
ಗದಗ (ಸೆ.12): ಈದ್ ಮಿಲಾದ್ ದಿನದಂದು ಕಾರ್ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಉದ್ಧಟತನ ಮೆರೆದ ಇಬ್ಬರು ಅಪ್ರಾಪ್ತರ ವಿರುದ್ಧ ವಕಾಲತ್ತು ವಹಿಸದಿರಲು ಗದಗ ಜಿಲ್ಲಾ ವಕೀಲರ ಸಂಘ ಒಮ್ಮತದ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ್ ಕಲ್ಲೂರು ಏಷ್ಯನೆಟ್ ಸುವರ್ಣ ನ್ಯೂಸ್ಗೆ ತಿಳಿಸಿದ್ದು, ಇದೇ ಸೆಪ್ಟೆಂಬರ್ 5, 2025 ರಂದು ನಡೆದ ಈ ಘಟನೆಯಲ್ಲಿ, ಇಬ್ಬರು ಅಪ್ರಾಪ್ತರು ತಮ್ಮ ಕಾರಿನ ನಂಬರ್ ಪ್ಲೇಟ್ಗೆ ಪಕ್ಕದಲ್ಲಿ 5/9/25 ದಿನಾಂಕ ನಮೂದಿಸಿ ಪಾಕ್ ಧ್ವಜವನ್ನು ಪ್ರದರ್ಶಿಸಿದ್ದರು. ಈ ಘಟನೆಯ ಫೋಟೋವನ್ನು 'ತಹಸೀಮ್' ಎಂಬ ಇನ್ಸ್ಟಾಗ್ರಾಮ್ ಐಡಿಯಿಂದ ಹಂಚಿಕೆ ಮಾಡಲಾಗಿದ್ದು, 'ಅಬ್ದುಲ್' ಎಂಬ ಮತ್ತೊಂದು ಖಾತೆಯಿಂದಲೂ ಶೇರ್ ಮಾಡಲಾಗಿತ್ತು.
ಫೋಟೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ಗದಗ ಶಹರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಈ ಮಧ್ಯೆ, ಗದಗ ಜಿಲ್ಲಾ ವಕೀಲರ ಸಂಘವು ಆರೋಪಿಗಳ ಪರ ವಕಾಲತ್ತು ವಹಿಸದಿರಲು ತೀರ್ಮಾನಿಸಿದ್ದು, ಈ ಘಟನೆಯು ಜಿಲ್ಲೆಯಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ