
ಕೃಷ್ಣ ಎನ್.ಲಮಾಣಿ
ಹೊಸಪೇಟೆ(ಜು.09): ವಿಜಯನಗರ ವಾಸ್ತುಶಿಲ್ಪ ಶೈಲಿ, ವಿಜಯನಗರ ಸಾಮ್ರಾಜ್ಯದ ಹಿರಿಮೆ-ಗರಿಮೆಯನ್ನು ಇಡೀ ಜಗತ್ತಿಗೆ ಪರಿಚಯಿಸುವ ದೃಷ್ಟಿಯಿಂದ ಹಂಪಿಯಲ್ಲಿ ಇಂದಿನಿಂದ(ಜು.9ರಿಂದ 16)ರ ವರೆಗೆ ಜಿ-20 ಶೃಂಗಸಭೆ ನಡೆಯಲಿದೆ. ಅರಸರ ಕಾಲದಲ್ಲೇ ಹಂಪಿಗೆ ದೇಶ-ವಿದೇಶಿ ರಾಯಭಾರಿಗಳು, ಪ್ರವಾಸಿಗರು ಬರುತ್ತಿದ್ದರು. ಈಗ ಜಿ-20 ರಾಷ್ಟ್ರಗಳ ಶೃಂಗವನ್ನು ಹಂಪಿಯಲ್ಲಿ ನಡೆಸುವ ಮೂಲಕ ಗತ ವೈಭವ ಮರುಕಳಿಸಲು ಮುನ್ನುಡಿ ಬರೆಯಲಾಗುತ್ತಿದೆ.
ಸಾಂಸ್ಕೃತಿಕ ತಂಡದ ಸಭೆ:
ಜು.9ರಿಂದ 13ರವರೆಗೆ ಜಿ-20 ರಾಷ್ಟ್ರಗಳ ಸಾಂಸ್ಕೃತಿಕ ಕಾರ್ಯ ತಂಡದ ಸಭೆ ನಡೆಯಲಿದೆ. ಈ ತಂಡ ಭಾರತದ ಸಂಸ್ಕೃತಿ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಿದೆ. ಜೊತೆಗೆ ಸದಸ್ಯ ರಾಷ್ಟ್ರಗಳ ಐತಿಹಾಸಿಕ ಪರಂಪರೆಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಬಗ್ಗೆ ಜಿ-20 ರಾಷ್ಟ್ರಗಳು ಸುದೀರ್ಘವಾಗಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲಿವೆ.
ಇನ್ಮುಂದೆ ಐತಿಹಾಸಿಕ ಹಂಪಿಯ ಕಲ್ಲಿನ ತೇರಿನ ಮುಂದೆ ಸೆಲ್ಫಿ ಕ್ಲಿಕ್ಕಿಸಲು ಆಗಲ್ಲ: ಕಾರಣವೇನು ಗೊತ್ತಾ?
ಜಿ-20 ಶೆರ್ಪಾ ಸಭೆ: ಈ ತಂಡದ ಬಳಿಕ ಜಿ-20 ಶೆರ್ಪಾ ಸಭೆ ಜು.13ರಿಂದ 16ರವರೆಗೆ ನಡೆಯಲಿದೆ. ಜಿ-20 ರಾಷ್ಟ್ರಗಳ ಪ್ರಧಾನಿಗಳ ಜೊತೆಗೆ ನೇರ ಸಂಪರ್ಕ ಹೊಂದಿರುವ ಅಧಿಕಾರಿಗಳು ಶೆರ್ಪಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜಿ-20 ರಾಷ್ಟ್ರಗಳ ಸಭೆಗಳಲ್ಲಿ ಇದೊಂದು ವಿಶೇಷ ಸಭೆಯಾಗಿದೆ. ಸಭೆಯಲ್ಲಿ 20 ದೇಶಗಳ ಪೈಕಿ 19 ದೇಶಗಳ 30 ಪ್ರತಿನಿಧಿಗಳು, 9 ಆಹ್ವಾನಿತ ದೇಶಗಳ 16 ಪ್ರತಿನಿಧಿಗಳು, 4 ಸಂಸ್ಥೆಗಳ ಪ್ರತಿನಿಧಿಗಳು ಸೇರಿ ಒಟ್ಟು 52 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಉಭಯ ಸಭೆಗಳಲ್ಲಿ 200ಕ್ಕೂ ಅಧಿಕ ಅಧಿಕಾರಿಗಳೂ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ