ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ವಾಮೀಜಿ ಅಸಮಾಧಾನ

Published : Nov 17, 2020, 04:41 PM IST
ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ವಾಮೀಜಿ ಅಸಮಾಧಾನ

ಸಾರಾಂಶ

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಆದ್ರೆ, ಇದಕ್ಕೆ ಅಸಮಾಧಾನಗಳು ವ್ಯಕ್ತವಾಗುತ್ತಿವೆ.

ಗದಗ, (ನ.17): ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಆದೇಶಕ್ಕೆ ಪರ-ವಿರೋಧಗಳು ಚರ್ಚೆಯಾಗುತ್ತಿವೆ.

 ಕೆಲವರು ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಸಂತಸ ವ್ಯಕ್ತಪಡಿಸಿದ್ರೆ, ಇನ್ನೂ ಕೆಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

 ಹೌದು...ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಗದಗನ ತೋಂಟದಾರ್ಯ ಮಠದ ಶ್ರೀ ಡಾ. ಸಿದ್ಧರಾಮ ಸ್ವಾಮೀಜಿಗಳು
ಅಸಮಾಧಾನಗೊಂಡಿದ್ದಾರೆ. 

'ವೀರಶೈವ-ಲಿಂಗಾಯತ ನಿಗಮ‌ ಸ್ಥಾಪನೆ ನಾನು ಸ್ವಾಗತ ಮಾಡಲ್ಲ'

ಸರ್ಕಾರ ಒಂದಷ್ಟು ಸಂಘಟನೆಗಳಿಗೆ ಮನ್ನಣೆ ನೀಡಿದೆ ಎಂದು ಅನಿಸುತ್ತದೆ. ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಯಾವುದೇ ಸ್ಪಷ್ಟತೆ ಇಲ್ಲ. ಯಾವುದೇ ಗೊತ್ತು ಗುರಿಗಳು ಸಹ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.

ವೀರಶೈವ- ಲಿಂಗಾಯತ ನಿಗಮದಿಂದ ಯಾರಿಗೆ ಪ್ರಯೋಜನ..? ಇದರ ಫಲಾನುಭವಿಗಳು ಯಾರು ಅಂತಾ ಸ್ಪಷ್ಟತೆ ಇಲ್ಲ. ನಿಗಮಕ್ಕೆ ಅನುದಾನ ಸಹ ಘೋಷಣೆ ಮಾಡಿಲ್ಲ. ಸಣ್ಣಪುಟ್ಟ ಅನುದಾನ ಘೋಷಣೆ ಮಾಡಿದರೆ ಪ್ರಯೋಜನ ಇಲ್ಲ ಎಂದರು.

 ಈ ನಿಗಮದ ಪ್ರಯೋಜನ ವೀರಶೈವರಿಗೋ..? ಅಥವಾ ಲಿಂಗಾಯತರಿಗೋ..? ವೀರಶೈವ- ಲಿಂಗಾಯತ ಅಂತಾ ಪ್ರಮಾಣ ಪತ್ರವನ್ನು ಹೊಂದಿದವರಿಗೆ ಮಾತ್ರ ಎನ್ನುವ ಕುರಿತು ಸ್ಪಷ್ಟತೆ ಇಲ್ಲ ಎಂದು ತಿಳಿಸಿದರು.

ನಿಯಮ ಕುರಿತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣೆ ಮಾಡಬೇಕು. ಕಡಿಮೆ ಅನುಧಾನ ಬಿಡುಗಡೆ ಮಾಡಿದ್ರೆ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಲಿಂಗಾಯತರಿಗೆ ಪ್ರಯೋಜನ ಇಲ್ಲ.ಮಹಾರಾಷ್ಟ್ರ ಸರ್ಕಾರದ ಬಹುಸಂಖ್ಯಾತ ಮರಾಠರಿಗೆ ಅಭಿವೃದ್ಧಿ ನಿಗಮ ಮಾಡದೇ,  ಮೀಸಲಾತಿ ಘೋಷಣೆ ಮಾಡಿದೆ ಎಂದು ಹೇಳಿದರು.

ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲಿ ಸಹ  ಬಹುಸಂಖ್ಯಾತ ಲಿಂಗಾಯತರಿಗೆ ಶೇಕಡಾ 16 ರಷ್ಟು ಮೀಸಲಾತಿ ಘೋಷಣೆ ಮಾಡಬೇಕು ಎಂದು ಡಾ. ಸಿದ್ಧರಾಮ ಸ್ವಾಮೀಜಿ ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ