ಜನವರಿಯಿಂದ ಸ್ಕ್ಯಾನಿಂಗ್‌, ರಕ್ತಪರೀಕ್ಷೆ ಸೇರಿ ಸರ್ಕಾರಿ ಆಸ್ಪತ್ರೇಲಿ ಎಲ್ಲಾ ಟೆಸ್ಟ್‌ ಫ್ರೀ!

Published : Nov 22, 2020, 07:37 AM ISTUpdated : Nov 22, 2020, 09:11 AM IST
ಜನವರಿಯಿಂದ ಸ್ಕ್ಯಾನಿಂಗ್‌, ರಕ್ತಪರೀಕ್ಷೆ ಸೇರಿ ಸರ್ಕಾರಿ ಆಸ್ಪತ್ರೇಲಿ ಎಲ್ಲಾ ಟೆಸ್ಟ್‌ ಫ್ರೀ!

ಸಾರಾಂಶ

ಸರ್ಕಾರಿ ಆಸ್ಪತ್ರೇಲಿ ಎಲ್ಲಾ ಟೆಸ್ಟ್‌ ಫ್ರೀ: ಸುಧಾಕರ್| ಜನವರಿಯಿಂದ ಸ್ಕಾ್ಯನಿಂಗ್‌, ರಕ್ತಪರೀಕ್ಷೆ ಉಚಿತ| ಆರೋಗ್ಯ, ವೈದ್ಯಕೀಯ ಶಿಕ್ಷಣ ವಿಲೀನಕ್ಕೆ ಚಿಂತನೆ

ಬೆಳಗಾವಿ(ನ.22): ಜನವರಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕಾ್ಯನ್‌, ರಕ್ತ ಪರೀಕ್ಷೆ ಸೇರಿದಂತೆ ಎಲ್ಲ ರೀತಿಯ ಆರೋಗ್ಯ ಸೇವೆ ಉಚಿತವಾಗಿ ದೊರೆಯಲಿರುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ಇದು ಜಾರಿಗೊಂಡಲ್ಲಿ ಇನ್ನುಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎಪಿಎಲ್‌ ಕಾರ್ಡುದಾರರಿಗೆ ಈವರೆಗೆ ವಿಧಿಸಲ್ಪಡುತ್ತಿದ್ದ ಅಲ್ಪಪ್ರಮಾಣದ ಶುಲ್ಕವೂ ರದ್ಧಾಗಲಿದೆ.

ಜನತೆ ಎಚ್ಚರ ವಹಿಸಿ ಕೊರೋನಾ 2ನೇ ಅಲೆ ತಪ್ಪಿಸಿ: ಸಚಿವ ಕೆ. ಸುಧಾಕರ್ ಮನವಿ!

ನಗರದ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್‌)ಯ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಜನವರಿಯಿಂದ ಎಲ್ಲ ರೀತಿಯ ಪರೀಕ್ಷೆ ಸಂಪೂರ್ಣ ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಸಿಟಿ ಸ್ಕ್ಯಾ‌ನ್‌, ರಕ್ತ ಪರೀಕ್ಷೆಗಳು ಎಲ್ಲವೂ ಉಚಿತವಾಗಿ ಮಾಡಲಾಗುವುದು. ಚೀಟಿ ರಹಿತ ವ್ಯವಸ್ಥೆಯನ್ನು ಜಾರಿಗೆ ತರಲು ಎಲ್ಲ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದ್ದು ಯಾವುದೇ ಔಷಧಿ ಅಗತ್ಯವಿದ್ದರೂ ಸರ್ಕಾರ ಪೂರೈಸುತ್ತಿದೆ ಎಂದು ತಿಳಿಸಿದರು.

ಇಲಾಖೆ ವಿಲೀನಕ್ಕೆ ಚಿಂತನೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ವಿಲೀನಗೊಲಿಸಿ ಒಂದೇ ಇಲಾಖೆಯಾಗಿಸಲು ಚಿಂತನೆ ಇದೆ. ಜೊತೆಗೆ ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24/7 ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗುತ್ತಿದೆ. ಜನಸಂಖ್ಯೆ ಅಧರಿಸಿ ಹೆಚ್ಚುವರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರಂಭದ ಜೊತೆಗೆ ಆ್ಯಂಬುಲೆನ್ಸ್‌ ಸೇವೆ ಬಲವರ್ಧನೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಭಾರೀ ಬೆಂಕಿ ಅವಘಡ, ನಾಲ್ಕು ಮಂದಿಯ ಪ್ರಾಣ ಉಳಿಸಿ ಹೀರೋಯಿನ್ ಆದ ಶ್ವಾನ!

ಜೊತೆಗೆ ಎಲ್ಲ ಹಂತದ ವೈದ್ಯಕೀಯ ಅಧಿಕಾರಿ ಅಥವಾ ಸಿಬ್ಬಂದಿಯ ಕೌಶಲ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ತರಬೇತಿ ನೀಡಲಾಗುವುದು. ಕೋವಿಡ್‌ ಸಂದರ್ಭದಲ್ಲಿ ಎದುರಾದ ಆಕ್ಸಿಜನ್‌ ಕೊರತೆ ಹಿನ್ನೆಲೆಯಲ್ಲಿ ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್‌ ಘಟಕ ಆರಂಭಿಸಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಿಸಲು ಕೋವಿಡ್‌-​19 ಕೂಡ ಒಂದು ಪಾಠ ಕಲಿಸಿದಂತಾಗಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ರಾಮನಗರದ ರೇವಣಸಿದ್ದೇಶ್ವರ ಬೆಟ್ಟದಲ್ಲಿ ದುರಂತ - ದೇವರ ದರ್ಶನಕ್ಕೂ ಮುನ್ನವೇ ಕಂದಕ ಸೇರಿದ ಭಕ್ತ!