ಗಣೇಶ ವಿಸರ್ಜನೆ ವೇಳೆ ಗಲಾಟೆ: ದೊಣ್ಣೆ ಹಿಡಿದು ಪರಸ್ಪರ ಬಡಿದಾಡಿಕೊಂಡ ಎರಡು ಗ್ರಾಮಗಳ ಜನರು!

Published : Sep 24, 2023, 02:14 PM IST
ಗಣೇಶ ವಿಸರ್ಜನೆ ವೇಳೆ ಗಲಾಟೆ: ದೊಣ್ಣೆ ಹಿಡಿದು ಪರಸ್ಪರ ಬಡಿದಾಡಿಕೊಂಡ ಎರಡು ಗ್ರಾಮಗಳ ಜನರು!

ಸಾರಾಂಶ

ಗಣೇಶ ವಿಸರ್ಜನೆ ವೇಳೆ ಎರಡು ಗ್ರಾಮಗಳ ಜನರು ಪರಸ್ಪರ ಬಡಿದಾಡಿಕೊಂಡ ಘಟನೆ ಆನೇಕಲ್ ತಾಲ್ಲೂಕಿನ ಚಿನ್ನಯ್ಯನ ಪಾಳ್ಯ ಹಾಗೂ ಸಿದ್ದನಪಾಳ್ಯ ಗ್ರಾಮದಲ್ಲಿ ನಡೆದಿದೆ.

ಆನೇಕಲ್ (ಸೆ.24): ಗಣೇಶ ವಿಸರ್ಜನೆ ವೇಳೆ ಎರಡು ಗ್ರಾಮಗಳ ಜನರು ಪರಸ್ಪರ ಬಡಿದಾಡಿಕೊಂಡ ಘಟನೆ ಆನೇಕಲ್ ತಾಲ್ಲೂಕಿನ ಚಿನ್ನಯ್ಯನ ಪಾಳ್ಯ ಹಾಗೂ ಸಿದ್ದನಪಾಳ್ಯ
ಗ್ರಾಮದಲ್ಲಿ ನಡೆದಿದೆ.

ಗಣೇಶ ವಿಸರ್ಜನೆ ಮಾಡಿ ವಾಪಸ್ಸು ಬರುತ್ತಿದ್ದ ಚಿನ್ನಯ್ಯನಪಾಳ್ಯ ಯುವಕರ ತಂಡ. ಈ ವೇಳೆ ದಾರಿ ಮಧ್ಯೆ ವಿನಾಯಕ ಗೆಳೆಯರ ಬಳಗದ ಯುವಕರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ. ಜಗಳ ವಿಕೋಪಕ್ಕೆ ತಿರುಗಿ ದೊಣ್ಣೆಗಳನ್ನು ಹಿಡಿದು ಪರಸ್ಪರ ಬಡಿದಾಡಿಕೊಂಡ ಗ್ರಾಮಸ್ಥರು. ಗಲಾಟೆಯಲ್ಲಿ ಎರಡೂ ಕಡೆಯವರಿಗೆ ಗಂಭೀರ ಗಾಯಗಳಾಗಿವೆ. 

ಗಾಯಾಳುಗಳನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ದೌಡಾಯಿಸಿದ ಆನೇಕಲ್ ಪೊಲೀಸರು. ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸದ್ಯ ಗ್ರಾಮಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಬೂದಿಮುಚ್ಚಿದ ಕೆಂಡದಂತಾಗಿರುವ ಗ್ರಾಮಗಳು. ಎರಡು ಕಡೆಯ ಗ್ರಾಮಸ್ಥರು ಠಾಣೆಯ ಮೆಟ್ಟಿಲೇರಿದ್ದಾರೆ. ಠಾಣೆ ಮುಂದೆ ಜಮಾಯಿಸಿರುವ ಗ್ರಾಮಸ್ಥರು. ಯಾವುದೇ ಅಹಿತಕರ ನಡೆಯದಂತೆ ಬಿಗಿ ಭದ್ರತೆ ಕೈಗೊಂಡಿರುವ ಪೊಲೀಸರು. 

ವಿಜಯಪುರ: ಹರಾಜಿನಲ್ಲಿ ಬರೋಬ್ಬರಿ ₹1.50 ಲಕ್ಷಕ್ಕೆ ಗಣೇಶನ ಲಡ್ಡು ಸೇಲ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!