
ಬೆಂಗಳೂರು(ನ.19): ಜೆನೆಟಿಕ್ ಮತ್ತು ಸ್ಟೆಮ್ ಸೆಲ್ ಥೆರಪಿಯಿಂದ ವಂಶವಾಹಿ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಕುಲಪತಿ ಡಾ. ಸಚ್ಚಿದಾನಂದ ಹೇಳಿದ್ದಾರೆ.
ಅಗರವಾಲ್ ಆಸ್ಪತ್ರೆ, ಜೀನ್ ಸಂಶೋಧನಾ ಸಂಸ್ಥೆ, ಜೀನ್ ಮತ್ತು ಸ್ಟೆಮ್ ಸೆಲ್ ಥೆರಪಿ ಕುರಿತು ನಿಮಾನ್ಸ್ ಸಭಾಂಗಣದಲ್ಲಿ ನಡೆದ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಂಶವಾಹಿ ರೋಗಗಳನ್ನು ಪತ್ತೆ ಹಚ್ಚಲು ಜೆನೆಟಿಕ್ ಥೆರಪಿಯಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಜೆನೆಟಿಕ್ ಥೆರಪಿ ಸಂಶೋಧನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು. ಈ ಮೂಲಕ ವಂಶ ಪಾರ್ಯಂಪರ್ಯವಾಗಿ ಬರುವ ರೋಗಗಳನ್ನು ತಡೆಗಟ್ಟಲು ಪ್ರಯತ್ನಿಸಬೇಕು ಎಂದು ಕುಲಪತಿ ಡಾ. ಸಚ್ಚಿದಾನಂದ ಸಲಹೆ ನೀಡಿದರು.
ವಿಚಾರ ಸಂಕಿರಣದಲ್ಲಿ ಅಂತಾರಾಷ್ಟ್ರೀಯ ಜೆನೆಟಿಕ್ ತಜ್ಞರಾದ ಟೊರೆಂಟೊದ ಡಾ. ಆರ್ಮಾನ್ ಕೇಟಿಂಗ್, ಡಾ.ಜಾನ್ ಕ್ರಿಡ್ಮನ್, ನೆದರ್ಲ್ಯಾಂಡ್ ನ ಡಾ. ಬೊರಿಸ್ ಕ್ರಮೇರ್, ಲಂಡನ್ನಿನ ಡಾ. ರಘುವಿಂದರ್ ಗಂಭೀರ್ ಜೆನೆಟಿಕ್ ಸಂಶೋಧನೆಯಲ್ಲಿ ಆಗಿರುವ ಬೆಳವಣಿಗೆ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಗರವಾಲ್ ಆಸ್ಪತ್ರೆಯ ಪಂಕಜ್ ಸೋಂಧಿ, ಸುಮಾರು 800 ವಿದ್ಯಾರ್ಥಿಗಳು ಹಾಗೂ 200 ಪ್ರಾಧ್ಯಾಪಕರು ಪಾಲ್ಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ