ಗದಗ: ಬಸ್ ರಶ್ ಇದೆ ಹತ್ತಬೇಡಿ ಎಂದಿದ್ದಕ್ಕೆ ಕುಡುಕನ ಕಿರಿಕ್; '50 ಮಂದಿಗಷ್ಟೇ ಅವಕಾಶ ಎಲ್ಲರನ್ನ ಕೆಳಗಿಳಿಸಿ' ಎಂದ ಭೂಪ!

Published : Jan 17, 2026, 05:06 PM IST
Gadag Drunk Man Creates Ruckus Lies Down in Front of Bus Chaos Ensues

ಸಾರಾಂಶ

ಗದಗ ನಗರದ ಬಸ್ ನಿಲ್ದಾಣದಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ, ಬಸ್ ಹತ್ತಲು ಬಿಡಲಿಲ್ಲವೆಂದು ರಾದ್ಧಾಂತ ಸೃಷ್ಟಿಸಿದ್ದಾನೆ. ಬಸ್‌ನಲ್ಲಿ ಹೆಚ್ಚು ಜನರಿದ್ದಾರೆಂದು ಆರೋಪಿಸಿ, ಬಸ್‌ನ ಚಕ್ರದ ಮುಂದೆ ಮಲಗಿ ಪ್ರತಿಭಟಿಸಿ, ಪ್ರಯಾಣಿಕರು ಹಾಗೂ ಸಿಬ್ಬಂದಿಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಹೈರಾಣಾದರು.

ಗದಗ (ಜ.17): ಕುಡಿದ ಮತ್ತಿನಲ್ಲಿ ಏನು ಮಾಡುತ್ತಿದ್ದೇವೆ ಎಂಬ ಅರಿವಿಲ್ಲದೆ ವ್ಯಕ್ತಿಯೊಬ್ಬ ಬಸ್ ನಿಲ್ದಾಣದಲ್ಲಿ ಭಾರೀ ರಾದ್ಧಾಂತ ಮಾಡಿರುವ ಘಟನೆ ಗದಗ ನಗರದ ಮುಳಗುಂದ ನಾಕಾ ಬಸ್ ಸ್ಟಾಪ್ ಬಳಿ ನಡೆದಿದೆ. ಕುಡುಕನ ಈ ಅವಾಂತರದಿಂದಾಗಿ ಬಸ್ ಪ್ರಯಾಣಿಕರು ಹಾಗೂ ಸಿಬ್ಬಂದಿ ಕೆಲಕಾಲ ಹೈರಾಣಾಗಿದ್ದಾರೆ.

'50 ಮಂದಿಗಷ್ಟೇ ಅವಕಾಶ' - ಕುಡುಕನ ಕಾನೂನು ಅಸ್ತ್ರ!

ಬಸ್ ಹತ್ತಲು ಬಂದಿದ್ದ ವ್ಯಕ್ತಿಗೆ ಬಸ್ ರಶ್ ಇದೆ, ಹತ್ತಬೇಡಿ ಎಂದು ನಿರ್ವಾಹಕರು ತಿಳಿಸಿದ್ದಾರೆ. ಇದಕ್ಕೆ ಕೆಂಡಾಮಂಡಲವಾದ ಕುಡುಕ, 'ಬಸ್‌ನಲ್ಲಿ ಕೇವಲ 50 ಜನರಿಗಷ್ಟೇ ಅವಕಾಶವಿದೆ, ನಿಯಮ ಮೀರಿ ಜನರನ್ನು ತುಂಬಿಸಿಕೊಂಡಿದ್ದೀರಿ. ಮೊದಲು ಉಳಿದವರನ್ನು ಕೆಳಗಿಳಿಸಿ' ಎಂದು ಕಾನೂನು ಮಾತನಾಡುತ್ತಾ ಕಿರಿಕ್ ಶುರು ಮಾಡಿದ್ದಾನೆ.

ಬಸ್ ಮುಂದೆ ಮಲಗಿ ಹೈಡ್ರಾಮಾ

ತನ್ನ ವಾದಕ್ಕೆ ಮಣಿಯದ ಬಸ್ ಸಿಬ್ಬಂದಿ ವಿರುದ್ಧ ಆಕ್ರೋಶಗೊಂಡ ವ್ಯಕ್ತಿ, ಸೀದಾ ಬಸ್‌ನ ಚಕ್ರದ ಮುಂದೆ ಮಲಗಿ ಪ್ರತಿಭಟನೆ ನಡೆಸಿದ್ದಾನೆ. 'ಅಷ್ಟು ಜನರನ್ನು ತುಂಬಿಸಿಕೊಂಡ ಮೇಲೆ ನಾನೊಬ್ಬನೇ ಹೇಗೆ ಹೆಚ್ಚಾಗುತ್ತೇನೆ? ಎಲ್ಲರನ್ನೂ ಇಳಿಸಿ ಇಲ್ಲದಿದ್ದರೆ ಬಸ್ ಬಿಡಲು ಬಿಡುವುದಿಲ್ಲ' ಎಂದು ಹಠ ಹಿಡಿದು ಕುಳಿತಿದ್ದರಿಂದ ಸಂಚಾರಕ್ಕೆ ಅಡ್ಡಿಯಾಯಿತು.

ಸುಸ್ತು ಹೊಡೆದ ಪ್ರಯಾಣಿಕರು

ಕುಡುಕನ ವಿತಂಡವಾದ ಮತ್ತು ಕೂಗಾಟದಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಅಕ್ಷರಶಃ ಸುಸ್ತಾಗಿ ಹೋದರು. ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಈ ಹೈಡ್ರಾಮಾದಿಂದಾಗಿ ಪ್ರಯಾಣಿಕರು ಕೆಲಸ ಕಾರ್ಯಗಳಿಗೆ ಹೋಗಲು ತಡವಾಯಿತು. ಸ್ಥಳದಲ್ಲಿದ್ದವರು ವ್ಯಕ್ತಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ ಆತ ಮಾತ್ರ ಬಸ್ ಇಳಿಯುವಂತೆ ಕೂಗಾಡುತ್ತಿದ್ದ.

ಕೊನೆಗೂ ಸ್ಥಳದಿಂದ ಕಾಲ್ಕಿತ್ತ ಭೂಪ

ಬಹಳ ಹೊತ್ತು ಗಲಾಟೆ ಮಾಡಿ, ಪ್ರಯಾಣಿಕರ ತಾಳ್ಮೆ ಪರೀಕ್ಷಿಸಿದ ಈ ಕುಡುಕ, ಕೊನೆಗೆ ಸ್ಥಳೀಯರ ಗದರಿಕೆ ಮತ್ತು ಪೊಲೀಸರಿಗೆ ದೂರು ನೀಡುವ ಎಚ್ಚರಿಕೆಯ ನಂತರ ಅಲ್ಲಿಂದ ಕಾಲ್ಕಿತ್ತಿದ್ದಾನೆ. ವ್ಯಕ್ತಿ ಹೋದ ನಂತರ ಬಸ್ ಚಾಲಕರು ನಿಟ್ಟುಸಿರು ಬಿಟ್ಟು ಬಸ್ ಚಲಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸುವವರಿಗೆ ಬಿಗ್ ಶಾಕ್, 8 ಲಕ್ಷಕ್ಕೂ ಅಧಿಕ ದಂಡ ವಸೂಲಿ!
ಬೆಂಗಳೂರು: ಲೈಸನ್ಸ್‌ ಕೊಡಬೇಕಾದ್ರೆ 2.30 ಕೋಟಿ ಲಂಚ, ಹಣ ಪಡೆಯವಾಗಲೇ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ!