
ಕೊಪ್ಪಳ (ಡಿ.24): ಅಯೋದ್ಯೆಯಂತೆ ಅಂಜನಾದ್ರಿಯೂ ಅಭಿವೃದ್ದಿ ಪಡಿಸುತ್ತೇನೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭರವಸೆ ನೀಡಿದರು.
ಕಳೆದ ಮೂರು ದಿನಗಳ ಹಿಂದೆ ಹನುಮಮಾಲಾ ಧಾರಣೆ ಮಾಡಿದ್ದ ಶಾಸಕ ಜನಾರ್ದನ ರೆಡ್ಡಿ, ಇಂದು ಕೊಪ್ಪಳದ ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ಮಾಡಿ, ಆಂಜನೇಯ ದರ್ಶನ ಪಡೆದರು. ಬಳಿಕ ಮಾಧ್ಯಮ ಪ್ರತಿನಿಯೊಂದಿಗೆ ಮಾತಾನಾಡಿದ ಅವರು,
ಸೋನಿಯಾಗೆ ತಲೆಬಾಗದ್ದಕ್ಕೆ ಜೈಲಿಗೆ ಹೋಗಬೇಕಾಯ್ತು: ರೆಡ್ಡಿ
ಕಳೆದ ಬಾರಿ ಲೋಕಕಲ್ಯಾಣಕ್ಕಾಗಿ ಹನುಮಮಾಲೆ ಹಾಕಿಕೊಂಡಿದ್ದೆ. ಈ ಬಾರಿಯೂ ಹನುಮ ಮಾಲೆ ಹಾಕಿಕೊಂಡಿದ್ದೇನೆ. ಗಂಗಾವತಿ ಕ್ಷೇತ್ರವನ್ನು ಮತ್ತೆ ಅಭಿವೃದ್ದಿಗಾಗಿ ಸಂಕಲ್ಪ ಮಾಡಿದ್ದೇನೆ. ಕೇಂದ್ರ ಸರ್ಕಾರ ಅಂಜನಾದ್ರಿಗೆ ಅನುದಾನ ನೀಡುತ್ತಾರೆ ಎಂಬ ವಿಶ್ವಾಸವಿದೆ. ಜನವರಿ 22 ರಂದು ಅಯೋದ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ. ಅಂಜನಾದ್ರಿಯಲ್ಲೂ ಪೂಜೆ ನಡೆಯಲಿದೆ. ಭಕ್ತರಿಗೆ ಅನುಕೂಲವಾಗುವಂತೆ ಇದರ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುತ್ತದೆ. ಇನ್ನಾರು ತಿಂಗಳಲ್ಲಿ ಅಂಜನಾದ್ರಿಯಲ್ಲಿ ರೂಪ್ ವೇ ನಿರ್ಮಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಂಜನಾದ್ರಿಯಲ್ಲಿ ಭೂಸ್ವಾದೀನಕ್ಕಾಗಿ 60 ಕೋಟಿ ಬಿಡುಗಡೆ ಆಗಿದೆ. ಭೂಸ್ವಾದೀನದ ಬಗ್ಗೆ ಜಿಲ್ಲಾಧಿಕಾರಿ ಜೊತೆಯಲ್ಲಿ ಚರ್ಚೆ ಮಾಡುವೆ. ಮುಂದಿನ ದಿನದಲ್ಲಿ ಹನುಮಮಾಲಾ ವಿಸರ್ಜನೆ ಸಂದರ್ಭದಲ್ಲಿ ಇನ್ನಷ್ಟು ವ್ಯವಸ್ಥಿತವಾಗಿ ನಡೆಸಲು ಚಿಂತನೆ ನಡೆಸಲಾಗಿದೆ. ಗಂಗಾವತಿಯಿಂದ ಹಿಟ್ನಾಳವರೆಗೂ ರಸ್ತೆ ಬದಿ ದೀಪಗಳ ಅಳವಡಿಸಲಾಗಿದೆ. ಅದಕ್ಕಾಗಿ ಕೆಕೆಆರ್ ಡಿಬಿಯಿಂದ 40 ಕೋಟಿ ರೂಪಾಯಿ ಅನುದಾನ ಬಿಡುಗಡೆ ಆಗಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ