಟಗಾರರ ಕೊನೆಯ ಕೊಂಡಿ ಕಳಚಿದೆ.
ಬೆಂಗಳೂರು ಗಲಭೆಗೆ ಟೆರರ್ ನಂಟು, ನಿವಾರಣೆಯಾಯ್ತು ಗಣೇಶೋತ್ಸವ ಕಗ್ಗಂಟು: ಆ.18ರ ಟಾಪ್ 10 ಸುದ್ದಿ!
ಈಸೂರು ಗ್ರಾಮವು ಸ್ವಾತಂತ್ರ್ಯ ಹೋರಾಟ ಭಾರತದ ಇತಿಹಾಸದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿದೆ. ಭಾರತದಲ್ಲಿ ಮೊದಲ ಸ್ವಾತಂತ್ರ್ಯ ಪಡೆದ ಗ್ರಾಮ ಇದಾಗಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರಾದ ಹುಚ್ಚರಾಯಪ್ಪ ಬ್ರಿಟಿಷರ ವಿರುದ್ಧ 1942 ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಜೈಲುವಾಸವನ್ನು ಅನುಭವಿಸಿದ್ದರು.
ಹುಚ್ಚುರಾಯಪ್ಪನವರಿಗೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ "ಭಾರತ ಶಾಂತಿ" ರಾಷ್ಟ್ರೀಯ ಪುರಸ್ಕಾರ ಸೇರಿದಂತೆ ಹಲವು ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಲಭಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ