
ಡಾಕ್ಟರ್ ವೇಷದಲ್ಲಿ ಹೋಗಿ ಡಿಕೆಶಿ ಭೇಟಿಯಾಗಿದ್ದ ಪರಂ!
ಬೆಂಗಳೂರು [ಅ.27]: ತಿಹಾರ್ ಜೈಲಿನ ಪೊಲೀಸರು ಪ್ರತಿಯೊಂದಕ್ಕೂ ಕಾನೂನು ಮಾತನಾಡುತ್ತಾರೆ. ಯಾರೊಬ್ಬರೂ ನನ್ನ ಭೇಟಿ ಮಾಡಲು ಅವಕಾಶ ನೀಡಲಿಲ್ಲ. ಆಸ್ಪತ್ರೆಗೆ ಕರೆತಂದಾಗ ಡಾ.ಜಿ. ಪರಮೇಶ್ವರ್ ಅವರನ್ನು ಡಾಕ್ಟರ್ ಎಂದು ಹೇಳಿ ಒಳಗೆ ಕರೆದುಕೊಂಡು ಬನ್ನಿ ಎಂದು ಹೇಳಿದ್ದೆ. ಸೂಟು ಬೂಟು ಧರಿಸಿ ಒಂದು ಸ್ಟೆತಸ್ಕೋಪ್ ಹಾಕಿಕೊಂಡು ಬನ್ನಿ ಎಂದು ಹೇಳಿದ್ದೆ. ಹಾಗೆ ಬಂದು ಭೇಟಿ ಮಾಡಿಕೊಂಡು ಹೋದರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಇನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಿಂಬದಿಯಿಂದ ಬಂದು ಭೇಟಿ ಮಾಡಿಕೊಂಡು ಹೋಗಿದ್ದರು. ಸಿದ್ದರಾಮಯ್ಯ ಆಸ್ಪತ್ರೆಗೆ ಬಂದರೂ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ ಎಂದು ಡಿ.ಕೆ. ಶಿವಕುಮಾರ್ ಅನುಭವ ಹಂಚಿಕೊಂಡರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇದರಿಂದ ನನ್ನ ಭೇಟಿಗಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರೂ ಕಾಯುವಂತಾಯಿತು. ಅವರು ಇದಕ್ಕೂ ಮೊದಲೇ ಭೇಟಿಯಾಗಲು ಅವಕಾಶ ಕೇಳಿದ್ದರು. ಆದರೆ ನನಗೆ ಇಬ್ಬರ ಹೆಸರು ನೀಡಲು ಮಾತ್ರ ಅವಕಾಶ ಇತ್ತು. ಹೀಗಾಗಿ ಮೂರು ದಿನ ಕಾದರೂ ಎಚ್.ಡಿ. ದೇವೇಗೌಡ ಅವರಿಗೂ ಅವಕಾಶ ದೊರೆಯಲಿಲ್ಲ. ಕಾನೂನು ಕುರಿತು ಚರ್ಚೆ ಮಾಡಲು ಅಹಮದ್ ಪಟೇಲ್, ಕೆ.ಸಿ. ವೇಣುಗೋಪಾಲ್ ಅವರಿಗೆ ಅವಕಾಶ ಕೊಡಬೇಕಾಯಿತು. ಇದರ ನಡುವೆ ಡಿ.ಕೆ. ಸುರೇಶ್ ಹಾಗೂ ವಕೀಲರ ಭೇಟಿಯನ್ನೂ ಹೊಂದಾಣಿಕೆ ಮಾಡಿಕೊಳ್ಳಬೇಕಾಗಿತ್ತು. ಹೀಗಾಗಿ ನನ್ನ ಪತ್ನಿ, ಮಕ್ಕಳಿಗೂ ಭೇಟಿ ಮಾಡಲು ಅವಕಾಶ ನೀಡಲಿಲ್ಲ. ಎಚ್.ಡಿ. ಕುಮಾರಸ್ವಾಮಿ ಅವರಿಗೆ ಗೌರವ ಕೊಟ್ಟು ಜೈಲಿನಲ್ಲಿ ಭೇಟಿಯಾಗಲು ಹೆಸರು ನೀಡಲಾಯಿತು ಎಂದು ಹೇಳಿದರು
ಅಕ್ಟೋಬರ್ 27ರ ಟಾಪ್ 10 ಸುದ್ದಿಗಾಗಿ ಕ್ಲಿಕ್ ಮಾಡಿ:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ