ಅಂಬಿ ಅಗಲಿಕೆಗೆ ಸೋನಿಯಾ ಶೋಕ ಸಂದೇಶ ಪತ್ರ

By Web DeskFirst Published Nov 26, 2018, 2:39 PM IST
Highlights

ರೆಬೆಲ್ ಸ್ಟಾರ್ ಅಂಬಿ ಅಗಲಿಕೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಶೋಕ ಸಂದೇಶ ಪತ್ರ.

ಬೆಂಗಳೂರು, (ನ.26): ಖ್ಯಾತ ನಟ, ಮಾಜಿ ಸಚಿವ ಅಂಬರೀಶ್​ ಇನ್ನು ನೆನಪು ಮಾತ್ರ. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂಬಿ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋನಲ್ಲಿ ನಡೆಯಲಿದೆ.

ಅದಕ್ಕೂ ಮುನ್ನ ಕಂಠೀರವ ಸ್ಟೇಡಿಯಂನಲ್ಲಿ ಅನೇಕ ಗಣ್ಯರು, ಅಭಿಮಾನಿಗಳು ಅಂತಿಮ ದರ್ಶನ ಪಡೆದರು. ಈ ವೇಳೆ, ದೆಹಲಿಯಿಂದ ಬಂದಿದ್ದ ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಬಾ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರು ಅಂಬರೀಶ್ ಅಂತಿಮ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಶೋಕ ಸಂದೇಶದ ಪತ್ರವನ್ನು ಅಂಬರೀಶ್ ಪುತ್ರ ಅಭಿಷೇಕ್ ಗೌಡ ಅವರಿಗೆ ಹಸ್ತಾಂತರಿಸಿದರು.

ಈ ವೇಳೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಇದ್ದರು.

click me!