
ರಾಯಚೂರು (ಮೇ.15): ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ತೈಲ ಕಂಪನಿಗಳು ಮತ್ತೊಂದು ಬರೆ ಎಳೆದಿವೆ. ರಾಯಚೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಭಾರಿ ಏರಿಕೆಯಾಗಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ.
ರಾಯಚೂರಿನಲ್ಲಿ ಇಂದಿನ ಪೆಟ್ರೋಲ್ ₹107.36, ನಿನ್ನೆ: ₹104.09 ಇತ್ತು. ಅಂದರೆ ಒಂದೇ ದಿನದಲ್ಲಿ ₹3.27 ಏರಿಕೆ!
ಇನ್ನು ಡೀಸೆಲ್ ಇಂದಿನ ದರ ₹95.29 ಆಗಿದೆ.ನಿನ್ನೆ: ₹92.18 ಇತ್ತು ಇಲ್ಲಿಯೂ ₹3.11 ಏರಿಕೆಯಾಗಿದೆ.
ಬೆಳ್ಳಂಬೆಳಗ್ಗೆ ಪೆಟ್ರೋಲ್ ಬಂಕ್ಗಳಿಗೆ ಬಂದ ವಾಹನ ಸವಾರರು, ರೇಟ್ ಕೇಳಿ ಆಘಾತಕ್ಕೊಳಗಾಗಿದ್ದಾರೆ. ಒಂದೇ ದಿನದಲ್ಲಿ ಇಷ್ಟು ಏರಿಕೆಯಾದರೆ ಹೇಗೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ರಾಜಧಾನಿ ದೆಹಲಿಗೆ ಹೋಲಿಸಿದರೆ ಕರ್ನಾಟಕದಲ್ಲಿ ತೈಲ ದರ ಗಗನಕ್ಕೇರಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ₹94.77 ರಷ್ಟಿದ್ದರೆ, ಬೆಂಗಳೂರು, ರಾಯಚೂರಿನಲ್ಲಿ ₹107.36 ತಲುಪಿದೆ. ಅಂದರೆ ದೆಹಲಿಗಿಂತ ರಾಜ್ಯದಲ್ಲಿಯೇ ಪೆಟ್ರೋಲ್ ಡೀಸೆಲ್ ದುಬಾರಿ ಆಯ್ತಲ್ಲ!
ಕೇಂದ್ರ ಸರ್ಕಾರ ಬೆಲೆ ಏರಿಸುತ್ತಿದೆ ಎಂದು ಪ್ರತಿ ಬಾರಿ ದೂರುವ ರಾಜ್ಯ ಸರ್ಕಾರಕ್ಕೆ ಈಗ ಸಾರ್ವಜನಿಕರು ನೇರ ಪ್ರಶ್ನೆ ಹಾಕುತ್ತಿದ್ದಾರೆ. ಇಂಧನ ಬೆಲೆ 3 ರೂ. ಹೆಚ್ಚಿಸಿದ ಮೇಲೂ ದೆಹಲಿಯಲ್ಲಿ ಪೆಟ್ರೋಲ್ ದರ ₹95ರ ಒಳಗಿರುವಾಗ, ನಮ್ಮಲ್ಲಿ ₹107 ದಾಟುತ್ತಿರುವುದು ಹೇಗೆ? ಕೇಂದ್ರದ ಮೇಲೆ ಗೂಬೆ ಕೂರಿಸುವ ಮುನ್ನ, ರಾಜ್ಯ ಸರ್ಕಾರ ಈ 3 ರೂಪಾಯಿಗಳ ದರ ಹೆಚ್ಚಳಕ್ಕೆ ನೀಡುವ ಸಮರ್ಥನೆ ಏನು? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದೇ ನಿಮ್ಮ ಆಡಳಿತ ವೈಖರಿಯೇ? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ