ಇಂದಿನಿಂದ ಪೂರ್ಣಾವಧಿ ಮೆಟ್ರೋ ರೈಲು ಸಂಚಾರ

Kannadaprabha News   | Asianet News
Published : Sep 11, 2020, 07:21 AM IST
ಇಂದಿನಿಂದ ಪೂರ್ಣಾವಧಿ ಮೆಟ್ರೋ ರೈಲು ಸಂಚಾರ

ಸಾರಾಂಶ

ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ಮೆಟ್ರೋ ಸೇವೆ| ದಟ್ಟಣೆ ಅವಧಿಯಲ್ಲಿ 5 ನಿಮಿಷಕ್ಕೆ ಒಂದು ಟ್ರೈನ್‌| ರೈಲು ಹತ್ತುವಾಗ ಮತ್ತು ಇಳಿಯುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು| ರೈಲು ಪ್ರತಿ ನಿಲ್ದಾಣದಲ್ಲಿ 60 ಸೆಕೆಂಡ್‌ ಮತ್ತು ಇಂಟರ್‌ ಎಕ್ಸ್‌ಚೇಂಜ್‌ ನಿಲ್ದಾಣದಲ್ಲಿ 75 ಸೆಕೆಂಡ್‌ ಮಾತ್ರ ನಿಲುಗಡೆ| 

ಬೆಂಗಳೂರು(ಸೆ.11): ಸಂಚಾರ ಆರಂಭಿಸಿದ ನಾಲ್ಕು ದಿನಗಳ ಬಳಿಕ ನಮ್ಮ ಮೆಟ್ರೋ ರೈಲು ನೇರಳೆ ಮತ್ತು ಹಸಿರು ಎರಡು ಮಾರ್ಗದಲ್ಲೂ ಇಂದಿನಿಂದ(ಸೆ.11) ಪೂರ್ಣಾವಧಿಯ ಕಾರ್ಯಾಚರಣೆ ನಡೆಸಲಿದೆ.

ಇಂದು(ಶುಕ್ರವಾರ) ಬೆಳಗ್ಗೆ 7ಕ್ಕೆ ಬೈಯ್ಯಪ್ಪನಹಳ್ಳಿ, ಮೈಸೂರು ರಸ್ತೆ, ನಾಗಸಂದ್ರ ಮತ್ತು ಯಲಚೇನಹಳ್ಳಿ ಸೇರಿದಂತೆ ನಾಲ್ಕು ಟ್ರಮಿರ್ನಲ್‌ಗಳಿಂದಲೂ ಮೆಟ್ರೋ ರೈಲುಗಳು ಸಂಚಾರ ಪ್ರಾರಂಭಿಸಲಿದ್ದು, ರಾತ್ರಿ 9ರವರೆಗೆ ಸಂಚಾರ ಮುಕ್ತಾಯಗೊಳಿಸಲಿವೆ. ಈ ಸಂದರ್ಭದಲ್ಲಿ ದಟ್ಟಣೆ ಅವಧಿಯಲ್ಲಿ ಪ್ರತಿ 5 ನಿಮಿಷ, ಉಳಿದಂತೆ 10 ನಿಮಿಷಕ್ಕೆ ಒಂದರಂತೆ ಮೆಟ್ರೋ ರೈಲು ಸಂಚಾರ ನಡೆಸಲಿದೆ. ಆದರೂ ಕೋವಿಡ್‌-19 ನಿಯಮದಂತೆ ಒಮ್ಮೆ ಒಂದು ರೈಲಿನಲ್ಲಿ 400 ಜನರು ಮೀರದಂತೆ ಮತ್ತು ನಿಲ್ದಾಣಗಳಲ್ಲಿ 50 ಜನಕ್ಕಿಂತ ಹೆಚ್ಚು ನಿಲ್ಲದಂತೆ ಕ್ರಮ ಮುಂದುವರಿಸಲಾಗುವುದು ಎಂದು ನಮ್ಮ ಮೆಟ್ರೋ ನಿಗಮದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸೆ.7ರಂದು ನೇರಳೆ ಮಾರ್ಗ ಮತ್ತು ಸೆ.9ರಿಂದ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭಗೊಂಡಿತ್ತು. ಈ ಅವಧಿಯಲ್ಲಿ ಎರಡು ಮಾರ್ಗದಲ್ಲಿ ಬೆಳಗ್ಗೆ ಮತ್ತು ಸಂಜೆ ತಲಾ ಮೂರು ಗಂಟೆಗಳ ಕಾಲ ಮೆಟ್ರೋ ರೈಲುಗಳು ಸಂಚಾರ ನಡೆಸಿದ್ದವು. ಗುರುವಾರ ಹಸಿರು ಮತ್ತು ನೇರಳೆ ಮಾರ್ಗದಲ್ಲಿ ರೈಲುಗಳು ಸಂಚರಿಸಿದ್ದು ಅಂದಾಜು ಹದಿನೈದು ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದಾರೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಾಗಸಂದ್ರ- ಯಲಹಚೇನಹಳ್ಳಿ ನಡುವೆ ಮೆಟ್ರೋ ಕಾರ್ಯಾರಂಭ

ಕೋವಿಡ್‌ ನಿಯಮ ಮುಂದುವರಿಕೆ:

ಕೋವಿಡ್‌ ನಿಯಮಗಳಲ್ಲಿ ಯಾವುದೇ ರಿಯಾಯಿತಿ ನೀಡಿಲ್ಲ. ಸ್ಮಾರ್ಟ್‌ ಕಾರ್ಡ್‌ ಇದ್ದವರಿಗೆ ಮಾತ್ರ ಮೆಟ್ರೋ ನಿಲ್ದಾಣಗಳಿಗೆ ಪ್ರವೇಶಾವಕಾಶ ಮುಂದುವರೆಯಲಿದೆ. ನಿಲ್ದಾಣಗಳು ಮತ್ತು ಮೆಟ್ರೋ ರೈಲಿನಲ್ಲಿ ಎಲ್ಲರೂ ಕಡ್ಡಾಯವಾಗಿ ಎರಡು ಮೀಟರ್‌(6 ಅಡಿ) ಅಂತರ ಕಾಯ್ದುಕೊಳ್ಳಬೇಕು. 50ಕ್ಕೂ ಹೆಚ್ಚು ಪ್ರಯಾಣಿಕರು ನಿಲ್ದಾಣಗಳಲ್ಲಿ ನಿಲ್ಲಲು ಬಿಎಂಆರ್‌ಸಿಎಲ್‌ ಅನುಮತಿ ನೀಡಿಲ್ಲ. ಮುಖಗವುಸು ಮತ್ತು ಸ್ಯಾನಿಟೈಸರ್‌ ಬಳಕೆ ಕಡ್ಡಾಯ ಮಾಡಲಾಗಿದೆ.

ಪ್ರತಿ ರೈಲಿನಲ್ಲಿ ಗರಿಷ್ಠ 400 ಪ್ರಯಾಣಿಕರಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಹತ್ತಿದ್ದರೆ ಅವರನ್ನು ಮುಂದಿನ ನಿಲ್ದಾಣದಲ್ಲಿ ಇಳಿಯಬೇಕಾಗುತ್ತದೆ. ಜತೆಗೆ ಲಿಫ್ಟ್‌ಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರು ಪ್ರಯಾಣಿಸಬಾರದು. 65 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷದೊಳಗಿನವರು ಅಗತ್ಯವಿದ್ದರೆ ಮಾತ್ರ ಪ್ರಯಾಣಿಸಬೇಕು. ರೈಲು ಹತ್ತುವಾಗ ಮತ್ತು ಇಳಿಯುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ರೈಲು ಪ್ರತಿ ನಿಲ್ದಾಣದಲ್ಲಿ 60 ಸೆಕೆಂಡ್‌ ಮತ್ತು ಇಂಟರ್‌ ಎಕ್ಸ್‌ಚೇಂಜ್‌ ನಿಲ್ದಾಣದಲ್ಲಿ 75 ಸೆಕೆಂಡ್‌ ಮಾತ್ರ ನಿಲುಗಡೆಯಾಗಲಿದೆ ಎಂದು ಮೆಟ್ರೋ ನಿಗಮ ಮಾಹಿತಿ ನೀಡಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
Karnataka News Live: ಮಾಟಗಾತಿಯ ಮಾತು ಕೇಳಿ ಗಂಡು ಮಗುವಿಗಾಗಿ ಪತ್ನಿಯ ತಲೆ ಕೂದಲು ಕತ್ತರಿಸಿದ ಪತಿ